Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಇಂದಿರಾ ಕ್ಯಾಂಟೀನ್...

ಚಿಕ್ಕಮಗಳೂರು: ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಪೊಲೀಸರಿಂದ ಅನುಚಿತ ವರ್ತನೆ; ಆರೋಪ

ಪೊಲೀಸರ ಅಮಾನತಿಗೆ ಜಿಪಂ ಅಧ್ಯಕ್ಷೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Dec 2018 6:21 PM IST
share
ಚಿಕ್ಕಮಗಳೂರು: ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಪೊಲೀಸರಿಂದ ಅನುಚಿತ ವರ್ತನೆ; ಆರೋಪ

ಚಿಕ್ಕಮಗಳೂರು, ಡಿ.16: ಸಚವ ಸ್ಥಾನದ ಶ್ರೇಯಾಂಕ ಹೊಂದಿದ್ದರೂ ದಲಿತ ಮಹಿಳೆ ಎಂಬ ಕಾರಣಕ್ಕೆ ಇತ್ತೀಚೆಗೆ ನಗರದಲ್ಲಿ ಹಮ್ಮಿಕೊಳ್ಳಲಾದ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಅವಮಾನ ಮಾಡಲಾಗಿದೆ. ಇದನ್ನು ಪ್ರಶ್ನಿಸಲು ಹೋದ ವೇಳೆ ಪೊಲೀಸರು ತನ್ನೊಂದಿಗೆ ಅನುಚಿತವಾಗಿ ವರ್ತಿಸಿ ಬಂದಿಸಿ ಅವಮಾನಿಸಿದ್ದಾರೆ. ಆದ್ದರಿಂದ ತಪ್ಪಿತಸ್ಥ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ನಗರದಲ್ಲಿ ಸರಕಾರಿ ಪ್ರಾಯೋಜಿತ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆದಿದ್ದು, ಶಿಷ್ಟಾಚಾರದಂತೆ ಜಿಲ್ಲಾ ಪಂಚಾಯತ್‍ನ ಮಹಿಳಾ ಅಧ್ಯಕ್ಷೆಯಾದ ತನಗೆ ಆಹ್ವಾನ ನೀಡಬೇಕಿತ್ತು. ಆದರೆ ಕಾಂಗ್ರೆಸ್ ಮುಖಂಡರ ಹುನ್ನಾರದಿಂದಾಗಿ ನಗರಸಭೆ ಅಧಿಕಾರಿಗಳು ತನಗೆ ಆಹ್ವಾನ ನೀಡದೇ ಅವಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾನು ಜಿಲ್ಲಾಪಂಚಾಯತ್ ಸದಸ್ಯರು ಹಾಗೂ ತಾಪಂ ಅಧ್ಯಕ್ಷ, ಸದಸ್ಯರೊಂದಿಗೆ ಅಂದು ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸ್ಥಳಕ್ಕೆ ಈ ಬಗ್ಗೆ ಸ್ಪಷ್ಟನೆ ಕೇಳಲು ತೆರಳಿದ್ದೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೇ ದಲಿತ ಮಹಿಳೆ ಹಾಗೂ ಸಚಿವ ಸ್ಥಾನದ ಶ್ರೇಯಾಂಕ ಹೊಂದಿರುವ ಜನಪ್ರತಿನಿಧಿ ಎಂಬುದನ್ನೂ ಮರೆತು ಕೈ ಹಿಡಿದು ಎಳೆದಾಡಿದ್ದಾರೆ. ಸಾಲದೆಂಬಂತೆ ತನ್ನನ್ನು ದನಗಳನ್ನು ವಾಹನಕ್ಕೆ ತುಂಬುವಂತೆ ಪೊಲೀಸ್ ವಾಹನಕ್ಕೆ ತುಂಬಿಕೊಂಡು ಬಂಧಿಸಿ ಅವಮಾನಿಸಿದ್ದಾರೆಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‍ರವರ ಬಳಿ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದ ಕುರಿತು ವಿಚಾರಿಸಲು ಹೋಗಿದ್ದನ್ನೇ ನೆಪ ಮಾಡಿಕೊಂಡ ಪೊಲೀಸರು ವಿನಾಕಾರಣ ಬಂಧಿಸಿ ವಿವಾದ ಸೃಷ್ಟಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಕೂಗಿ ಸಣ್ಣ ವಿಷಯವನ್ನು ವಿವಾದ ಮಾಡಿದ್ದರೂ ಅವರ ಮೇಲೆ ಪೊಲೀಸರು ಯಾವುದೇ ಕ್ರಮ ವಹಿಸದೇ ತಾರತಮ್ಯ ನೀತಿ ಅನುಸರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯತ್‍ನ ಮಹಿಳಾ ಅಧ್ಯಕ್ಷರೆನ್ನದೇ ಚುನಾಯಿತ ಪ್ರತಿನಿಧಿಯಾದ ತನ್ನನ್ನೂ ಸೇರಿದಂತೆ ಜಿಪಂ, ತಾಪಂ ಜನಪ್ರತಿನಿಧಿಗಳೊಂದಿಗೆ ಪೊಲೀಸರು ಉಡಾಫೆಯಾಗಿ ವರ್ತಿಸುವ ಮೂಲಕ ತಮ್ಮ ಕಾನೂನು ಪರಿದಿಯನ್ನು ಉಲ್ಲಂಘಿಸಿ, ಬಸವನಹಳ್ಳಿ ಪೊಲೀಸ್ ಠಾಣೆಗೆ ಕರೆದು ಕೊಂಡು ಹೋಗಿ ನನ್ನನ್ನು ಅಗೌರವದಿಂದ ಕಂಡಿದ್ದಾರೆ. ತನ್ನೊಂದಿಗೆ ಅಗೌರವದಿಂದ ನಡೆದುಕೊಂಡ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಯಾರೆಂಬುದನ್ನು ಇಂದಿರಾ ಕ್ಯಾಂಟಿನ್ ಉದ್ಘಾಟನಾ ಸಮಾರಂಭದ ವೇಳೆ ಮಾಡಿದ ವೀಡಿಯೊ ಚಿತ್ರೀಕರಣದ ಮೂಲಕ ತಿಳಿಯಬಹುದು. ತಕ್ಷಣ ಅದನ್ನು ವಶಕ್ಕೆ ಪಡೆದು ಸಂಬಂಧಪಟ್ಟಂತಹ ಪೊಲೀಸರನ್ನು ತಕ್ಷಣ ಅಮಾನತು ಮಾಡಬೇಕೆಂದು ದೂರಿನಲ್ಲಿ ಅವರು ಎಸ್ಪಿಯನ್ನು ಒತ್ತಾಯಿಸಿದ್ದು, ಸೂಕ್ತ ಕ್ರಮ ವಹಿಸದಿದ್ದಲ್ಲಿ ಶಿಷ್ಠಾಚಾರ ಉಲ್ಲಂಘನೆ ಬಗ್ಗೆ ರಾಜ್ಯಪಾಲರು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X