Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆ್ಯಂಬಿಡೆಂಟ್ ಪ್ರಕರಣ ಮುಚ್ಚಿ ಹಾಕಲು...

ಆ್ಯಂಬಿಡೆಂಟ್ ಪ್ರಕರಣ ಮುಚ್ಚಿ ಹಾಕಲು ಸಿಸಿಬಿ 30 ಕೋಟಿ ಲಂಚ ಪಡೆದಿದೆ: ರವಿ ಕೃಷ್ಣಾರೆಡ್ಡಿ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Dec 2018 7:31 PM IST
share
ಆ್ಯಂಬಿಡೆಂಟ್ ಪ್ರಕರಣ ಮುಚ್ಚಿ ಹಾಕಲು ಸಿಸಿಬಿ 30 ಕೋಟಿ ಲಂಚ ಪಡೆದಿದೆ: ರವಿ ಕೃಷ್ಣಾರೆಡ್ಡಿ ಗಂಭೀರ ಆರೋಪ

ಬೆಂಗಳೂರು, ಡಿ.17: ಆ್ಯಂಬಿಡೆಂಟ್ ವಂಚನೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಕರಣದ ಪ್ರಮುಖ ಆರೋಪಿ ಸೆಯ್ಯದ್ ಫರೀದ್ ಕೆಲ ಸಿಸಿಬಿ ತನಿಖಾಧಿಕಾರಿ ಗಳಿಗೆ 30 ಕೋಟಿ ಲಂಚ ನೀಡಿರುವ ಗಂಭೀರ ಆರೋಪ ಇದೆ ಎಂದು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ತೀವ್ರ ವಿಚಾರಣೆಗೆ ಒಳಪಡಿಸದಂತೆ ಮತ್ತು ತನ್ನ ಕಂಪನಿಯ ಮೇಲೆ ತನಿಖೆ ನಡೆಸದಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಸೆಯ್ಯದ್ ಫರೀದ್ 30ಕೋಟಿ ರೂ. ಹಣ ನೀಡಿದ್ದಾನೆ ಎನ್ನಲಾಗಿದ್ದು, ಪೊಲೀಸರಿಗೆ ಹಣ ನೀಡಿರುವುದಾಗಿ ಫರೀದ್ ಅನೇಕ ಜನರ ಬಳಿ ಹೇಳಿಕೊಂಡಿದ್ದಾನೆ ಎಂದು ಆರೋಪಿಸಿದರು.

ಇದರ ಬಗ್ಗೆ ಸಾಕಷ್ಟು ಸಾಕ್ಷಾಧಾರಗಳಿಲ್ಲದೇ ನಾವು ಮಾತನಾಡುವುದು ಒಳ್ಳೆಯ ನಡೆಯಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರಕರಣದ ತನಿಖೆ ಹೋಗುತ್ತಿರುವ ದಿಕ್ಕನ್ನು ನೋಡಿದರೆ, ನಮಗೆ ನಂಬಲಾರ್ಹ ಮೂಲಗಳಿಂದ ಬಂದಿರುವ ಮಾಹಿತಿಯನ್ನು ಜನರ ಮುಂದೆ ಇಡಬೇಕಾದ ನೈತಿಕ ಒತ್ತಡಕ್ಕೆ ಸಿಲುಕಿದ್ದೇವೆ. ಮಾಹಿತಿ ಬಹಿರಂಗದಿಂದ ಮುಂದಿನ ದಿನಗಳಲ್ಲಿ ಭ್ರಷ್ಟ ಪೊಲೀಸ್ ಅಧಿಕಾರಿಗಳು ವಂಚಕರನ್ನು ಬಚಾವು ಮಾಡಲು ಹಿಂದೆ ಮುಂದೆ ನೋಡುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರು ಪೂರ್ವ ವಲಯದ ಡಿಸಿಪಿ ಅಜಯ್ ಹಿಲೋರಿ ಆ್ಯಂಬಿಡೆಂಟ್ ಕಂಪೆನಿಯ ವಿರುದ್ಧ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ನಾಲ್ಕು ದೂರುಗಳಿಗೆ, ಒಂದು ದೂರಿಗೆ ತಲಾ 5ಕೋಟಿ ರೂ. ನಂತೆ 20 ಕೋಟಿ ರೂ. ಪಡೆದಿದ್ದಾರೆ. ನಗರ ಪೊಲೀಸ್ ಕಮೀಷನರ್ ಸುನೀಲ್ ಕುಮಾರ್ 5 ಕೋಟಿ ರೂ., ಪೂರ್ವ ವಲಯದ ಎಸಿಪಿ ಸೀಮಂತ್ ಕಮಾರ್ ಸಿಂಗ್ 3 ಕೋಟಿ ರೂ., ಸಿಸಿಬಿಯ ಹಿಂದಿನ ಜಂಟಿ ಆಯುಕ್ತ ಸತೀಶ್ ಕುಮಾರ್ 3 ಕೋಟಿ ರೂ., ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ 1 ಕೋಟಿ ಪಡೆದಿದ್ದಾರೆ ಎಂದರು.

ಈ ಎಲ್ಲ ಅಧಿಕಾರಿಗಳು, ಒಂದು ಸ್ವತಂತ್ರ ತನಿಖಾ ಸಂಸ್ಥೆಯು ಪಾರದರ್ಶಕವಾಗಿ ನಡೆಸುವ ನಾರ್ಕೊ ಅನಾಲಿಸಿಸ್ ಹಾಗೂ ಬ್ರೈನ್ ಮ್ಯಾಪಿಂಗ್ ನಂತಹ ಸುಳ್ಳು-ಪತ್ತೆ ಪರೀಕ್ಷೆಗಳಿಗೆ ಒಳಪಡಬೇಕು. ಅಲ್ಲದೆ, ಇಷ್ಟೆಲ್ಲಾ ಆರೋಪಗಳು ಪೊಲೀಸ್ ಇಲಾಖೆಯ ಮೇಲೆ ಬಂದಿರುವುದರಿಂದ ಪೊಲೀಸ್ ಇಲಾಖೆ ಪ್ರಕರಣವನ್ನು ತನಿಖೆ ಮಾಡುವ ನೈತಿಕ ಅರ್ಹತೆಯನ್ನು ಕಳೆದುಕೊಂಡಿದೆ. ಹೀಗಾಗಿ, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ರವಿ ಕೃಷ್ಣಾರೆಡ್ಡಿ ಆಗ್ರಹಿಸಿದರು.

ವೇದಿಕೆಯ ವತಿಯಿಂದ ಯಾವ ರಾಜಕಾರಣಿಗಳಿಗೆ ಸೆಯ್ಯದ್ ಫರೀದ್ ಲಂಚ ನೀಡಿದ್ದಾನೆ ಎನ್ನುವ ವಿವರಗಳನ್ನು ಸಂಗ್ರಹಿಸುತ್ತಿದ್ದು, ಆ್ಯಂಬಿಡೆಂಟ್, ಆಲಾ, ಇಂಜಾಜ್, ಅಜ್ಮೀರಾ ಸೇರಿದಂತೆ ಅನೇಕ ಕಂಪೆನಿಗಳಿಂದ ವಂಚನೆಗೊಳಗಾದ ಜನರಿಗೆ ನ್ಯಾಯ ಒದಗಿಸಿ, ಪರಿಹಾರಕ್ಕೆ ಆಗ್ರಹಿಸಿ ಡಿ.18ರಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X