Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಪತ್ತು ಸಮಾನ ಹಂಚಿಕೆಯಾಗುವವರೆಗೂ...

ಸಂಪತ್ತು ಸಮಾನ ಹಂಚಿಕೆಯಾಗುವವರೆಗೂ ಮೀಸಲಾತಿ ಬೇಕು: ಬಸವ ಹರಳಯ್ಯ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ16 Dec 2018 10:10 PM IST
share
ಸಂಪತ್ತು ಸಮಾನ ಹಂಚಿಕೆಯಾಗುವವರೆಗೂ ಮೀಸಲಾತಿ ಬೇಕು: ಬಸವ ಹರಳಯ್ಯ ಸ್ವಾಮೀಜಿ

ಬೆಂಗಳೂರು, ಡಿ.16: ದೇಶದ ಸಂಪತ್ತು ಸಮಾನ ಹಂಚಿಕೆಯಾಗುವವರೆಗೂ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿ ಸುಧಾರಣೆಯಾಗುವವರೆಗೂ ಮೀಸಲಾತಿ ಅಗತ್ಯವಿದೆ ಎಂದು ಶಿವಶರಣ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ ಪ್ರತಿಪಾದಿಸಿದ್ದಾರೆ.

ರವಿವಾರ ನಗರದ ಗಾಂಧಿ ಭವನದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ ಅಂಗವಾಗಿ ಸಂವಿಧಾನ ಉಳಿಸಿ ಮೀಸಲಾತಿ ಹೆಚ್ಚಿಸಿ ಎಂಬ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದಲ್ಲಿ ಇಂದಿಗೂ ಶೋಷಿತ ಸಮುದಾಯ ಆರ್ಥಿಕ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ತೀರ ಹಿಂದುಳಿದಿದೆ. ಒಂದು ಕಡೆ ಮೀಸಲಾತಿಯನ್ನು ಬದಲಿಸುವ ಶಕ್ತಿಗಳು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ. ಮತ್ತೊಂದು ಕಡೆ ಸಂವಿಧಾನವನ್ನು ಬದಲಿಸುವವರು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶೋಷಿತರು ಜಾಗೃತಗೊಳ್ಳಬೇಕು. ಮೀಸಲಾತಿ ಎಂಬುದು ಭಿಕ್ಷೆಯಲ್ಲ, ನಮ್ಮ ಹಕ್ಕು. ಅದನ್ನು ಪಡೆಯಲು ಹೋರಾಡಬೇಕಿದೆ ಎಂದರು.

ಇಂದಿನ ಶೋಷಿತ ಸಮುದಾಯ ಮೀಸಲಾತಿಯ ಮೇಲೆ ಅವಲಂಬನೆಯಾಗದೇ ಕೈಗಳಿಗೆ ಕೆಲಸ ಕೊಟ್ಟು, ದುಡಿಯುವಂತಾಗಬೇಕು. ಬಸವಣ್ಣರ ಕಾಯಕವೇ ಕೈಲಾಸ ಎಂಬಂತೆ ದುಡಿಯುವ ಮೂಲಕ ಕೈಲಾಸ ಕಾಣಬೇಕು. ದಲಿತರು ಬೇರೆಯವರ ಎದುರು ಮಂಡಿಯೂರಿ ಬೇಡುವ ಬದಲಿಗೆ, ನಾವೇ ಒಂದಿಷ್ಟು ಮಂದಿಗೆ ನೀಡುವವರಂತಾಗಬೇಕು ಎಂದ ಅವರು, ಮೀಸಲಾತಿ ಇಂದು ಬಲಾಢ್ಯರ ಕೈಯಲ್ಲಿದೆ ಎಂದರು.

ಸಂವಿಧಾನ ವಿರೋಧಿಗಳು ದೇಶ ಬಿಟ್ಟುಹೋಗಲಿ: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಮೇಲೆ ನಿರಂತರವಾದ ದಾಳಿ ನಡೆಯುತ್ತಲೇ ಇದೆ. ಸಂವಿಧಾನಾತ್ಮಕವಾಗಿ ಆಯ್ಕೆಗೊಂಡಿರುವ ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ನಾವು ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳುತ್ತಾರೆ. ಮತ್ತೊಂದು ಕಡೆ ಸಂವಿಧಾನದ ಪ್ರತಿಯನ್ನು ಸುಟ್ಟು ಅಂಬೇಡ್ಕರ್‌ಗೆ ಧಿಕ್ಕಾರ ಎಂದು ಕೂಗುತ್ತಾರೆ. ಇಂದು ನಾವು ಯಾವ ಸಂದರ್ಭದಲ್ಲಿದ್ದೇವೆ ಎಂದ ಅವರು, ಸಂವಿಧಾನ ವಿರೋಧಿಸುವವರು ದೇಶ ಬಿಟ್ಟು ಹೋಗಲಿ ಎಂದು ಹೇಳಿದರು.

ಸಂವಿಧಾನ ಉಳಿದಿದೆಯಾ...?: ಭಾರತದಲ್ಲಿ ಎಲ್ಲ ಧರ್ಮಗ್ರಂಥಗಳಿಗಿಂತಲೂ ಶ್ರೇಷ್ಠವಾದ ಗ್ರಂಥ ಸಂವಿಧಾನ. ಆದರೆ, ಮನುವಾದಿಗಳಿಂದು ಅದನ್ನೇ ಬುಡಮೇಲು ಮಾಡಲು ಮುಂದಾಗಿದ್ದಾರೆ. ಆರ್‌ಬಿಐನ ಗವರ್ನರ್ ಪತ್ರಿಕಾಗೋಷ್ಠಿ ಮಾಡಿ ನಮಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ. ಮತ್ತೊಂದು ಕಡೆ ಸಂವಿಧಾನದ ಪ್ರಧಾನ ಸಂಸ್ಥೆ ನ್ಯಾಯಾಂಗದ ನ್ಯಾಯಾಧೀಶರು ಬೀದಿಗೆ ಬಂದು ನಮಗೆ ನ್ಯಾಯ ದೊರಕಿಸಿಕೊಡಿ ಎನ್ನುವ ಸ್ಥಿತಿಗೆ ತಲುಪಿದೆ. ಅಂದರೆ ಇಂದಿಗೂ ಸಂವಿಧಾನ ಉಳಿದಿದೆಯಾ ಎಂಬ ಪ್ರಶ್ನೆ ಕಾಡುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೈಸೂರು ವಿಶ್ವವಿದ್ಯಾಲಯದ ಪ್ರಾದ್ಯಾಪಕ ಡಾ.ಬಿ.ಗುರುರಾಜ್ ಮಾತನಾಡಿ, ಪರಿಶಿಷ್ಟರಿಗೆ ಸಂವಿಧಾನಾತ್ಮಕವಾಗಿ ಶೇ.15 ರಷ್ಟು ಮೀಸಲಾತಿ ಸಿಗುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿಯೊಳಗೆ ಹಲವು ಜಾತಿಗಳನ್ನು ಸೇರ್ಪಡೆ ಮಾಡಿರುವುದರಿಂದ ಎಲ್ಲರಿಗೂ ಮೀಸಲಾತಿಯ ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ದಲಿತ ಹೆಸರಿನಲ್ಲಿ ರಾಜಕೀಯ ಮಾಡುವವರ ಸಂಖ್ಯೆ ಅಧಿಕವಾಗುತ್ತಿದೆ. ದಲಿತರು ಒಂದಾಗಲು ಕೆಲವರು ಉದ್ದೇಶಪೂರ್ವಕವಾಗಿ ಅಡ್ಡಗಾಲು ಹಾಕುತ್ತಿದ್ದಾರೆ. ಹೀಗಾಗಿ, ದಲಿತರು ವೈಜ್ಞಾನಿಕ ಜ್ಞಾನ ಪಡೆಯಬೇಕು. ಕೆಲವರ ಮಾತುಗಳಿಗೆ ಮರುಳಾಗದೇ ತಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಜಿ.ಕೆ.ಗೋಖಲೆ, ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ರಮೇಶ್, ಮೈಸೂರಿನ ದೈಹಿಕ ಶಿಕ್ಷಣದ ನಿರ್ದೇಶಕಿ ಡಾ.ಕೆ.ಸಂಗೀತ, ಸಂಘದ ಅಧ್ಯಕ್ಷ ಎಚ್.ಮಹಾಂತೇಶ್, ಮುಖಂಡ ಟಿ.ದೇವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X