Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿರ್ಭಯಾ ಯೋಜನೆ ಅಡಿ ಸೌಲಭ್ಯ:...

ನಿರ್ಭಯಾ ಯೋಜನೆ ಅಡಿ ಸೌಲಭ್ಯ: ಮಹಿಳೆಯರಿಗಾಗಿ ಬಸ್, ಲಘು ಮೋಟಾರು ವಾಹನಗಳ ಉಚಿತ ತರಬೇತಿ

ವಾರ್ತಾಭಾರತಿವಾರ್ತಾಭಾರತಿ15 Dec 2018 10:22 PM IST
share

ಬೆಂಗಳೂರು, ಡಿ.15: ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ಚಾಲಕರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಇದೆ. ಆದರೆ, ಮಹಿಳಾ ಚಾಲಕರಿಲ್ಲದ ಕಾರಣ, ಉದ್ದೇಶಿತ ಯೋಜನೆಗೆ ಚಾಲನೆಯೇ ಸಿಕ್ಕಿಲ್ಲ. ಈಗ ಇದಕ್ಕೆ ಕಾಲ ಸನ್ನಿಹಿತವಾಗಿದ್ದು, ಮಹಿಳಾಮಣಿಗಳು ಭಾರಿ ಮತ್ತು ಲಘು ವಾಹನಗಳ ಚಾಲನೆಯತ್ತ ಮುಖ ಮಾಡುತ್ತಿದ್ದಾರೆ.

ಬಿಎಂಟಿಸಿಯು ನಿರ್ಭಯಾ ಯೋಜನೆ ಅಡಿ ನೀಡುತ್ತಿರುವ ಬಸ್ ಮತ್ತು ಲಘು ಮೋಟಾರು ವಾಹನಗಳ ಉಚಿತ ತರಬೇತಿಗೆ 115 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 12 ಜನ ಭಾರಿ ವಾಹನಗಳ ಚಾಲನಾ ತರಬೇತಿ ಪಡೆಯುತ್ತಿದ್ದಾರೆ. ತರಬೇತಿ ಪಡೆಯುತ್ತಿರುವ ಬಹುತೇಕ ಮಹಿಳೆಯರು ಬಿಎಂಟಿಸಿಗೆ ಸೇರ್ಪಡೆಗೊಳ್ಳಲು ಆಸಕ್ತಿ ಹೊಂದಿದ್ದಾರೆ.

ಉದ್ದೇಶಿತ ಯೋಜನೆ ಅಡಿ ನಿಗಮವು ಏಳೂವರೆ ಕೋಟಿ ರೂ. ವೆಚ್ಚದಲ್ಲಿ ಸಾವಿರ ಮಹಿಳೆಯರಿಗೆ ಚಾಲನಾ ತರಬೇತಿ ನೀಡುವ ಗುರಿ ಹೊಂದಿದೆ. ಯೋಜನೆಗೆ ಆರಂಭದಿಂದಲೂ ಉತ್ತಮ ಸ್ಪಂದನೆ ದೊರೆತಿರಲಿಲ್ಲ. ಆದರೆ, ಇತ್ತೀಚೆಗೆ ಬೇಡಿಕೆ ಹೆಚ್ಚಿದೆ. ಈವರೆಗೆ 115 ಮಹಿಳೆಯರು ಹೆಸರು ನೋಂದಾಯಿಸಿದ್ದು, 103 ಮಹಿಳೆಯರು ಲಘು ಮತ್ತು 12 ಅಭ್ಯರ್ಥಿಗಳು ಭಾರೀ ವಾಹನಗಳ ಚಾಲನಾ ತರಬೇತಿ ಪಡೆಯಲು ಮುಂದೆ ಬಂದಿದ್ದಾರೆ ಎಂದರು.

ಲಘು ವಾಹನ ಚಾಲನೆ ತರಬೇತಿ ಪಡೆದವರು, ವರ್ಷದ ನಂತರ ಭಾರಿ ವಾಹನ ಚಾಲನಾ ತರಬೇತಿಗೆ ಹೆಸರು ನೋಂದಾಯಿಸಬಹುದು. ಅವರಿಗೆ ಸೂಕ್ತ ತರಬೇತಿ ನೀಡಿ, ಪರವಾನಗಿಯನ್ನೂ ನೀಡಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು. ರಾಜ್ಯದಲ್ಲಿ ಚಾಲನಾ ಪರವಾನಿಗೆ ಹೊಂದಿದವರಲ್ಲಿ ಮಹಿಳೆಯರು ಕೇವಲ ಶೇ.15ರಷ್ಟು ಇದ್ದಾರೆ. ಹಾಗಾಗಿ, ಕೆಎಸ್‌ಆರ್‌ಟಿಸಿ ಕೂಡ ಇದೇ ಮಾದರಿಯಲ್ಲಿ ಉಚಿತ ತರಬೇತಿ ನೀಡಲು ಉದ್ದೇಶಿಸಿದೆ. ಅಂದಹಾಗೆ ಬಿಎಂಟಿಸಿ ವ್ಯಾಪ್ತಿಯಲ್ಲಿ 6,677 ಬಸ್‌ಗಳಿದ್ದು, ಚಾಲಕಿಯರು ಇರುವುದು ಹೇರಳವಾಗಿದ್ದು, ಇದರಿಂದಾಗಿ ತರಬೇತಿಯನ್ನು ನೀಡಲಾಗುತ್ತಿದೆ.

ನಗರದ ರಸ್ತೆಗಳಲ್ಲೇ ಟ್ರೈನಿಂಗ್: ಎರಡು ಪಾಳಿಗಳಲ್ಲಿ ಚಾಲನಾ ತರಬೇತಿ ನಡೆಯಲಿದ್ದು, ಬೆಳಗ್ಗೆ 6ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 1ರಿಂದ ಸಂಜೆ 6ರವರೆಗೆ. ಲಘು ವಾಹನಗಳ ಚಾಲನಾ ತರಬೇತಿ ನಗರದ ರಸ್ತೆಗಳಲ್ಲಿ ಹಾಗೂ ಭಾರಿ ವಾಹನಗಳ ಚಾಲನಾ ತರಬೇತಿ ಮಾಗಡಿ ರಸ್ತೆಯ ವಡ್ಡರಹಳ್ಳಿಯಲ್ಲಿ ನಡೆಯುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 77609 91348 ಅನ್ನು ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X