Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಭೂಮಿಗೆ 982 ಕೋಟಿ ರೂ.ಮೌಲ್ಯ...

ಸರಕಾರಿ ಭೂಮಿಗೆ 982 ಕೋಟಿ ರೂ.ಮೌಲ್ಯ ನಿಗದಿ: ಸಚಿವ ಆರ್.ವಿ.ದೇಶಪಾಂಡೆ

ಈಗಲ್‍ಟನ್ ಪ್ರಾಜೆಕ್ಟ್

ವಾರ್ತಾಭಾರತಿವಾರ್ತಾಭಾರತಿ17 Dec 2018 9:34 PM IST
share
ಸರಕಾರಿ ಭೂಮಿಗೆ 982 ಕೋಟಿ ರೂ.ಮೌಲ್ಯ ನಿಗದಿ: ಸಚಿವ ಆರ್.ವಿ.ದೇಶಪಾಂಡೆ

ಬೆಳಗಾವಿ, ಡಿ.17: ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ಶ್ಯಾನಮಂಗಲ, ಬಿಲ್ಲಕೆಂಪನಹಳ್ಳಿ ಮತ್ತು ಬಾಣಂದೂರು ಗ್ರಾಮಗಳಲ್ಲಿ ಚಾಮುಂಡೇಶ್ವರಿ ಬ್ಯುಲ್ಡ್ ಟೆಕ್ ಪ್ರೈ.ಲಿ. ಈಗಲ್‍ಟನ್ ಪ್ರಾಜೆಕ್ಟ್ ಗಾಗಿ 106 ಎಕರೆ 12 ಗುಂಟೆ ವಿಸ್ತೀರ್ಣದ ಜಮೀನನ್ನು ಒತ್ತುವರಿ ಮಾಡಿಕೊಂಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ 2014ರ ಜನವರಿ 16ರಂದು ನೀಡಿರುವ ಆದೇಶದಂತೆ ಒತ್ತುವರಿ ಮಾಡಿಕೊಂಡಿರುವ ಜಮೀನಿನ ಪೈಕಿ 28 ಎಕರೆ 33 ಗುಂಟೆ ಸರಕಾರಿ ಜಮೀನನ್ನು ವಶಕ್ಕೆ ಪಡೆಯಲಾಗಿದೆ ಹಾಗೂ 77 ಎಕರೆ 19 ಗುಂಟೆ ಒತ್ತುವರಿ ಜಮೀನು ಸಂಸ್ಥೆಯ ವಶದಲ್ಲಿದೆ ಎಂದರು.

ಸಂಸ್ಥೆಯವರಿಗೆ ಒಂದು ಅವಕಾಶ ನೀಡಲು ಸುಪ್ರೀಂಕೋರ್ಟ್ ಸೂಚಿಸಿದ್ದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿ, ಪರಾಮರ್ಶಿಸಿ ಸಂಸ್ಥೆಯ ವಶದಲ್ಲಿರುವ 77 ಎಕರೆ 19 ಗುಂಟೆ ಜಮೀನಿಗೆ ಒಟ್ಟು 982,07,77,480 ರೂ.ಗಳ ಮೌಲ್ಯವನ್ನು ನಿಗದಿಪಡಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ರಾಮನಗರ ಜಿಲ್ಲಾಧಿಕಾರಿ ಮೂಲಕ ಸಂಸ್ಥೆಯವರಿಗೆ ಹಣ ಪಾವತಿಸಿ ಇಲ್ಲವೇ, ಭೂಮಿಯನ್ನು ಸರಕಾರ ವಶಕ್ಕೆ ಪಡೆದುಕೊಳ್ಳಲಿದೆ ಎಂದು ನೋಟಿಸ್ ಜಾರಿ ಮಾಡಲಾಗಿದೆ ಎಂದು ಅವರು ಹೇಳಿದರು.

ಸರಕಾರದ ನೋಟಿಸ್ ಪ್ರಶ್ನಿಸಿ ಸಂಸ್ಥೆಯವರು ಹೈಕೋರ್ಟ್ ಮೋರೆ ಹೋಗಿದ್ದಾರೆ. ರಾಜ್ಯ ಸರಕಾರವು ಈ ವಿಚಾರದಲ್ಲಿ ಯಾವುದೇ ವಿಳಂಬ ಧೋರಣೆ ಅನುಸರಿಸಿಲ್ಲ. ಸುಪ್ರೀಂಕೋರ್ಟ್‍ನ ಆದೇಶದ ಪ್ರಕಾರ ಸಂಪುಟ ಉಪಸಮಿತಿ ರಚಿಸಲಾಗಿದ್ದು, ಆ ಸಮಿತಿ ಒತ್ತುವರಿ ಭೂಮಿಗೆ ಪಾವತಿಸಬೇಕಾದ ಮೌಲ್ಯವನ್ನು ನಿಗದಿಪಡಿಸಿತ್ತು ಎಂದು ಅವರು ತಿಳಿಸಿದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ರಾಮಸ್ವಾಮಿ, ಸುಪ್ರೀಂಕೋರ್ಟ್‍ನ ಅಂತಿಮ ಆದೇಶವಾಗಿ ಐದು ವರ್ಷ ಕಳೆದರೂ ಒತ್ತುವರಿಯಾದ ಜಮೀನನ್ನು ಏಕೆ ವಶಕ್ಕೆ ಪಡೆದಿಲ್ಲ. ಇದಕ್ಕಿರುವ ಅಡ್ಡಿ ಆತಂಕವಾದರೂ ಏನು, ವಿಳಂಬದ ಹಿಂದೆ ಯಾವ ಶಕ್ತಿ ಇದೆ. ರೈತರು, ಬಡವರ ವಿಚಾರವಾಗಿದ್ದರೆ ಸರಕಾರ ಈ ರೀತಿ ಕೈ ಕಟ್ಟಿ ಕುಳಿತುಕೊಳ್ಳುತ್ತಿತ್ತೆ ಎಂದು ತರಾಟೆಗೆ ತೆಗೆದುಕೊಂಡರು.

ಎ.ಟಿ.ರಾಮಸ್ವಾಮಿ ವಾದಕ್ಕೆ ಬಿಜೆಪಿ ಸದಸ್ಯರಾದ ಅರಗಜ್ಞಾನೇಂದ್ರ, ಸಿ.ಟಿ.ರವಿ, ಬಸವರಾಜಬೊಮ್ಮಾಯಿ, ಕೆ.ಜಿ.ಬೋಪಯ್ಯ, ಸುರೇಶ್ ಕುಮಾರ್ ಸೇರಿದಂತೆ ಇನ್ನಿತತರು ದನಿಗೂಡಿಸಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸ್ಪೀಕರ್ ರಮೇಶ್‍ ಕುಮಾರ್, ಕವಿ ಇಕ್ಬಾಲ್ ಹೇಳುವಂತೆ ಧೂಳು ನಮ್ಮ ಮುಖದ ಮೇಲಿದೆ. ನಾವು ಕನ್ನಡಿಯನ್ನು ಒರೆಸುತ್ತಿದ್ದೇವೆ(ಧೂಲ್ ಚೆಹರೇ ಪರ್ ಥೀ ಔರ್ ಹಮ್ ಅಯಿನಾ ಸಾಫ್ ಕರ್ ರಹೇತೆ) ಎನ್ನುವಂತಾಗಿದೆ ಎಂದು ಮಾರ್ಮಿಕವಾಗಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X