Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸ: ಹಾಕಿದ್ದ ಡಾಂಬಾರು ತೆಗೆದು...

ಕಳಸ: ಹಾಕಿದ್ದ ಡಾಂಬಾರು ತೆಗೆದು ಮರುಡಾಂಬರೀಕರಣ ಮಾಡಿಸಿದ ನಾಗರಿಕರು

ಕಳಪೆ ಕಾಮಗಾರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Dec 2018 11:44 PM IST
share
ಕಳಸ: ಹಾಕಿದ್ದ ಡಾಂಬಾರು ತೆಗೆದು ಮರುಡಾಂಬರೀಕರಣ ಮಾಡಿಸಿದ ನಾಗರಿಕರು

ಕಳಸ, ಡಿ.17: ಪಟ್ಟಣದ ಮಂಜಿನಕಟ್ಟೆ ಸಮೀಪದ ರಸ್ತೆಯಲ್ಲಿ ಉಂಟಾಗಿದ್ದ ಭಾರೀ ಹೊಂಡ ಗುಂಡಿಗಳನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಮುಚ್ಚುತ್ತಿದ್ದ ವೇಳೆ ಕಳಪೆ ಕಾಮಗಾರಿಯನ್ನು ಕಂಡ ಗ್ರಾಮಸ್ಥರು ಕಾಮಗಾರಿ ತಡೆದು ಹೊಸ ಕಾಮಗಾರಿಯನ್ನು ನಡೆಸಿದ ಘಟನೆ ನಡೆಯಿತು.

ಕಳೆದ ವರ್ಷ ಇದೇ ರಸ್ತೆಗೆ ಡಾಂಬರೀಕರಣವನ್ನು ಮಾಡಲಾಗಿತ್ತು. ಆ ಸಂದರ್ಭದಲ್ಲೂ ಕಳಪೆ ಕಾಮಗಾರಿಯನ್ನು ಪ್ರಶ್ನಿಸಿದ್ದ ಗ್ರಾಮಸ್ತರು ಹಾಕಿರುವ ಡಾಂಬಾರನ್ನು ಕೀಳಿಸಿ ಹೊಸ ಡಾಂಬಾರೀಕರಣ ಮಾಡಿಸಿದ್ದರು. ಆದರೂ ಕೇವಲ ಎರಡೇ ತಿಂಗಳಿನಲ್ಲಿ ಮಂಜಿನಕಟ್ಟೆ ಸಮೀಪ ದೊಡ್ಡದಾದ ಹೊಂಡ ನಿರ್ಮಾಣವಾಗಿ ಇಲಾಖೆ ವತಿಯಿಂದ ನಡೆದ ಕಳಪೆ ಕಾಮಗಾರಿ ಬಹಿರಂಗಗೊಂಡಿತ್ತು. ಈ ವೇಳೆ ಗ್ರಾಮಸ್ಥರು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಹೊಂಡವನ್ನು ಮುಚ್ಚಿ ಮಳೆಗಾಲ ಕಳೆದ ಕೂಡಲೇ ಡಾಂಬಾರು ಹಾಕಿ ಮುಚ್ಚಿ ಕೊಡುವ ಭರವಸೆಯನ್ನು ಇಲಾಖಾಧಿಕಾರಿಗಳು ಹಾಗೂ ಗುತ್ತಿಗೆದಾರರು ನೀಡಿದ್ದರು.

ಅದರಂತೆ ಕಾಮಗಾರಿಯ ನಿರ್ವಹಣೆಗೆ ಸೋಮವಾರ ಬೆಳಗ್ಗೆಯೇ ಕಾರ್ಮಿಕರು ಬಂದು ತರಾತುರಿಯಲ್ಲಿ ಹೊಂಡಕ್ಕೆ ಜಲ್ಲಿ ಕಲ್ಲಿನ ಪುಡಿ ಸುರಿದು, ಮೇಲ್ಬಾಗಕ್ಕೆ ಡಾಂಬಾರು ಹಾಕಿ ಹೋಗುವ ಹಂತದಲ್ಲಿದ್ದರು. ಕೂಡಲೇ ಪಟ್ಟಣದ ನಾಗರಿಕರು ಗುಂಪುಗೂಡಿ ಕಳಪೆ ಕಾಮಗಾರಿಯ ಬಗ್ಗೆ ಪ್ರಶ್ನಿಸಿದರು. ಕ್ರಮಬದ್ಧವಾಗಿ ಡಾಂಬರೀಕರಣ ಮಾಡಬೇಕು, ಇಲ್ಲವಾದರೆ ಕೆಲಸವನ್ನು ಕೆಲಸ ಮಾಡಲು ಬಿಡುವುದಿಲ್ಲ, ಮನಬಂದಂತೆ ಕೆಲಸ ಮಾಡುವುದಾದರೇ ಕಾಮಗಾರಿ ಮಾಡಲೇ ಬೇಡಿ, ಮಾಡಿರುವ ಕೆಲಸ ಕೆಲ ದಿನಗಳಾದರೂ  ಬಾಳಿಕೆ ಬರಬೇಕು ಎಂದು ಕಾಮಗಾರಿಗೆ ಬಂದಿರುವ ವಾಹನಗಳನ್ನು ತಡೆಹಿಡಿದರು. ಆದರೆ ಈ ಸಂದರ್ಭದಲ್ಲಿ ಸಂಬಂಧಿಸಿದ ಇಂಜಿನಿಯರಾಗಲೀ, ಗುತ್ತಿಗೆದಾರರಾಗಲೀ ಸ್ಥಳಕ್ಕೆ ಬಾರದ ಕಾರಣ, ಸ್ಥಳದಲ್ಲಿದ್ದ ಕಾರ್ಮಿಕರು, ನಮಗೆ ಕಾಮಗಾರಿ ಮಾಡಲು ಸೂಚಿಸಿದ್ದಾರೆಂದು ಹೇಳಿದಾಗ ಪಟ್ಟು ಬಿಡದ ನಾಗರಿಕರು, ಕಳಪೆ ಕೆಲಸ ಮಾಡಿದ್ದನ್ನು ಕಿತ್ತು ಕ್ರಮಬದ್ಧವಾಗಿ ಗುಂಡಿ ಮುಚ್ಚಿಸಿ ಡಾಂಬಾರು ಹಾಕುವವರೆಗೂ ಸ್ಥಳ ಬಿಟ್ಟು ಕದಲದೇ ಮರು ಡಾಂಬಾರೀಕರಣ ಮಾಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಕುಮಾರ್, ಸದಸ್ಯರಾದ ರಾಮಮೂರ್ತಿ, ಭಾಸ್ಕರ್, ಪಟ್ಟಣದ ನಾಗರಿಕರಾದ ಜಯಂತ್ ತೆಂಡೂಲ್ಕರ್, ಅಂಬರೀಶ್ ಭಟ್, ಟಿಟ್ಟು ತೋಮಸ್, ಯೊಗೀಶ್ ಭಟ್, ವೀರೇಂದ್ರ, ಜಗದೀಶ್ ಭಟ್, ಶೇಖರ ಶೆಟ್ಟಿ, ಅಬ್ಬಕ್ಕ, ಮಹೇಶ್ ಇತರರು ಸ್ಥಳದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X