Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಿಹಿಗೆಣಸು ಎಂದರೆ ತಾತ್ಸಾರ ಬೇಡ

ಸಿಹಿಗೆಣಸು ಎಂದರೆ ತಾತ್ಸಾರ ಬೇಡ

ಇದರ ಅದ್ಭುತ ಆರೋಗ್ಯ ಲಾಭಗಳ ಬಗ್ಗೆ ತಿಳಿದುಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ16 Dec 2018 6:21 PM IST
share
ಸಿಹಿಗೆಣಸು ಎಂದರೆ ತಾತ್ಸಾರ ಬೇಡ

ಹೆಚ್ಚಿನವರು ಸಿಹಿಗೆಣಸನ್ನು ಇಷ್ಟ ಪಡುತ್ತಾರೆ. ಅದನ್ನು ಅಡುಗೆಯಲ್ಲಿ ಬಳಸಬಹುದು ಅಥವಾ ಬೇಯಿಸಿ ನೇರವಾಗಿ ತಿನ್ನಬಹುದು. ಆದರೆ ಸಿಹಿಗೆಣಸಿನ ಆರೋಗ್ಯಲಾಭಗಳನ್ನು ತಿಳಿದವರು ಕಡಿಮೆ. ಪೌಷ್ಟಿಕಾಂಶಗಳ ಆಗರವಾಗಿರುವ ಇದನ್ನು ಹಲವಾರು ಖಾದ್ಯಗಳಲ್ಲಿ ಬಳಸಬಹುದು. ಇದು ನೀಡುವ ಆರೋಗ್ಯಲಾಭಗಳ ಕುರಿತು ಮಾಹಿತಿಗಳಿಲ್ಲಿವೆ.....

► ಉತ್ಕರ್ಷಣ ನಿರೋಧಕಗಳ ಗಣಿ

ಸಿಹಿಗೆಣಸು ಸಮೃದ್ಧ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದ್ದು,ಇವು ವಿವಿಧ ಕಾಯಿಲೆಗಳನ್ನು ತಡೆಯುವಲ್ಲಿ ನೆರವಾಗುತ್ತವೆ. ಅವು ಫ್ರೀ ರ್ಯಾಡಿಕಲ್ಸ್‌ಗಳಿಂದ ಉಂಟಾಗುವ ಹಾನಿಯ ವಿರುದ್ಧ ರಕ್ಷಣೆಯನ್ನು ನೀಡುತ್ತವೆ. ಸಿಹಿಗೆಣಸು ಸ್ವಲ್ಪ ಪ್ರಮಾಣದಲ್ಲಿ ಉರಿಯೂತ ನಿರೋಧಕ ಗುಣವನ್ನೂ ಹೊಂದಿದೆ. ಅದು ಮಿದುಳಿನ ಅಂಗಾಂಶಗಳಲ್ಲಿಯ ಉರಿಯೂತವನ್ನು ಕಡಿಮೆ ಮಾಡುತ್ತದೆ. ಮಧುಮೇಹ,ಕ್ಯಾನ್ಸರ್,ಹೃದ್ರೋಗಗಳು ಮತ್ತು ಅಧಿಕ ರಕ್ತದೊತ್ತಡದಂತಹ ದೀರ್ಘಕಾಲೀನ ರೋಗಗಳ ಅಪಾಯಗಳನ್ನೂ ಸಿಹಿಗೆಣಸು ತಗ್ಗಿಸುತ್ತದೆ.

► ಸಿ ಮತ್ತು ಎ ವಿಟಾಮಿನ್‌ಗಳ ಮೂಲವಾಗಿದೆ

ಸಿಹಿಗೆಣಸು ಇವೆರಡೂ ವಿಟಾಮಿನ್‌ಗಳನ್ನು ಒಳಗೊಂಡಿದ್ದು,ಇವು ಶರೀರದ ರೋಗ ನಿರೋಧಕ ವ್ಯವಸ್ಥೆಯ ಸೂಕ್ತ ಕಾರ್ಯ ನಿರ್ವಹಣೆಗೆ ಅತ್ಯಗತ್ಯವಾಗಿವೆ. ವಿಟಾಮಿನ್ ಫ್ಲೂ ಮತ್ತು ಶೀತದ ವಿರುದ್ಧ ರಕ್ಷಣೆ ನೀಡುತ್ತದೆ. ಅದು ಕಣ್ಣು,ಚರ್ಮ ಮತ್ತು ಮೂಳೆಗಳ ಆರೋಗ್ಯವನ್ನು ಕಾಯ್ದುಕೊಳ್ಳಲೂ ನೆರವಾಗುವ ಜೊತೆಗೆ,ಶರೀರದ ವಿವಿಧ ಅಂಗಾಂಗಗಳು ಸೂಕ್ತವಾಗಿ ಕಾರ್ಯ ನಿರ್ವಹಿಸುವಂತೆಯೂ ಮಾಡುತ್ತದೆ. ವಿಟಾಮಿನ್ ಸಿ ಶರೀರವನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸುವ ಬಿಳಿಯ ರಕ್ತಕಣಗಳನ್ನು ಹೆಚ್ಚಿಸುತ್ತದೆ.

► ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಹೆಚ್ಚಿಸುವುದಿಲ್ಲ

ಸಿಹಿಗೆಣಸು ಸಿಹಿಯಾಗಿರಬಹುದು,ಆದರೆ ಅದು ರಕ್ತದಲ್ಲಿಯ ಸಕ್ಕರೆ ಮಟ್ಟದ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುವುದಿಲ್ಲ. ಸಿಹಿಗೆಣಸಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರು ಅದು ರಕ್ತದಲ್ಲಿಯ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟಗಳಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ನೀಡುವುದಿಲ್ಲ. ನಾರು ಜೀರ್ಣಕ್ರಿಯೆಯನ್ನೂ ಹೆಚ್ಚಿಸುತ್ತದೆ ಮತ್ತು ಕರುಳನ್ನು ಆರೋಗ್ಯಯುತವಾಗಿರಿಸುತ್ತದೆ. ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿಯ ಸಕ್ಕರೆ ಮಟ್ಟಗಳನ್ನು ಕಾಯ್ದುಕೊಳ್ಳಲೂ ಅದು ನೆರವಾಗುತ್ತದೆ. ಹೆಚ್ಚು ನಾರು ಸೇವಿಸಿದಾಗ ಅದು ತುಂಬ ಹೊತ್ತು ಹಸಿವೆಯನ್ನುಂಟು ಮಾಡುವುದಿಲ್ಲ,ತನ್ಮೂಲಕ ನಾವು ಹೆಚ್ಚುವರಿ ಕ್ಯಾಲರಿಗಳನ್ನು ಸೇವಿಸುವುದನ್ನು ತಡೆಯುತ್ತದೆ. ಹೀಗೆ ದೇಹತೂಕವನ್ನು ಕಾಯ್ದುಕೊಳ್ಳಲೂ ಸಿಹಿಗೆಣಸು ನೆರವಾಗುತ್ತದೆ.

► ರಕ್ತದೊತ್ತಡವನ್ನು ಕ್ರಮಬದ್ಧಗೊಳಿಸುತ್ತದೆ

ಸಿಹಿಗೆಣಸಿನಲ್ಲಿರುವ ಪೊಟ್ಯಾಷಿಯಂ ಶರೀರದಲ್ಲಿಯ ಹೆಚ್ಚುವರಿ ಸೋಡಿಯಂ ಮತ್ತು ದ್ರವಗಳನ್ನು ಹೊರಹಾಕಲು ನೆರವಾಗುವ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹೃದಯ ಬಡಿತವನ್ನು ಮತ್ತು ಸ್ನಾಯು ಸಂಕುಚನವನ್ನು ಕಾಯ್ದುಕೊಳ್ಳಲೂ ಅದು ನೆರವಾಗುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಒಂದು ಕಪ್‌ನಷ್ಟು ಸಿಹಿಗೆಣಸನ್ನು ಸೇವಿಸಿದರೆ ಶರೀರಕ್ಕೆ ಸಾಕಷ್ಟು ಪೊಟ್ಯಾಷಿಯಂ ದೊರೆಯುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X