Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಬಳ ವಿಳಂಭ, ಕೆಲಸದಲ್ಲಿ ತಾರತಮ್ಯಕ್ಕೆ...

ಸಂಬಳ ವಿಳಂಭ, ಕೆಲಸದಲ್ಲಿ ತಾರತಮ್ಯಕ್ಕೆ ವಿರೋಧ: ಡಿ'ಗ್ರೂಪ್ ನೌಕರರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Dec 2018 9:06 PM IST
share
ಸಂಬಳ ವಿಳಂಭ, ಕೆಲಸದಲ್ಲಿ ತಾರತಮ್ಯಕ್ಕೆ ವಿರೋಧ: ಡಿಗ್ರೂಪ್ ನೌಕರರಿಂದ ಪ್ರತಿಭಟನೆ

ಪುತ್ತೂರು, ಡಿ. 15: ನಿಗದಿತ ದಿನದೊಳಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ. ಕೆಲಸದ ವಿಚಾರದಲ್ಲಿ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ. ತಿಂಗಳಲ್ಲಿ 4 ರಜೆಗಿಂತ ಜಾಸ್ತಿ ಮಾಡಿದಲ್ಲಿ ಸಂಬಳ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿಸಿ ಪುತ್ತೂರಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ದಿನಗೂಲಿ ನೌಕರರು ಶನಿವಾರ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ರಾಜು ಹೊಸ್ಮಠ ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ದಿನಗೂಲಿ ನೌಕರರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ. ತಿಂಗಳಲ್ಲಿ 4 ರಜೆ ಇದ್ದು, ಒಂದು ರಜೆ ಜಾಸ್ತಿ ಯಾದರೂ ಸಂಬಳ ಕಡಿತಗೊಳಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಪಿಯುಸಿ ಮತ್ತು ಪದವಿ ಶಿಕ್ಷಣ ಪಡೆದವರು ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ಸತ್ಕಾರ (ರಿಷೆಪ್ಸಕ್ಷನ್) ಹುದ್ದೆಗೆ ಅವರನ್ನು ನೇಮಿಸಿಕೊಳ್ಳದೆ ಮೇಲ್ಜಾತಿಯವರನ್ನು ನೇಮಕ ಮಾಡುವ ಮೂಲಕ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ' ಎಂದು ಆರೋಪಿಸಿದರು. 

ಹಾಸನದ ಶ್ರೀಕಾಂತ್ ಮತ್ತು ಉಡುಪಿಯ ಮಹಾಲಸ ಸಂಸ್ಥೆಯ ರಮೇಶ್ ಪೈ ಅವರು ಪುತ್ತೂರು ಸರ್ಕಾರಿ ಆಸ್ಪತ್ರೆಯ ಡಿಗ್ರೂಪ್ ನೌಕರರ ಗುತ್ತಿಗೆ ವಹಿಸಿಕೊಂಡಿದ್ದು, ನೌಕರರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗಳಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಗುತ್ತಿಗೆದಾರರು ಬೆದರಿಕೆಯೊಡ್ಡುತ್ತಿದ್ದಾರೆ. ಅವರಿಗೆ ತಾಖತ್ತಿದ್ದರೆ ಕೆಲಸದಿಂದ ತೆಗದು ಹಾಕಿ ನೋಡಲಿ ಎಂದು ಸವಾಲು ಹಾಕಿದರು. 

ಡಿ ಗ್ರೂಪ್ ನೌಕರರಿಗೆ ಸಂಬಳ ಜಾಸ್ತಿ ಮಾಡಬೇಕು. ಇಎಸ್‍ಐ,ಪಿಎಫ್ ನೀಡಬೇಕು,ನೌಕರಿಯನ್ನು ಖಾಯಂಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ ಅವರು ಡಿ.ಗ್ರೂಪ್ ನೌಕರರಿಗೆ ನ್ಯಾಯ ಸಿಗದಿದ್ದರೆ ಸಾವಿರ ಮಂದಿಯನ್ನು ಸೇರಿಸಿ ಆಸ್ಪತ್ರೆಯ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಸುಧಾಕರ್ ಕರ್ಕುಂಜ,ಡಿ.ಗ್ರೂಪ್ ನೌಕರರಾದ ಅಕ್ಕಮ್ಮ,ಲಕ್ಷ್ಮೀ,ಹೇಮ,ತಿಮ್ಮಪ್ಪ,ಹುಕ್ರಪ್ಪ,ಬೇಬಿ, ಸುಶೀಲ,ಆಶಾಲತಾ,ಸುಶೀಲಾ ಆನಂದ್,ಸಂಜೀವ ಅವರು ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಿದರು. ದಲಿತ್ ಸೇವಾ ಸಮಿತಿಯ ಪುತ್ತೂರು ತಾಲೂಕು ಸಮಿತಿಯ ಉಪಾಧ್ಯಕ್ಷ ಮನೋಹರ್ ಕೋಡಿಜಾಲು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X