Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂಗ್ಲಿಷ್‌ನಲ್ಲಿ ಆಹ್ವಾನ ಕೊಟ್ಟು...

ಇಂಗ್ಲಿಷ್‌ನಲ್ಲಿ ಆಹ್ವಾನ ಕೊಟ್ಟು ಕರೆಯುವಷ್ಟು ಅವಮಾನ ಬೇರೊಂದಿಲ್ಲ: ನಾಡೋಜ ಕೆ.ಎಸ್.ನಿಸಾರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ16 Dec 2018 7:42 PM IST
share
ಇಂಗ್ಲಿಷ್‌ನಲ್ಲಿ ಆಹ್ವಾನ ಕೊಟ್ಟು ಕರೆಯುವಷ್ಟು ಅವಮಾನ ಬೇರೊಂದಿಲ್ಲ: ನಾಡೋಜ ಕೆ.ಎಸ್.ನಿಸಾರ್ ಅಹ್ಮದ್

ಬೆಂಗಳೂರು, ಡಿ.16: ಇತ್ತೀಚೆಗೆ ಆಹ್ವಾನ ಪತ್ರಿಕೆಗಳೆಲ್ಲ ಇಂಗ್ಲಿಷ್‌ಮಯವಾಗಿದ್ದು, ಕನ್ನಡಿಗರಿಗೆ ಇಂಗ್ಲಿಷ್‌ನಲ್ಲಿ ಆಹ್ವಾನ ಕೊಟ್ಟು ಕರೆಯುವಷ್ಟು ಅವಮಾನ ಬೇರೊಂದಿಲ್ಲ ಎಂದು ನಾಡೋಜ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಬೇಸರ ವ್ಯಕ್ತಪಡಿಸಿದರು.

ರವಿವಾರ ನಗರದ ನಯನ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಹಮ್ಮಿಕೊಂಡಿದ್ದ, ಕನ್ನಡ ನುಡಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲೆಲ್ಲೂ ಇಂಗ್ಲಿಷ್ ಬಳಕೆ ಎದ್ದು ಕಾಣುತ್ತಿದೆ. ಕನ್ನಡ ಭಾಷೆಯ ಮೇಲೆ ಪ್ರೀತಿ ಬೆಳೆಸಿಕೊಳ್ಳಬೇಕು. ಅದನ್ನು ಬಿಟ್ಟು ಕನ್ನಡಿಗರೇ ಆಹ್ವಾನ ಪತ್ರಿಕೆಯಲ್ಲಿ ಇಂಗ್ಲಿಷ್‌ಗೆ ಅವಕಾಶ ಕಲ್ಪಿಸಿಕೊಟ್ಟರೆ ಹೇಗೆ ಎಂದು ಪ್ರಶ್ನಿಸಿದರು.

ಮೊದಲು ಇಂಗ್ಲಿಷ್ ವ್ಯಾಮೋಹ ಬಿಡಿ, ಕನ್ನಡ ಭಾಷೆ ಬಳಕೆ ಮಾಡಿ. ಕನ್ನಡ ಪರ ಕೆಲಸ ಮಾಡಲು ಬಂದವರಿಗೆ ತಡೆಗಳೇ ಹೆಚ್ಚು ಮೊದಲು ಅವರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡಬೇಕು. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಕನ್ನಡ ಚಳುವಳಿಗಾರರನ್ನು ಕಂಡರೆ ಮೂಗು ಮುರಿಯುತ್ತಿದ್ದಾರೆ. ಅವರನ್ನು ಟೀಕಿಸುವ ಬದಲು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ಹಣ ಪಡೆದು ಚಳುವಳಿ ಮಾಡುತ್ತಾರೆ ಎಂದು ಮಾತನಾಡುತ್ತಾರೆ. ಇದು ತಪ್ಪು. ಕನ್ನಡದ ನೆಲ-ಜಲ, ಸಾಹಿತ್ಯದ ವಿಚಾರವಾಗಿ ನೆತ್ತರು ಕೊಟ್ಟು ಜೈಲಿಗೆ ಹೋಗಿ ಬಂದಿರುವ ಹೋರಾಟಗಾರರು ನಮ್ಮೊಂದಿಗೆ ಇದ್ದಾರೆ ಎಂಬುವುದನ್ನು ಮರೆಯಬಾರದು ಎಂದು ಸ್ಮರಿಸಿದರು.

ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಇಂಗ್ಲಿಷ್ ಜಾಹೀರಾತುಗಳು ಹೆಚ್ಚು ಕಾಣುತ್ತಿವೆ. ಇದನ್ನು ನೋಡಿದರೆ ನಾವು ನಮ್ಮ ರಾಜ್ಯದಲ್ಲಿದ್ದೇವೋ ಅಥವಾ ಬೇರೆ ದೇಶದಲ್ಲಿದ್ದೇವೋ ಎಂದು ಎನಿಸುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಕನ್ನಡ ಭಾಷೆಗೆ ಅತ್ಯಂತ ಗೌರವವಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದೇ ಸಾಕ್ಷಿ ಎಂದು ನುಡಿದರು.

ಕುವೆಂಪು, ಮಾಸ್ತಿ ಸೇರಿದಂತೆ ಇತರ ಕವಿಗಳು ನಮ್ಮ ನುಡಿಯನ್ನು ವಿಶ್ವಮಟ್ಟದಲ್ಲಿ ಸಾರಿದ್ದಾರೆ. ಆದುದರಿಂದ ನಾವೂ ಸಹ ಜನಸಾಮಾನ್ಯರಲ್ಲಿ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸಬೇಕು. ಇಂಗ್ಲಿಷ್ ಎಷ್ಟು ಮುಖ್ಯವೋ ಅಷ್ಟೇ ಕನ್ನಡ ಭಾಷೆಯೂ ಮುಖ್ಯವಾಗಿದೆ. ಇಂಗ್ಲಿಷ್ ಭಾಷೆ ವ್ಯವಹಾರಕ್ಕೆ ಮಾತ್ರ ಬಳಸಿ, ಇನ್ನಿತರೆ ಕಡೆ ಕನ್ನಡ ಭಾಷೆಯನ್ನು ಬಳಸಬೇಕು ಎಂದರು.

ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಪಾಠ ಮಾಡಿ ಸಾಹಿತ್ಯ ರಚಿಸಿದರೆ ಸಾಹಿತ್ಯ ಬೆಳವಣಿಗೆ ಅಸಾಧ್ಯ. ಗೋಕಾಕ್ ಚಳವಳಿಯಲ್ಲಿ ಕನ್ನಡ ಸಂಘಟಕರನ್ನು, ಹೋರಾಟಗಾರರ ಸಾಧನೆಯನ್ನು ಮರೆಯುವಂತಿಲ್ಲ. ಕನ್ನಡದ ವಿಚಾರದಲ್ಲಿ ಬೆಂಗಳೂರು ಕಲಬೆರಕೆಯಾಗುತ್ತಿದ್ದು, ಕನ್ನಡಿಗರೇ ಅಲ್ಪಸಂಖ್ಯಾತರಾಗುವ ಕಾಲ ಬಹುದೂರವಿಲ್ಲ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕನ್ನಡ ಶಾಲೆಯಲ್ಲಿ ಇಂಗ್ಲಿಷ್ ಕಲಿಕೆಯ ಬಗ್ಗೆ ಮಾತನಾಡುತ್ತಿದ್ದಾರೆ. ಕನ್ನಡ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವ ಸರಕಾರದ ನಿರ್ಧಾರ ಕನ್ನಡ ಭಾಷೆಯನ್ನು ಮುಗಿಸಲು ಹೊರಟಿದಂತಿದೆ. ಕನ್ನಡ ಶಾಲೆಗಳ ಏಳ್ಗೆಗೆ ಶ್ರಮಿಸಬೇಕಾಗಿದ್ದ ಸರಕಾರ ಕನ್ನಡ ಮಕ್ಕಳ ಮೇಲೆ ಇಂಗ್ಲಿಷ್ ಕಲಿಕೆ ಹೇರುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ನಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಓದಿಸಿದರೆ ಅವರು ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಮನೋಭಾವ ಪೋಷಕರಲ್ಲಿ ಮೂಡಿದೆ. ಆದರೆ, ನಮ್ಮ ಕನ್ನಡ ಭಾಷೆಯಿಂದ ಉತ್ತಮ ಸಾಧನೆ ಮಾಡಬಹುದು ಎಂಬುದರ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಕನ್ನಡ ಶಾಲೆಗಳಲ್ಲಿ ಕಲಿತ ಸಿ.ಎನ್.ಆರ್.ರಾವ್ ಅವರು ವಿಜ್ಞಾನ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದರು ಎಂಬುವುದನ್ನು ಮರೆಯಬಾರದು ಎಂದರು.

ಸಮ್ಮೇಳನಾಧ್ಯಕ್ಷ ಡಾ.ಬಿ.ಎಚ್.ಸತೀಶ್ ಗೌಡ ಮಾತನಾಡಿ, ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದರ ಮೂಲಕ ಭಾಷೆಯನ್ನು ಅಭಿವೃದ್ಧಿಪಡಿಸಬೇಕು. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಕನ್ನಡ ಪರ ಹೋರಾಟಗಾರ ಡಾ.ಟಿ.ಎಚ್.ಸತೀಶ್‌ ಗೌಡ, ಕಸಾಪದ ಮಾಜಿ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X