Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವ ಆರ್ಥಿಕತೆಯು ಬೆಳೆಯುತ್ತಿದ್ದಾಗ...

ವಿಶ್ವ ಆರ್ಥಿಕತೆಯು ಬೆಳೆಯುತ್ತಿದ್ದಾಗ ನೋಟು ನಿಷೇಧದಿಂದ ಭಾರತದ ಬೆಳವಣಿಗೆ ಕುಂಠಿತಗೊಂಡಿತ್ತು

ಮಾಜಿ ಆರ್‌ಬಿಐ ಗವರ್ನರ್ ರಘುರಾಮ ರಾಜನ್

ವಾರ್ತಾಭಾರತಿವಾರ್ತಾಭಾರತಿ17 Dec 2018 11:05 PM IST
share
ವಿಶ್ವ ಆರ್ಥಿಕತೆಯು ಬೆಳೆಯುತ್ತಿದ್ದಾಗ ನೋಟು ನಿಷೇಧದಿಂದ ಭಾರತದ ಬೆಳವಣಿಗೆ ಕುಂಠಿತಗೊಂಡಿತ್ತು

ಹೊಸದಿಲ್ಲಿ,ಡಿ.17: ವಿಶ್ವ ಆರ್ಥಿಕತೆಯು ಬೆಳೆಯುತ್ತಿದ್ದಾಗ ನೋಟು ನಿಷೇಧವು ಭಾರತದ ಆರ್ಥಿಕ ಬೆಳವಣಿಗೆಯನ್ನು ಕುಂಠಿತಗೊಳಿಸಿತ್ತು ಮತ್ತು ಇದು ಜಿಡಿಪಿಯ ಮೇಲೆ ಗಣನೀಯ ಪ್ರತಿಕೂಲ ಪರಿಣಾಮವನ್ನುಂಟು ಮಾಡಿತ್ತು ಎಂದು ಮಾಜಿ ಆರ್‌ಬಿಐ ಗವರ್ನರ್ ರಘುರಾಮ ರಾಜನ್ ಹೇಳಿದ್ದಾರೆ.

ನೋಟು ನಿಷೇಧವು ಭಾರತದ ಆರ್ಥಿಕ ಬೆಳವಣಿಗೆಯನ್ನು ಕುಂಠಿತಗೊಳಿಸಿತ್ತು ಎನ್ನುವುದನ್ನು ಪುನರ್‌ದೃಢೀಕರಿಸುವ ವರದಿಗಳನ್ನು ತಾನು ನೋಡಿದ್ದೇನೆ ಎಂದು ಆಂಗ್ಲ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದರು.

2017ರಲ್ಲಿ ವಿಶ್ವ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದ್ದರೆ ನಮ್ಮ ಆರ್ಥಿಕ ಪ್ರಗತಿ ನಿಧಾನಗೊಂಡಿತ್ತು ಎಂದು ಹೇಳಿದ ರಾಜನ್,ನೋಟು ನಿಷೇಧ ಮತ್ತು ಜಿಎಸ್‌ಟಿ ಅನುಷ್ಠಾನ ಭಾರತದ ಬೆಳವಣಿಗೆಗೆ ಹೊಡೆತ ನೀಡಿದ್ದವು. ಅಂದ ಹಾಗೆ ತಾನು ಜಿಎಸ್‌ಟಿ ವಿರೋಧಿಯಲ್ಲ,ಸುದೀರ್ಘಾವಧಿಯಲ್ಲಿ ಅದು ಉತ್ತಮ ಪರಿಕಲ್ಪನೆಯಾಗಿದೆ. ಆದರೆ ಅದನ್ನು ಅವಸರದಲ್ಲಿ ಅನುಷ್ಠಾನಗೊಳಿಸಲಾಗಿತ್ತು ಎಂದರು.

ಆರ್‌ಬಿಐ ಗವರ್ನರ್ ಆಗಿ ನಿಮ್ಮ ಅಧಿಕಾರಾವಧಿಯಲ್ಲಿ ನೋಟು ನಿಷೇಧವನ್ನು ಜಾರಿಗೊಳಿಸುವಂತೆ ನಿಮಗೆ ಸೂಚಿಸಲಾಗಿತ್ತೇ ಎಂಬ ಪ್ರಶ್ನೆಗೆ,ತನ್ನ ಅಭಿಪ್ರಾಯವನ್ನು ಕೋರಲಾಗಿತ್ತು ಮತ್ತು ಅದು ಒಳ್ಳೆಯ ಕಲ್ಪನೆಯಲ್ಲ ಎನ್ನುವುದು ತನ್ನ ಅಭಿಪ್ರಾಯವಾಗಿತ್ತು ಎಂದು ರಘುರಾಮ ರಾಜನ್ ಉತ್ತರಿಸಿದರು.

ಜಿಎಸ್‌ಟಿ ವ್ಯವಸ್ಥೆಯನ್ನು ಇನ್ನೂ ಬಹಳ ಉತ್ತಮ ರೀತಿಯಲ್ಲಿ ಜಾರಿಗೊಳಿಸಬಹುದಿತ್ತು ಮತ್ತು ಜಿಎಸ್‌ಟಿಯು ಐದು ವಿವಿಧ ತೆರಿಗೆ ಹಂತಗಳ ಬದಲು ಒಂದೇ ತೆರಿಗೆ ದರವನ್ನು ಹೊಂದಿರಬೇಕೇ ಎನ್ನುವುದು ಚರ್ಚೆಯ ವಿಷಯವಾಗಿದೆ ಎಂದರು.

ಬ್ಯಾಂಕುಗಳ ಕೆಟ್ಟ ಸಾಲಗಳು ಮತ್ತು ವಂಚಕರ ಕುರಿತಂತೆ ಅವರು,ತನ್ನ ಅಧಿಕಾರಾವಧಿಯಲ್ಲಿ ಬ್ಯಾಂಕ್ ವಂಚನೆಗಳ ಮೇಲೆ ನಿಗಾ ಘಟಕವನ್ನು ಆರ್‌ಬಿಐ ಸ್ಥಾಪಿಸಿತ್ತು. ಗಣ್ಯರು ಒಳಗೊಂಡಿದ್ದ ವಂಚನೆ ಪ್ರಕರಣಗಳ ಪಟ್ಟಿಯೊಂದನ್ನು ಸಹ ತಾನು ಪ್ರಧಾನಿ ಕಚೇರಿಗೆ ಕಳುಹಿಸಿದ್ದೆ ಮತ್ತು ಕನಿಷ್ಠ ಒಂದಿಬ್ಬರ ವಿರುದ್ಧವಾದರೂ ಪ್ರಕರಣ ದಾಖಲಿಸುವಂತಾಗಲು ಬ್ಯಾಂಕಿನೊಂದಿಗೆ ಸಮನ್ವಯಕ್ಕಾಗಿ ಆಗ್ರಹಿಸಿದ್ದೆ. ಆದರೆ ಈ ನಿಟ್ಟಿನಲ್ಲಿ ಏನಾದರೂ ಪ್ರಗತಿಯಾಗಿದೆಯೇ ಎನ್ನುವುದು ತನಗೆ ಗೊತ್ತಿಲ್ಲ. ಇದು ತುರ್ತು ಗಮನ ಹರಿಸಬೇಕಿರುವ ವಿಷಯವಾಗಿದೆ. ಒಬ್ಬನು ನುಣುಚಿಕೊಂಡರೆ ಇತರರೂ ಆತನನ್ನು ಅನುಸರಿಸಬಹುದು ಎನ್ನುವುದು ತನ್ನ ಕಳವಳಕ್ಕೆ ಕಾರಣವಾಗಿದೆ ಎಂದರು.

ಸಾಲ ಸುಸ್ತಿದಾರನಿಗೂ ವಂಚಕನಿಗೂ ವ್ಯತ್ಯಾಸವಿದೆ ಎಂದು ಹೇಳಿದ ಅವರು,ಸುಸ್ತಿದಾರರನ್ನು ಜೈಲಿಗೆ ಕಳುಹಿಸಲು ಆರಂಭಿಸಿದರೆ ಯಾರೂ ಸಾಲದ ಪಡೆಯುವ ಅಪಾಯವನ್ನು ತೆಗೆದುಕೊಳ್ಳುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X