Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏಕತೆ ಪ್ರತಿಮೆಗಳಲ್ಲಿ ಇಲ್ಲ, ಸಂವಿಧಾನದ...

ಏಕತೆ ಪ್ರತಿಮೆಗಳಲ್ಲಿ ಇಲ್ಲ, ಸಂವಿಧಾನದ ಆಶಯಗಳಲ್ಲಿದೆ: ಜ್ಞಾನಪ್ರಕಾಶನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ15 Dec 2018 10:33 PM IST
share
ಏಕತೆ ಪ್ರತಿಮೆಗಳಲ್ಲಿ ಇಲ್ಲ, ಸಂವಿಧಾನದ ಆಶಯಗಳಲ್ಲಿದೆ: ಜ್ಞಾನಪ್ರಕಾಶನಂದ ಸ್ವಾಮೀಜಿ

ಬೆಂಗಳೂರು, ಡಿ.15: ರಾಷ್ಟ್ರದ ಏಕತೆ ಎಂಬುದು ಪ್ರತಿಮೆಗಳಲ್ಲಿ ಇಲ್ಲ. ರಾಷ್ಟ್ರ ಏಕತೆ ಅಂಬೇಡ್ಕರ್ ನೀಡಿರುವ ಸಂವಿಧಾನದ ಆಶಯಗಳಲ್ಲಿದೆ ಎಂದು ಪ್ರಗತಿಪರ ಸ್ವಾಮಿ ಜ್ಞಾನಪ್ರಕಾಶನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ನಗರದ ಸಂಸ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಹರೀಶ್ ಕುಮಾರ್ ಸಂಪಾದಕತ್ವದ ಡಾ.ಸಿ.ಎಸ್.ದ್ವಾರಕಾನಾಥ್ ಅವರ ಲೇಖನಗಳ ಸಂಗ್ರಹ ‘ಮೂಖನಾಯಕ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂಬೇಡ್ಕರ್ ಎಲ್ಲರೂ ಸಮಾನವಾಗಿ ಬದುಕುವ ರೀತಿಯಲ್ಲಿ ಸಂವಿಧಾನದಲ್ಲಿ ಹಕ್ಕುಗಳನ್ನು ನೀಡಿದ್ದಾರೆ. ಅದನ್ನು ಜಾರಿ ಮಾಡುವುದರಿಂದ ಏಕತೆ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ ಎಂದರು.

ಭಾರತದಲ್ಲಿ ಅಂಬೇಡ್ಕರ್‌ರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಅಂಬೇಡ್ಕರ್ ನಿಂತ ನೀರಲ್ಲ, ನಿರಂತರವಾಗಿ ಹರಿಯುವ ಜ್ಞಾನದ ಅರಿವು. ಆದರೆ, ಇಂದಿನ ದಿನಗಳಲ್ಲಿ ಅವರನ್ನು ಒಂದು ಪ್ರತಿಮೆ, ಫೋಟೋಗಳಿಗೆ ಸೀಮಿತ ಮಾಡಲಾಗುತ್ತಿದೆ. ಅಲ್ಲದೆ, ಅವರನ್ನು ಒಂದು ಜಾತಿ, ಸಮುದಾಯಕ್ಕೆ ಮೀಸಲಿಡಲು ಪಟ್ಟಭದ್ರ ಹಿತಾಸಕ್ತಿಗಳು ಮುಂದಾಗಿದ್ದಾರೆ ಎಂದು ದೂರಿದರು.

ಲೇಖಕಿ ಪಲ್ಲವಿ ಇಡೂರ್ ಮಾತನಾಡಿ, ಕೃತಿಯು ಸಮಾಜದಲ್ಲಿನ ಆಧುನಿಕ ಅಸ್ಮಶ್ಯತೆಯ ಮುಖಗಳನ್ನು ಅನಾವರಣಗೊಳಿಸುತ್ತದೆ. ದೇಶದ ಸಾಮಾಜಿಕ ವ್ಯವಸ್ಥೆ, ಭೇದ-ಭಾವ ಕುರಿತ ಲೇಖನಗಳಿವೆ. ಅಲ್ಲದೆ, ನಮ್ಮಲ್ಲಿರುವ ಗುಲಾಮಗಿರಿ ಪದ್ಧತಿಯನ್ನು ದ್ವಾರಕಾನಾಥ್ ಅವರು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ನಾವು ನಮ್ಮನ್ನು ಪ್ರಶ್ನಿಸಿಕೊಳ್ಳದೇ ಮೂಕವಾಗಿ ಎಲ್ಲವನ್ನೂ ಒಪ್ಪಿಕೊಂಡು ಇದೇ ಸತ್ಯ ಎಂದು ನಡೆಯುತ್ತಿದ್ದೇವೆ. ಆದರೆ, ಇದನ್ನೇ ಬಂಡವಾಳವನ್ನಾಗಿಸಿಕೊಂಡ ಕೆಲವರು ಅಟ್ಟಹಾಸ ಮೆರೆಯುತ್ತಿರುವುದು ದುರದೃಷ್ಟಕರ ಎಂದರು. ಕಾರ್ಯಕ್ರಮದಲ್ಲಿ ವಕೀಲ ಸಿ.ಎಸ್.ದ್ವಾರಕಾನಾಥ್, ನಟ ಚೇತನ್ ಅಹಿಂಸಾ ಸೇರಿದಂತೆ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X