Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಚಿವರ ಮನೆಯೆದುರು ಪ್ರತಿಭಟನೆ ವೇಳೆ...

ಸಚಿವರ ಮನೆಯೆದುರು ಪ್ರತಿಭಟನೆ ವೇಳೆ ಚಳಿಯಿಂದ ಮೃತಪಟ್ಟ ಬೋಧನಾ ಸಹಾಯಕ

ವಾರ್ತಾಭಾರತಿವಾರ್ತಾಭಾರತಿ17 Dec 2018 9:46 PM IST
share
ಸಚಿವರ ಮನೆಯೆದುರು ಪ್ರತಿಭಟನೆ ವೇಳೆ ಚಳಿಯಿಂದ ಮೃತಪಟ್ಟ ಬೋಧನಾ ಸಹಾಯಕ

ರಾಂಚಿ, ಡಿ.17: ಸಚಿವರ ಮನೆಯೆದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಬೋಧನಾ ಸಹಾಯಕರೊಬ್ಬರು (ಪ್ಯಾರಾ ಟೀಚರ್) ಚಳಿಯ ಬಾಧೆಯಿಂದ ಮೃತಪಟ್ಟ ಘಟನೆ ಜಾರ್ಖಂಡ್‌ನ ದುಮ್ಕಾ ಎಂಬಲ್ಲಿ ರವಿವಾರ ನಡೆದಿರುವುದಾಗಿ ವರದಿಯಾಗಿದೆ.

ಮೃತಪಟ್ಟವರನ್ನು ರಾಮಗಢ ವಿಭಾಗದ ಚಿನದಂಗಾಲ್‌ನಲ್ಲಿರುವ ಮಾಧ್ಯಮಿಕ ಶಾಲೆಯಲ್ಲಿ 13 ವರ್ಷದಿಂದ ಬೋಧನಾ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಚನ್ ಕುಮಾರ್ ದಾಸ್ ಎಂದು ಗುರುತಿಸಲಾಗಿದೆ.

ಇವರು ರಾಜ್ಯದ ಸಮಾಜ ಕಲ್ಯಾಣ ಸಚಿವ ಲೂಯಿಸ್ ಮರಾಂಡಿಯವರ ನಿವಾಸದೆದುರು ಶನಿವಾರ ರಾತ್ರಿ ಇತರ ಆರು ಸಹೋದ್ಯೋಗಿಗಳೊಂದಿಗೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಾರ್ಖಂಡ್‌ನಲ್ಲಿ 45 ಸಾವಿರಕ್ಕೂ ಅಧಿಕ ಬೋಧನಾ ಸಹಾಯಕರು ತಮ್ಮ ಸೇವೆ ಕಾಯಂ ಮಾಡಬೇಕೆಂದು ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು ,ಇದರಿಂದ 12 ಸಾವಿರಕ್ಕೂ ಅಧಿಕ ಶಾಲೆಗಳು ಮುಚ್ಚಿವೆ. ನೆರೆಯ ಛತ್ತೀಸ್‌ಗಢದಲ್ಲಿ ಎಂಟು ವರ್ಷ ಸೇವೆ ಸಲ್ಲಿಸಿರುವ ಬೋಧನಾ ಸಹಾಯಕರನ್ನು ಖಾಯಂಗೊಳಿಸಿರುವಂತೆ ತಮ್ಮನ್ನೂ ಖಾಯಂಗೊಳಿಸಬೇಕೆಂದು ಬೋಧನಾ ಸಹಾಯಕರು ಆಗ್ರಹಿಸುತ್ತಿದ್ದು, ಬಿಜೆಪಿ ಸಚಿವರು, ಸಂಸದರು ಹಾಗೂ ಶಾಸಕರ ನಿವಾಸದೆದುರು ಧರಣಿ ಮುಷ್ಕರ ಪ್ರತಿಭಟನೆ ಆರಂಭಿಸಿದ್ದಾರೆ. ಇದರಂತೆ ಶನಿವಾರ ರಾತ್ರಿ ದುಮ್ಕ ಪಟ್ಟಣದಲ್ಲಿರುವ ಸಚಿವ ಮರಾಂಡಿ ನಿವಾಸದೆದುರು ದಾಸ್ ಹಾಗೂ ಇತರ ಆರು ಮಂದಿ ಧರಣಿ ನಡೆಸುತ್ತಿದ್ದರು. ತೀವ್ರ ಚಳಿಯಿಂದ ದಾಸ್ ಮೃತಪಟ್ಟಿರುವ ಸಾಧ್ಯತೆಯಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ದುಮ್ಕ ಪೊಲೀಸ್ ಅಧೀಕ್ಷಕ ವೈ.ರಮೇಶ್ ಹೇಳಿದ್ದಾರೆ.

ತನ್ನ ಮಗನಿಗೆ ಯಾವುದೇ ಆರೋಗ್ಯ ಸಮಸ್ಯೆಯಿರಲಿಲ್ಲ ಎಂದು ಕಾಂಚನ್‌ದಾಸ್ ತಂದೆ ಅಖಿಲೇಶ್ ದಾಸ್ ತಿಳಿಸಿದ್ದಾರೆ. ಮಗ ಚಳಿಯಿಂದ ಸಾವನ್ನಪ್ಪಲು ರಾಜ್ಯ ಸರಕಾರ ಕಾರಣವಾಗಿದೆ ಎಂದವರು ಆರೋಪಿಸಿದ್ದಾರೆ. ಶಿಕ್ಷಕರು ಸಾವನ್ನಪ್ಪಿರುವ ಘಟನೆಗೆ ತೀವ್ರ ದುಖ ಸೂಚಿಸಿರುವ ಸಚಿವ ಮರಾಂಡಿ, ಮುಷ್ಕರವನ್ನು ಕೈಬಿಡುವಂತೆ ವಿನಂತಿಸಿದ್ದಾರೆ. ಸರಕಾರ ಶಿಕ್ಷಕರ ಬೇಡಿಕೆ ಈಡೇರಿಸುವ ಕುರಿತು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ಜೊತೆ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದ್ದಾರೆ. ಸರಕಾರದ ನಿರ್ಲಕ್ಷ್ಯದ ಧೋರಣೆಯಿಂದ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿವೆ. ಬೋಧನಾ ಸಹಾಯಕರ ಬೇಡಿಕೆ ಈಡೇರಿಸಲು ಕೇಂದ್ರ ಸರಕಾರ ಮಧ್ಯಪ್ರವೇಶಿಸಬೇಕು ಎಂದು ಜಾರ್ಖಂಡ್ ಮುಕ್ತಿ ಮೋರ್ಛಾ (ಜೆಎಂಎಂ) ಆಗ್ರಹಿಸಿದೆ. ರಾಜ್ಯದ ಬಿಜೆಪಿ ಸರಕಾರ ಮಾನವೀಯತೆ ಮರೆತಿದೆ. ಸಚಿವರ ವಿರುದ್ದ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಜೆಎಂಎಂ ವಕ್ತಾರ ಸುಪ್ರಿಯೊ ಭಟ್ಟಾಚಾರ್ಯ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ‘ಏಕೀಕೃತ್ ಪ್ಯಾರ ಶಿಕ್ಷಕ್ ಸಂಘರ್ಷ ಮೋರ್ಛಾ’ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X