Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟೂರ್ ಆಫ್ ನೀಲಗಿರೀಸ್ ದೇಶದ ಅತಿದೊಡ್ಡ...

ಟೂರ್ ಆಫ್ ನೀಲಗಿರೀಸ್ ದೇಶದ ಅತಿದೊಡ್ಡ ಸೈಕ್ಲಿಂಗ್ ಟೂರ್: ಸತೀಶ್ ಬೆಳವಾಡಿ

ವಾರ್ತಾಭಾರತಿವಾರ್ತಾಭಾರತಿ16 Dec 2018 10:42 PM IST
share

ಬೆಂಗಳೂರು, ಡಿ.16: ಟೂರ್ ಆಫ್ ನೀಲಗಿರೀಸ್ ಇಂದು ಭಾರತದ ಅತ್ಯಂತ ಕಷ್ಟಕರ ಹಾಗೂ ಅತಿದೊಡ್ಡ ಸೈಕ್ಲಿಂಗ್ ಟೂರ್ ಎನ್ನುವ ಗೌರವ ಪಡೆದುಕೊಂಡಿದೆ. ಸವಾಲು, ಅಡೆತಡೆ ಹಾಗೂ ಸಹಿಷ್ಣುತೆಗಳನ್ನು ಪರೀಕ್ಷಿಸಿ ಸೈಕ್ಲಿಂಗ್‌ನ ಪ್ರತಿಭೆಗಳಿಗೆ ಹೊಸ ಅವಕಾಶಗಳಿಗೆ ದಾರಿ ಮಾಡಿಕೊಡುತ್ತಿದೆ ಎಂದು ಟೂರ್ ಆಫ್ ನೀಲಗಿರೀಸ್‌ನ ಟೂರ್ ನಿರ್ದೇಶಕ ಸತೀಶ್ ಬೆಳವಾಡಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ರೈಡ್ ಎ ಸೈಕಲ್ ಪ್ರತಿಷ್ಠಾನದ ವತಿಯಿಂದ ಪ್ರತಿ ವರ್ಷ ನಡೆಯುವ ಟೂರ್ ಆಫ್ ನೀಲಗಿರೀಸ್ ಯಶಸ್ವಿಯಾಗಿ ಮುಕ್ತಾಯವಾಗಿರುವ ಕುರಿತು ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಹಲವಾರು ಸೈಕ್ಲಿಸ್ಟ್‌ಗಳು ಟೂರ್ ಆಫ್ ನೀಲಗಿರೀಸ್ ಬಗ್ಗೆ ಸಾಕಷ್ಟು ಆಸಕ್ತಿ ತೋರಿದ್ದಾರೆ. ಮುಂದೆ ಈ ಟೂರ್ನಿ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಐತಿಹಾಸಿಕ ಟೂರ್‌ನ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಫ್‌ಎನ್ 2018ನ ಟೂರ್ ಸಹಾಯಕ ನಿರ್ದೇಶಕ ಬದ್ರೀನಾಥ್ ಶಾಸ್ತ್ರಿ, ಕೂಟದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಹಾಗೂ ಜಾಗತಿಕ ಹಾಗೂ ದೇಶೀಯ ಮಟ್ಟದಲ್ಲಿ ಸೈಕ್ಲಿಂಗ್ ಪ್ರತಿಭೆಗಳನ್ನು ಗುರುತಿಸಲು ಪ್ರತಿವರ್ಷ ನಾವು ಹೊಸ ಸವಾಲುಗಳನ್ನು ಇವರ ಮುಂದಿಡಲು ಪ್ರಯತ್ನಿಸುತ್ತೇವೆ ಎಂದರು. ಸೈಕ್ಲಿಸ್ಟ್‌ಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು, ವರ್ಷಂಪ್ರತಿ ಟಿಎಫ್‌ಎನ್‌ನಲ್ಲಿ ಪಾಲ್ಗೊಳ್ಳುವ ಅಥ್ಲೀಟ್‌ಗಳಿಗೆ ಅಚ್ಚರಿ ನೀಡಬೇಕು ಎನ್ನುವ ಕಾರಣಕ್ಕೆ ಮಾರ್ಗಗಳನ್ನು ಬಹಳ ಎಚ್ಚರಿಕೆಯಿಂದ ಆರಿಸಲಾಗಿದೆ ಎಂದು ಅವರು ಸ್ಮರಿಸಿದರು.

ಸಹ ಸಂಸ್ಥಾಪಕ ದೀಪಕ್ ಮಾತನಾಡಿ, 2018ರ ಟಿಎಫ್‌ಎನ್ ಮುಗಿಯುತ್ತಿದ್ದಂತೆ, 2019ರಲ್ಲಿ ನಡೆಯಲಿರುವ 12ನೇ ಆವೃತ್ತಿಯ ಟಿಎಫ್‌ಎನ್ ಮಾರ್ಗದ ಕುರಿತಾಗಿ ಸೈಕ್ಲಿಸ್ಟ್‌ಗಳಲ್ಲಿ ಕುತೂಹಲ ಆರಂಭಗೊಂಡಿದೆ ಎಂದು ತಿಳಿಸಿದರು. ಆರ್‌ಎಸಿಎಫ್‌ನ ಅನುಭಗಳ ತಂಡ ಮುಂದಿನ ಎರಡು ತಿಂಗಳಿನಲ್ಲಿ ಸಭೆ ಸೇರಲಿದ್ದು, ಮುಂದಿನ ಆವೃತ್ತಿಗಳ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಿದೆ. 2019ರ ಟಿಎಫ್‌ಎನ್‌ನ ನೋಂದಣಿ ಕಾರ್ಯ 2019ರ ಮೇ 1 ರಂದು ಆರಂಭಗೊಳ್ಳಲಿದೆ. ವಿಶ್ವಮಟ್ಟದ ಸೈಕ್ಲಿಂಗ್‌ನ ಅಗಾಧ ಪ್ರತಿಭೆಗಳನ್ನು ಆಕರ್ಷಿಸಲಿದ್ದೇವೆ ಎನ್ನುವ ಅಚಲ ವಿಶ್ವಾಸ ನಮ್ಮಲ್ಲಿದೆ ಎಂದು ತಿಳಿಸಿದರು.

11ನೇ ಆವೃತ್ತಿ: 2018ರ ಟೂರ್ ಆಫ್ ನೀಲಗಿರೀಸ್‌ನ ಪ್ರಮುಖವಾದ ಅಂಶವೆಂದರೆ ದಾಖಲೆ ಎನಿಸುವಂಥ ವಿದೇಶಿ ಹಾಗೂ ಮಹಿಳಾ ಸೈಕ್ಲಿಸ್ಟ್‌ಗಳು ಸ್ಪರ್ಧೆ ಮಾಡಿದ್ದು, ದೇಶದಿಂದ ಒಟ್ಟಾರೆ 29 ಹಾಗೂ 18 ಮಹಿಳಾ ರೈಡರ್‌ಗಳು ಈ ಬಾರಿಯ ಟಿಎಫ್‌ಎನ್‌ನಲ್ಲಿ ಕಣಕ್ಕಿಳಿದಿದ್ದರು. ಅದಲ್ಲದೆ, ಟಿಎಫ್‌ಎನ್ ಇತಿಹಾಸದಲ್ಲೇ ಹಿಂದೆಂದೂ ನೋಡಿಲ್ಲದಂತ ಹಾಸನ ಹಾಗೂ ಕುಶಾಲನಗರದ ಮಾರ್ಗದಲ್ಲಿನ ಬೆಟ್ಟ ಗುಡ್ಡಗಳ ಹೊಸ ದಾರಿಯನ್ನು 11ನೇ ಆವೃತ್ತಿಯಲ್ಲಿ ಪರಿಚಯಿಸಲಾಯಿತು

ಪುರುಷ ವಿಜೇತರು

ನವೀನ್ ಜಾನ್ (ಭಾರತ) ನಿಲ್ಸ್ ಈಗಿಲ್ ಬ್ರಾಡ್ಟ್ಬ್‌ರ್ಗಾ (ಡೆನ್ಮಾರ್ಕ್) ಕ್ಲಿಂಟನ್ ಲ್ಯಾನ್ ಲೆಯಾಂಗ್ (ಆಸ್ಟ್ರೇಲಿಯಾ)

ಮಹಿಳಾ ವಿಜೇತರು

ಕಟ್ಜಾ-ಲಿಲ್ ಜೆನ್ಸನ್ (ಡೆನ್ಮಾರ್ಕ್) ಲೆನಾ ಮರೈಕೆ ಜೋಸ್ಫೈನ್ ರಾಬ್ರಾ (ಜರ್ಮನಿ) ಕೊರಾ ವ್ಯಾನ್ ಲೇರ್ (ಬೆಲ್ಜಿಯಂ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X