Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸಾವಯವ ಸಂತೆ’ ಪುನರಾರಂಭ: ಉತ್ಪನ್ನ...

‘ಸಾವಯವ ಸಂತೆ’ ಪುನರಾರಂಭ: ಉತ್ಪನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು

ವಾರ್ತಾಭಾರತಿವಾರ್ತಾಭಾರತಿ16 Dec 2018 8:58 PM IST
share
‘ಸಾವಯವ ಸಂತೆ’ ಪುನರಾರಂಭ: ಉತ್ಪನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು

ಉಡುಪಿ, ಡಿ.16: ಜಿಲ್ಲಾ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲಾ ಪ್ರಾಂತೀಯ ಸಾವಯವ ಕೃಷಿಕರ ಒಕ್ಕೂಟ ಹಾಗೂ ಉಡುಪಿ ಗೋಮಾತಾ ಆರ್ಗ್ಯಾನಿಕ್ಸ್‌ಗಳ ಸಂಯುಕ್ತ ಆಶ್ರಯದಲ್ಲಿ ದೊಡ್ಡಣಗುಡ್ಡೆಯಲ್ಲಿರುವ ತೋಟಗಾರಿಕಾ ಇಲಾಖೆ ಆವರಣ ದಲ್ಲಿ ಇಂದಿನಿಂದ ಪುನರಾರಂಭಗೊಂಡ ‘ಸಾವಯವ ಸಂತೆ’ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರತಿ ರವಿವಾರ ನಡೆಯಲಿರುವ ಸಾವಯವ ಸಂತೆಯು ಇಂದು ಬೆಳಗ್ಗೆ 7ರಿಂದ ಆರಂಭಗೊಂಡು 11ಗಂಟೆಯವರೆಗೆ ನಡೆಯಿತು. ಈ ಮಧ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಗ್ರಾಹಕರು ಸಾವಯವ ತರಕಾರಿ ಮತ್ತು ಸಿರಿಧಾನ್ಯ ಸೇರಿದಂತೆ ಸಾವಯವ ಉತ್ಪನ್ನಗಳ ಖರೀದಿಗೆ ಮುಗಿಬಿದ್ದಿದ್ದರು. ಸುವರ್ಣಗಡ್ಡೆ, ತೆಂಗು, ಬೂದಿ ಗುಂಬಳ, ಅಮ್ಟೆ ಕಾಯಿ, ಅರಿವೆ ಸೊಪ್ಪು, ಬಸಲೆ ಸೊಪ್ಪು, ಊರಿನ ಬೆಂಡೆ, ಬಿಳಿ ಅರಿವೆ, ಅವರೆಕಾಯಿ, ಸಬ್ಬಸಿಗೆ ಸೊಪ್ಪು, ಮೆಂತೆ ಸೊಪ್ಪು, ಊರಿನ ಕಾಟ್ ಬಾಳೆ ಕಾಯಿ, ಪಪ್ಪಾಯಿ ಹಣ್ಣುಗಳು ಹೆಚ್ಚು ಮಾರಾಟ ವಾದವು.

ಅದೇ ರೀತಿ ರಜಾಮುಡಿ, ನವರಅಕ್ಕಿ, ಕೆಂಪಕ್ಕಿ, ಬಿದಿರಕ್ಕಿ, ಸೋನಾ ಮಸೂರಿ, ಕುಚ್ಚಲಕ್ಕಿ, ದೋಸೆ ಅಕ್ಕಿ, ಅಕ್ಕಿ ರವಾ, ಅಕ್ಕಿ ಹಿಟ್ಟು, ಕೆಂಪು ದಪ್ಪ ಅವಲಕ್ಕಿ, ತೆಳು ಅವಲಕ್ಕಿ, ಬೇಳೆಕಾಳುಗಳು, ಸಾವಯವ ಬೆಲ್ಲ, ಬೆಲ್ಲದ ಪೌಡರ್, ಜೇನುತುಪ್ಪ, ದೇಶೀ ದನದ ತುಪ್ಪ ಹಾಗೂ ಇತರ ಉತ್ಪನ್ನಗಳಿಗೂ ಉತ್ತಮ ಬೇಡಿಕೆ ವ್ಯಕ್ತ ವಾದವು. ಉಡುಪಿ ನಗರ, ದೊಡ್ಡಣಗುಡ್ಡೆ, ಕುಂಜಿಬೆಟ್ಟು, ಕಡಿಯಾಳಿ ಸೇರಿ ದಂತೆ ವಿವಿಧ ಪ್ರದೇಶಗಳಿಂದ ಗ್ರಾಹಕರು ಸಂತೆಗೆ ಆಗಮಿಸಿದ್ದರು.

‘ಸಾವಯವ ಸಂತೆಯಲ್ಲಿ ಸಾವಯವ ಕೃಷಿಕರ ಒಕ್ಕೂಟದ 8 ರಿಂದ 10 ವ್ಯಾಪಾರಿಗಳು ತರಕಾರಿ, ಹಣ್ಣು, ಧಾನ್ಯಗಳನ್ನು ಮಾರಾಟ ಮಾಡಿದ್ದಾರೆ. ಪಪ್ಪಾಯಿ, ಸೂರನಗೆಡ್ಡೆ, ಸಿರಿಧಾನ್ಯ ಉತ್ಪನ್ನಗಳು ಸಾಕಷ್ಟು ಪ್ರಮಾಣದಲ್ಲಿ ಮಾರಾಟವಾಗಿವೆ. ಇಂದಿನ ಸಂತೆಯಲ್ಲಿ ಸುಮಾರು 90 ಸಾವಿರ ರೂ.ನಿಂದ ಒಂದು ಲಕ್ಷ ರೂ.ವರೆಗೆ ವ್ಯಾಪಾರ ನಡೆದಿದೆ ಎಂದು ಒಕ್ಕೂಟದ ಜಿ.ಪಿ ಸತೀಶ್ ತಿಳಿಸಿದ್ದಾರೆ.

ಕಳೆದ ವರ್ಷ ಅ.15ರಂದು ಪ್ರಾರಂಭಗೊಂಡ ಸಾವಯವ ಸಂತೆಯು ನಂತರ ಸಾವಯವ ಉತ್ಪನ್ನಗಳ ಕೊರತೆಯಿಂದ ಸ್ಥಗಿತಗೊಂಡಿತ್ತು. ಈ ವರ್ಷ ಮತ್ತೆ ಅಕ್ಟೋಬರ್ ತಿಂಗಳಲ್ಲಿ ಆರಂಭಿಸುವ ಉದ್ದೇಶ ಹೊಂದಿದ್ದರೂ ಮಳೆ ವೈಫರಿತ್ಯದಿಂದ ಕೃಷಿಗೆ ಉಂಟಾದ ಹಾನಿಯಿಂದ ಎರಡು ತಿಂಗಳ ಕಾಲ ವಿಳಂಬವಾಗಿ ಆರಂಭಿಸಲಾಯಿತು. ಇನ್ನು ಪ್ರತಿ ರವಿವಾರವೂ ಈ ಸಂತೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X