Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕಟ್ಟಡ ಕಾರ್ಮಿಕರಿಗೆ ಗೃಹಭಾಗ್ಯ...

ಉಡುಪಿ: ಕಟ್ಟಡ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆ ಜಾರಿಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Dec 2018 7:36 PM IST
share
ಉಡುಪಿ: ಕಟ್ಟಡ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆ ಜಾರಿಗೆ ಒತ್ತಾಯ

ಉಡುಪಿ, ಡಿ.17: ಕಟ್ಟಡ ಕಾರ್ಮಿಕರಿಗೆ ಮನೆ ಕಟ್ಟಲು 5 ಲಕ್ಷ ರೂ.ವರೆಗೆ ಸಹಾಯಧನವನ್ನು ಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ನೀಡುವುದಾಗಿ ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಘೋಷಣೆ ಮಾಡಿದ್ದು, ಆದರೆ ಇದುವರೆಗೆ ಕಟ್ಟಡ ಕಾರ್ಮಿಕರಿಗೆ ಈ ಯೋಜನೆಯ ಪ್ರಯೋಜನ ಪಡೆ ಯಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಹಾಗೂ ಸಹಾಯ ಧನವನ್ನು ನೀಡಬೇಕು ಎಂದು ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ (ಎಐಟಿಯುಸಿ) ಒತ್ತಾಯಿಸಿದರು.

ಉಡುಪಿಯ ಕಬ್ಯಾಡಿ ಶ್ರೀದುರ್ಗಾಂಬಾ ಭವಾನಿ ದೇವಸ್ಥಾನದ ಸಭಾಂಗಣ ದಲ್ಲಿ ಇತ್ತೀಚೆಗೆ ನಡೆದ ಸಂಘದ ಎರಡನೇ ವಾರ್ಷಿಕ ಮಹಾಸಭೆಯಲ್ಲಿ ಈ ಒತ್ತಾಯ ಮಾಡಲಾಯಿತು. ಸಂಘದ ಅಧ್ಯಕಷ ಹಿರಿಯಡಕ ಗಣಪತಿ ಪ್ರಭು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಕೆ.ವಿ.ಭಟ್ ಅವರು ಮಂಡಿಸಿದ ಸಂಘದ ಚಟುವಟಿಕೆ ವರದಿ, ಲೆಕ್ಕಪತ್ರವನ್ನು ಸಭೆ ಚರ್ಚೆಯ ಬಳಿಕ ಸರ್ವಾನುಮತ ದಿಂದ ಅಂಗೀಕರಿಸಿತು. ಕಟ್ಟಡ ಕಾರ್ಮಿಕರ ಭವಿಷ್ಯದ ಪ್ರಮುಖ ಬೇಡಿಕೆಗಳ ನಿರ್ಣಯವನ್ನು ಮಂಡಿಸಿ, ಸಭೆಯಲ್ಲಿ ಚರ್ಚೆ ನಡೆದು ಅನುಮೋದಿಸಲಾಯಿತು.

ಮುಂದಿನ ಅವಧಿಗೆ 26 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಗಣಪತಿ ಪ್ರಭು (ಅಧ್ಯಕ್ಷರು), ಗೋಪಾಲ ನಾಯ್ಕ, ಲೋಕೇಶ ಕರ್ಕೇರ, ಸತೀಶ್ ಕುಲಾಲ (ಉಪಾಧ್ಯಕ್ಷರು), ಕೆ.ವಿ.ಭಟ್ (ಪ್ರಧಾನ ಕಾರ್ಯದಶಿ), ದಿನೇಶ್ ಕನ್ನಡ, ಸುಧಾಕರ ನಾಯ್ಕ, ಶಿವಪೂಜಾರಿ (ಸಹ ಕಾರ್ಯದರ್ಶಿ), ಶಶಿಕಲಾ ಗರೀಶ್ (ಖಜಾಂಚಿ) ಆಯ್ಕೆಯಾದರು. ವಾರಿಜ ನಾಯ್ಕ ಅವರು ಎಐಟಿಯುಸಿ ವಲಯ ಸಂಚಾಲಕರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಸಭೆಯ ನಿರ್ಣಯಗಳು: ಕಟ್ಟಡ ಕಾರ್ಮಿಕರಿಗೆ ಮಾಸಿಕ ಪಿಂಚಣಿ 6,000 ರೂ.ನಿಗದಿಪಡಿಸಬೇಕು, ಪಿಂಚಣಿಗೆ ಅರ್ಜಿ ಸಲ್ಲಿಸಲು ವಯೋಮಿತಿ 55 ವರ್ಷಕ್ಕೆ ಇಳಿಸಬೇಕು. ವೈದ್ಯಕೀಯ ಸಹಾಯಧನ ಮಂಜೂರಾತಿಯಲ್ಲಿ ಫಲಾನುಭವಿ ಆಸ್ಪತ್ರೆಗಳಲ್ಲಿ ಪಾವತಿಸಿದ ಸಂಪೂರ್ಣ ಮೊತ್ತವನ್ನು ಮರು ಪಾವತಿಸಲು ಕ್ರಮಕೈಗೊಳ್ಳಬೇಕು. ಫಲಾನುಭವಿ ಕುಟುಂಬದ ಅವಲಂಬಿತರಿಗೂ ಅನ್ವಯಿಸಬೇಕು.

ಗೃಹ ನಿರ್ಮಾಣ ಭಾಗ್ಯ ಯೋಜನೆಯಡಿ ಮನೆ ಕಟ್ಟಲು ಹಾಗೂ ಖರೀದಿಸಲು ನೀಡಲಾಗುವ ಸಹಾಯಧನ ಹಾಗೂ ಸಾಲವನ್ನು ಪಡೆಯಲು ವಿಧಿಸಿರುವ ಷರತ್ತು ಮತ್ತು ನಿಯಮಗಳನ್ನು ಸರಳೀಕರಿಸಬೇಕು. ಮನೆ ಕಟ್ಟಲು ಕಾರ್ಮಿಕರಿಗೆ ಕಲ್ಯಾಣಮಂಡಳಿಯಿಂದ 2 ಲಕ್ಷ ರೂ.ನೀಡಬೇಕು. ಅಂತ್ಯಕ್ರಿಯೆ ವೆಚ್ಚ 10000 ರೂ.ವನ್ನು ಸಹಾಯಧನವಾಗಿ ನೀಡಬೇಕು.

ಸಭೆಯಲ್ಲಿ ಕಟ್ಟಡ ಕಾರ್ಮಿಕರ ದ.ಕ. ಮತ್ತು ಉಡುಪಿ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಕರುಣಾಕರ, ಸಹಕಾರ್ಯದರ್ಶಿ ತಿಮ್ಮಪ್ಪ ಕಾವೂರು, ಎಐಟಿಯುಸಿ ದ.ಕ. ಮತ್ತು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್, ಎಐಟಿಯುಸಿ ಉಡುಪಿ ಜಿಲ್ಲಾ ನಾಯಕರಾದ ರಾಜು ಪೂಜಾರಿ, ಸಂಜೀವ ಶೇರಿಗಾರ್, ರಾಮ ಮೂಲ್ಯ, ಶಾಂತನಾಯಕ್, ಶಶಿಕಲ ಗಿರೀಶ್, ವಾರಿಜಾ ಆತ್ರಾಡಿ ಮುಂತಾದವರು ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಕೆ.ವಿ.ಭಟ್ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X