Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಕೇಬಲ್ ಕಾಯ್ದೆ ವಿರೋಧಿಸಿ...

ಶಿವಮೊಗ್ಗ: ಕೇಬಲ್ ಕಾಯ್ದೆ ವಿರೋಧಿಸಿ ಆಪರೇಟರ್ ಗಳಿಂದ ಪ್ರತಿಭಟನಾ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ17 Dec 2018 10:58 PM IST
share
ಶಿವಮೊಗ್ಗ: ಕೇಬಲ್ ಕಾಯ್ದೆ ವಿರೋಧಿಸಿ ಆಪರೇಟರ್ ಗಳಿಂದ ಪ್ರತಿಭಟನಾ ರ‍್ಯಾಲಿ

ಶಿವಮೊಗ್ಗ, ಡಿ. 17: ಕೇಬಲ್ ವ್ಯವಹಾರ ನಿಯಂತ್ರಿಸುವ ಕಾಯ್ದೆಯನ್ನು ಡಿ.29 ರಿಂದ ಜಾರಿಗೊಳಿಸಲು ಮುಂದಾಗಿರುವ ಟ್ರಾಯ್ ನಿರ್ಧಾರ ವಿರೋಧಿಸಿ ಸೋಮವಾರ ಶಿವಮೊಗ್ಗ ಕೇಬಲ್ ಟಿ.ವಿ. ಆಪರೇಟರ್ಸ್ ಅಸೋಸಿಯೇಷನ್ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು. ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಟ್ರಾಯ್ ಮುಖ್ಯಸ್ಥರಿಗೆ ಮನವಿ ಪತ್ರ ಅರ್ಪಿಸಿತು.

ಕಳೆದ ಸರಿಸುಮಾರು 25 ವರ್ಷಗಳಿಂದ ಕೇಬಲ್ ಆಪರೇಟಿಂಗ್ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಪ್ರತ್ಯೇಕ - ಪರೋಕ್ಷವಾಗಿ ಸಾವಿರಾರು ಜನ ಈ ವೃತ್ತಿ ಮೂಲಕ ಜೀವನ ಕಂಡುಕೊಂಡಿದ್ದಾರೆ. ಸರ್ಕಾರದ ಸೂಚನೆಗಳನ್ನು ಪಾಲಿಸಿ, ಗ್ರಾಹಕರಿಗೆ ಉತ್ತಮ ಸೇವೆ ನೀಡಿಕೊಂಡು ಬರುತ್ತಿದ್ದೇವೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

29-12-2018 ರಿಂದ ಕೇಬಲ್ ವ್ಯವಹಾರ ನಿಯಂತ್ರಿಸುವ ಕಾಯ್ದೆಯನ್ನು ಕೇಂದ್ರದ ಅಂಗಸಂಸ್ಥೆಯಾದ ಟ್ರಾಯ್ ಜಾರಿಗೆ ತರಲು ನಿರ್ಧರಿಸಿದೆ. ಪ್ರತಿಯೊಂದು ಚಾನಲ್‍ನ ವೀಕ್ಷಣೆಗೆ ಎಂ.ಆರ್.ಪಿ. ದರ ಪಾವತಿಸಿ, ಗ್ರಾಹಕರು ವೀಕ್ಷಣೆ ಮಾಡಬೇಕು. ಕನಿಷ್ಠ 154 ರೂ.ಗಳಿಗೆ 100 ಫ್ರೀ ಟೂ ಏರ್ ಚಾನಲ್‍ಗಳನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು ಎಂದು ಸೂಚಿಸಿದೆ.

ಕೆಲ ಖಾಸಗಿ ಟಿ.ವಿ. ಚಾನಲ್‍ಗಳ ಜಾಹೀರಾತಿನಲ್ಲಿ ಕೇವಲ ತಮ್ಮ ಚಾನಲ್‍ಗಳ ದರದ ಬಗ್ಗೆ ಮಾತ್ರ ಮಾಹಿತಿ ನೀಡುತ್ತಿದ್ದಾರೆ. ಕನಿಷ್ಠ ದರ ಹಾಗೂ ತೆರಿಗೆಯ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಈ ಮೂಲಕ ಕೇಬಲ್ ಗ್ರಾಹಕರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಟಿ.ವಿ. ಜಾಹೀರಾತುಗಳಿಂದ ಗ್ರಾಹಕರು ಮತ್ತು ಕೇಬಲ್ ಆಪರೇಟರ್ ಗಳ ನಡುವೆಯೇ ವೈಮನಸ್ಸು ಉಂಟಾಗುವಂತಾಗಿದೆ. ಈ ಕಾರಣದಿಂದ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿರುವ ಜಾಹೀರಾತುಗಳಲ್ಲಿ ಪೂರ್ಣ ಪ್ರಮಾಣದ ವಿವರ ನೀಡುವಂತೆ ಸೂಚಿಸಬೇಕು. ಹಾಗೆಯೇ ಟ್ರಾಯ್ ಜಾರಿಗೆ ತರುತ್ತಿರುವ ಹೊಸ ನಿಯಮದ ಬಗ್ಗೆ ಗ್ರಾಹಕರಿಗೆ ಕೂಲಂಕಷ ಮಾಹಿತಿ ನೀಡುವ ಕಾರ್ಯ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಗ್ರಾಹಕರಿಗೆ ಹಾಗೂ ಕೇಬಲ್ ವ್ಯವಹಾರ ನಡೆಸುತ್ತಿರುವವರಿಗೆ ಹೊರೆಯಾಗದಂತೆ ಕಾಯ್ದೆ ರೂಪಿಸಬೇಕಾಗಿದೆ. ಈ ಕಾರಣದಿಂದ ಟ್ರಾಯ್ ಹೊಸ ನಿಯಮ ಜಾರಿಗೆ ಮುಂದಾಗಬಾರದು. ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸಂಘದ ಪ್ರಮುಖರಾದ ರಾಜಶೇಖರ್, ಈರಣ್ಣ, ವಿನಯ್ ಸೇರಿದಂತೆ ನೂರಾರು ಕೇಬಲ್ ಆಪರೇಟರ್ ಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X