Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ:...

ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ: ಶ್ರೀ ಕಾವೇರಿ ಕೊಡವ ಅಶೋಷಿಯೇಶನ್‍ನಿಂದ ಚೆಕ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ15 Dec 2018 11:03 PM IST
share
ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ: ಶ್ರೀ ಕಾವೇರಿ ಕೊಡವ ಅಶೋಷಿಯೇಶನ್‍ನಿಂದ ಚೆಕ್ ವಿತರಣೆ

ಮಡಿಕೇರಿ, ಡಿ.15: ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳು ದಾನಿಗಳು ನೀಡುವ ಆರ್ಥಿಕ ಪರಿಹಾರವನ್ನು ಸದ್ಬಳಕೆ ಮಾಡಿಕೊಂಡು ಹೊಸ ಬದುಕು ಕಟ್ಟಿ ಕೊಳ್ಳಬೇಕೆಂದು ಮೈಸೂರಿನ ಶ್ರೀ ಕಾವೇರಿ ಕೊಡವ ಅಸೋಸಿಯೇಶನ್ ಈಸ್ಟ್ ಅಧ್ಯಕ್ಷ ಬಿ.ಎಂ.ದೇವಯ್ಯ ಸಲಹೆ ನೀಡಿದ್ದಾರೆ. 

ನಗರದ ಕೊಡವ ಸಮಾಜದ ವಾಣಿಜ್ಯ ಸಂಕೀರ್ಣದಲ್ಲಿರುವ ಕೊಡಗು ಸೇವಾ ಕೇಂದ್ರದಲ್ಲಿ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಶ್ರೀ ಕಾವೇರಿ ಕೊಡವ ಅಸೋಷಿಯೇಶನ್ ಈಸ್ಟ್, ಕೊಡಗು ಮಾಡೆಲ್ ಸ್ಕೂಲ್ ಮೈಸೂರು ಈ ಸಂಸ್ಥೆಗಳು ಸಂಗ್ರಹಿಸಿದ 2.5 ಲಕ್ಷ ರೂ. ಪರಿಹಾರದ ಚೆಕ್‍ಗಳನ್ನು ವಿತರಿಸಿ ಅವರು ಮಾತನಾಡಿದರು. 

ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಯಿಂದ ಭೂ ಕುಸಿತ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿ ಹಲವು ಕುಟುಂಬಗಳು ಸಂತ್ರಸ್ತವಾಗಿವೆ. ಜಿಲ್ಲೆಯಲ್ಲಾದ ಪ್ರಕೃತಿ ವಿಕೋಪಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಶ್ರೀ ಕಾವೇರಿ ಕೊಡವ ಅಸೋಷಿಯೇಶನ್ ಈಸ್ಟ್ ಸಂತ್ರಸ್ತರಿಗಾಗಿ ಮಿಡಿದ ಮನಸ್ಸುಗಳಿಂದ ಒಟ್ಟು 3 ಲಕ್ಷ ರೂ. ಸಂಗ್ರಹಿಸಿತ್ತು. ಮಾತ್ರವಲ್ಲದೇ, ಕೊಡಗು ಮಾಡೆಲ್ ಸ್ಕೂಲ್‍ನ ವಿದ್ಯಾರ್ಥಿಗಳು ಮುಕ್ತ ಮನಸ್ಸಿನಿಂದ 50 ಸಾವಿರ ರೂ. ನೆರವನ್ನು ಕೊಡಗು ಜಿಲ್ಲೆಗಾಗಿ ನೀಡಿದ್ದಾರೆ. ಈ ಹಣದಲ್ಲಿ ಕೊಡಗಿನ 7 ಸಂತ್ರಸ್ತ ಕುಟುಂಬಗಳಿಗೆ ಈ ಹಿಂದೆ ಮೈಸೂರಿನಲ್ಲಿ ಪರಿಹಾರವನ್ನು ನೀಡಲಾಗಿದೆ ಎಂದು ಬೊವ್ವಡಿರ ದೇವಯ್ಯ ಹೇಳಿದರು.

ಉಳಿದ 2.5 ಲಕ್ಷ ರೂ.ಗಳನ್ನು ತಲಾ 10 ಸಾವಿರದಂತೆ 25 ಕುಟುಂಬಗಳಿಗೆ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ಮಡಿಕೇರಿಗೆ ಆಗಮಿಸಿ ಚೆಕ್‍ಗಳನ್ನು ವಿತರಿಸುತ್ತಿದ್ದು, ಪರಿಹಾರದ ಹಣದಲ್ಲಿ ಬದುಕು ಕಟ್ಟಿಕೊಳ್ಳಲು ಚಿಂತಿಸಬೇಕೆಂದು ಸಲಹೆ ನೀಡಿದರಲ್ಲದೆ, ದಾನಿಗಳು ನೀಡುವ ಪರಿಹಾರದ ನೆರವನ್ನು ದುರುಪಯೋಗವಾಗದಂತೆ ಬಳಸಿಕೊಳ್ಳಬೇಕೆಂದು ದೇವಯ್ಯ ಕಿವಿಮಾತು ಹೇಳಿದರು.

ಕೊಡಗು ಮಾಡೆಲ್ ಸ್ಕೂಲ್‍ನಲ್ಲಿ 300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ‘ಮೈಸೂರು ಮಿತ್ರ’ ಮತ್ತು ‘ಸ್ಟಾರ್ ಆಫ್ ಮೈಸೂರು’ ಪತ್ರಿಕೆಯ ಪ್ರಧಾನ ಸಂಪಾದಕರಾದ ಕಲ್ಯಾಟಂಡ ಬಿ.ಗಣಪತಿ ಅವರು ಆರ್ಥಿಕ ಬೆನ್ನೆಲುಬಾಗಿದ್ದಾರೆ ಎಂದು ಸ್ಮರಿಸಿದ ಬಿ.ಎಂ. ದೇವಯ್ಯ, ಸಂತ್ರಸ್ತರಿಗೆ ನೆರವಾದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ದಾನಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು. ಕಳೆದ 12 ವರ್ಷಗಳ ಹಿಂದೆ ಮೈಸೂರಿನಲ್ಲಿ ಸ್ಥಾಪನೆಯಾದ ಶ್ರೀ ಕಾವೇರಿ ಕೊಡವ ಅಸೋಶಿಯೇಶನ್ ಈಸ್ಟ್ ಸಮಾಜ ಸೇವೆಯನ್ನು ಮೂಲ ಗುರಿಯಾಗಿ ಮಾಡಿಕೊಂಡಿದೆ. ಮಾತ್ರವಲ್ಲದೇ, ಕೊಡಗು ಮಾಡೆಲ್ ಸ್ಕೂಲ್ ಮೂಲಕ ವಿದ್ಯಾ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡಿದೆ ಎಂದು ಬಿ.ಎಂ. ದೇವಯ್ಯ ಹೇಳಿದರು.

ಶ್ರೀ ಕಾವೇರಿ ಕೊಡವ ಅಸೋಷಿಯೇಶನ್ ಈಸ್ಟ್‍ನ ಉಪಾಧ್ಯಕ್ಷ ಪುಲಿಯಂಡ ಎಸ್.ದೇವಯ್ಯ, ಕೊಡಗಿನಲ್ಲಿ ಘಟಿಸಿದ ಪ್ರಕೃತಿ ವಿಕೋಪವನ್ನು ನೆನೆದು ಕಣ್ಣೀರು ಸುರಿಸಿದರು. ಸಂಘ ಸಂಸ್ಥೆಗಳು ನೀಡುವ ಸಹಾಯ ಧನವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವಂತೆ ಹೇಳಿದ ಎಸ್. ದೇವಯ್ಯ, ತಾಯಿ ಕಾವೇರಿಯ ಆಶೀರ್ವಾದ ಸಂತ್ರಸ್ತ ಕುಟುಂಬಗಳ ಮೇಲಿರಲಿ ಎಂದು ಗದ್ಗರಿತರಾಗಿ ನುಡಿದರು.

ಮತ್ತೋರ್ವ ದಾನಿ ಟಿ. ನರಸೀಪುರದ ಗ್ರಾಮ ವಿದ್ಯೋದಯ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಹದೇವ ಸ್ವಾಮಿ ಮಾತನಾಡಿ, 400 ವರ್ಷಗಳಿಂದ ಟಿ. ನರಸೀಪುರದ ಜನತೆ ಕಾವೇರಿ ನೀರು ಕುಡಿಯುತ್ತಿದ್ದಾರೆ. ಜಿಲ್ಲೆಯಲ್ಲಿ ಘಟಿಸಿದ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಸಂತ್ರಸ್ತರಾದ ಕುಟುಂಬಗಳಿಗೆ ಸ್ಪಂದಿಸುವುದು ಸಂಸ್ಥೆಯ ಋಣವಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ವತಿಯಿಂದ 2.5 ಲಕ್ಷ ರೂ.ಗಳನ್ನು ತಲಾ 25 ಸಾವಿರದಂತೆ 10 ಕುಟುಂಬಗಳಿಗೆ ನೀಡಲಾಗುತ್ತಿದೆ ಎಂದು  ತಿಳಿಸಿದರು. ಪ್ರಕೃತಿ ವಿಕೋಪವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಆದರೆ ಜಿಲ್ಲೆಯ ಜನತೆ ಧೃತಿಗೆಡದೆ ಧೈರ್ಯದಿಂದ ಬದುಕು ಸಾಗಿಸಬೇಕು. ಸರಕಾರ, ಸಂಘ ಸಂಸ್ಥೆಗಳು, ದಾನಿಗಳು ಸದಾ ಕಾಲ ನಿಮ್ಮೊಂದಿಗೆ ಇರುತ್ತಾರೆ ಎಂದು ಅಭಯ ನೀಡಿದರು. ಸಂತ್ರಸ್ತ ಕುಟುಂಬಗಳ ಮಕ್ಕಳಿಗೆ ವಿದ್ಯಾಭ್ಯಾಸದ ಅಗತ್ಯವಿದ್ದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಮಹದೇವ ಸ್ವಾಮಿ ತಿಳಿಸಿದರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ತಲಕಾವೇರಿ ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಕೊಡಗು ಸೇವಾ ಕೇಂದ್ರ ಆರಂಭಿಸಿದ ಸಂದರ್ಭ ಹಲವು ಟೀಕೆಗಳು ವ್ಯಕ್ತವಾದವು. ಆದರೆ ಸೇವಾ ಕೇಂದ್ರ ಯಾರಿಂದಲೂ ಹಣ ಸ್ವೀಕರಿಸದೇ, ನೇರವಾಗಿ ದಾನಿಗಳ ಮೂಲಕವೇ ಸಂತ್ರಸ್ತರಿಗೆ ನೆರವು ಒದಗಿಸುತ್ತಿದೆ. ಸೇವಾ ಕೇಂದ್ರದ ಮೂಲಕ ಸಂತ್ರಸ್ತರ ಹೆಸರುಗಳ ಪಟ್ಟಿಯನ್ನು ನೆರವು ನೀಡಲು ಮುಂದಾಗುವ ಸಂಘ ಸಂಸ್ಥೆಗಳಿಗೆ ನೀಡಲಾಗುತ್ತಿದ್ದು, ಪರಿಹಾರದ ಮೊತ್ತವನ್ನು ದಾನಿಗಳೇ ನಿರ್ಧರಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಬಳಿಕ ಪ್ರಕೃತಿ ವಿಕೋಪದಲ್ಲಿ ಸಂಪೂರ್ಣವಾಗಿ ತತ್ತರಿಸಿರುವ ಮಕ್ಕಂದೂರು, ಮುಕ್ಕೋಡ್ಲು, ದೇವಸ್ತೂರು, ಕಾಲೂರು, ಹಬ್ಬೆಟ್ಟಗೇರಿ, ಹಮ್ಮಿಯಾಲ, ಸೂರ್ಲಬ್ಬಿ, ಮದೆನಾಡು, ಮೊಣ್ಣಂಗೇರಿ ಸೇರಿದಂತೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಒಟ್ಟು 35 ಅರ್ಹ ಸಂತ್ರಸ್ತ ಕುಟುಂಬಗಳಿಗೆ ಶ್ರೀ ಕಾವೇರಿ ಕೊಡವ ಅಸೋಷಿಯೇಶನ್, ಕೊಡಗು ಮಾಡೆಲ್ ಸ್ಕೂಲ್, ಗ್ರಾಮ ವಿದ್ಯೋದಯ ಶಿಕ್ಷಣ ಸಂಸ್ಥೆಯ ಪ್ರಮುಖರು ಸೇರಿದಂತೆ ಕಾರ್ಯಕ್ರಮದಲ್ಲಿದ್ದ ಗಣ್ಯರು ಪರಿಹಾರದ ಚೆಕ್‍ಗಳನ್ನು ವಿತರಿಸಿದರು.

ಈ ಸಂದರ್ಭ ಶ್ರೀ ಕಾವೇರಿ ಕೊಡವ ಅಸೋಷಿಯೇಶನ್‍ನ ಗೌರವ ಕಾರ್ಯದರ್ಶಿ ಕಡೇಮಾಡ ಬೆಳ್ಯಪ್ಪ, ಜಂಟಿ ಕಾರ್ಯದರ್ಶಿ ಪಂದ್ಯಂಡ ಪದ್ಮ ಬೋಪಯ್ಯ, ಆಂತರಿಕ ಲೆಕ್ಕ ಪರಿಶೋಧಕ ಕೊಪ್ಪೀರ ಡಿ. ಪೊನ್ನಪ್ಪ, ಸದಸ್ಯರಾದ ಕಂಜಿತಂಡ ಮನು ಅಯ್ಯಪ್ಪ, ಪಟ್ಟಮಾಡ ಅರುಣ, ಗ್ರಾಮ ವಿದ್ಯೋದಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ರಾಮಚಂದ್ರ, ಸಹಾಯಕ ಪ್ರಾಧ್ಯಾಪಕಿ ಕೆ.ಎಂ. ನೀಲಮ್ಮ, ಇತಿಹಾಸ ವಿಭಾಗದ ಅಧ್ಯಾಪಕಿ ರಜಿನಿ, ಕೊಡಗು ಏಕೀಕರಣ ರಂಗದ ತಮ್ಮು ಪೂವಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X