Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 2022ರ ವಿಶ್ವಕಪ್ ಫುಟ್‍ ಬಾಲ್ ಕ್ರೀಡಾಂಗಣ...

2022ರ ವಿಶ್ವಕಪ್ ಫುಟ್‍ ಬಾಲ್ ಕ್ರೀಡಾಂಗಣ ವಿನ್ಯಾಸ ಅನಾವರಣಗೊಳಿಸಿದ ಕತರ್

80 ಸಾವಿರ ಆಸನ ವ್ಯವಸ್ಥೆಯ ಲುಸೈಲ್ ಸ್ಟೇಡಿಯಂ ಹೀಗಿರಲಿದೆ...

ವಾರ್ತಾಭಾರತಿವಾರ್ತಾಭಾರತಿ16 Dec 2018 8:31 PM IST
share
2022ರ ವಿಶ್ವಕಪ್ ಫುಟ್‍ ಬಾಲ್ ಕ್ರೀಡಾಂಗಣ ವಿನ್ಯಾಸ ಅನಾವರಣಗೊಳಿಸಿದ ಕತರ್

ಕತರ್, ಡಿ.16: 2022ರ ವಿಶ್ವಕಪ್ ಫುಟ್‍ ಬಾಲ್ ಟೂರ್ನಿಯ ಫೈನಲ್ ಪಂದ್ಯ ನಡೆಯುವ ಕ್ರೀಡಾಂಗಣದ ವಿನ್ಯಾಸವನ್ನು ಕತರ್ ಅನಾವರಣಗೊಳಿಸಿದೆ. ಕ್ರೀಡಾಂಗಣ ಮುಂದಿನ ನಾಲ್ಕು ವರ್ಷಗಳಲ್ಲಿ ಪೂರ್ಣಗೊಳ್ಳಲಿದ್ದು, ಮಧ್ಯಪ್ರಾಚ್ಯ ದೇಶವೊಂದರಲ್ಲಿ ವಿಶ್ವಕಪ್ ಫುಟ್‍ ಬಾಲ್ ಫೈನಲ್ ನಡೆಯುತ್ತಿರುವುದು ಇದೇ ಮೊದಲು.

ದೇಶದ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಸೇರಿದಂತೆ ಇತರ ಗಣ್ಯರು 80 ಸಾವಿರ ಆಸನ ಸೌಲಭ್ಯವಿರುವ ಲುಸೈಲ್ ಕ್ರೀಡಾಂಗಣದ ವಿನ್ಯಾಸ ಅನಾವರಣಗೊಳಿಸಿದರು. ವಿಶ್ವಕಪ್ ಸಂಘಟನಾ ಸಮಿತಿಯ ಮುಖ್ಯಸ್ಥ ಹಸನ್ ಅಲ್ ಥಾವಡಿ ಈ ಅನಾವರಣ ಸಮಾರಂಭವನ್ನು ಮಹತ್ವದ ಮೈಲುಗಲ್ಲು ಎಂದು ಬಣ್ಣಿಸಿದ್ದಾರೆ. ನಮ್ಮ ಪಾಲಿಗೆ ಪ್ರತಿ ಮೈಲುಗಲ್ಲು ಕೂಡ ಮಹತ್ವದ್ದು ಎಂದು ಅವರು ಹೇಳಿದರು.

ವಿಶ್ವಕಪ್‍ ಗಾಗಿ ಕತರ್ ಅಭಿವೃದ್ಧಿಪಡಿಸುತ್ತಿರುವ ಎಂಟು ಸ್ಟೇಡಿಯಂಗಳ ಪೈಕಿ ಲುಸೈಲ್ ಸ್ಟೇಡಿಯಂ ಕೊನೆಯದ್ದು. ಬ್ರಿಟಿಷ್ ವಾಸ್ತುಶಿಲ್ಪ ಸಂಸ್ಥೆ ‘ಫೋಸ್ಟರ್ ಆ್ಯಂಡ್ ಪಾರ್ಟ್‍ನರ್ಸ್’ ಈ ಕ್ರೀಡಾಂಗಣದ ವಿನ್ಯಾಸ ಸಿದ್ಧಪಡಿಸಿದ್ದು, ಅರಬ್ ಕೌಶಲವನ್ನು ರೂಢಿಸಿಕೊಂಡು ಇದನ್ನು ನಿರ್ಮಿಸಲಾಗುತ್ತಿದೆ.

ಕತರ್ ಸಂಸ್ಥಾಪಕ ಶೇಖ್ ಜಾಸಿಮ್ ಬಿನ್ ಮುಹಮ್ಮದ್ ಬಿನ್ ಥಾನಿ ಅಲ್ ಥಾನಿಯವರ ಹಳೆಯ ನಿವಾಸಕ್ಕೆ ಹೊಂದಿಕೊಂಡಂತೆ ಈ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಹೊಚ್ಚಹೊಸ ಲುಸೈಲ್ ನಗರದಲ್ಲಿ ಈ ಕ್ರೀಡಾಂಗಣ 45 ಶತಕೋಟಿ ಡಾಲರ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ರಾಜಧಾನಿ ದೋಹಾದಿಂದ 15 ಕಿಲೋಮೀಟರ್ ದೂರದಲ್ಲಿರುತ್ತದೆ.

ಇದು ಕತರ್ ಕೈಗೊಂಡಿರುವ ಅತಿದೊಡ್ಡ ಮೂಲಸೌಕರ್ಯ ಯೋಜನೆಗಳಲ್ಲಿ ಒಂದಾಗಿದ್ದು, ವಿಶ್ವಕಪ್ ಹಿನ್ನೆಲೆಯಲ್ಲಿ ಇಡೀ ದೇಶ ಸಂಪೂರ್ಣ ನವೀಕರಣಗೊಳ್ಳುತ್ತಿದೆ. ಕ್ರೀಡಾಂಗಣ ನಿರ್ಮಾಣ ಕಾರ್ಯ 2020ಕ್ಕೆ ಪೂರ್ಣಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X