Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಹಗರಣಗಳ ತನಿಖೆಗೆ ಶಾಸಕ...

ಮಂಗಳೂರು ವಿವಿ ಹಗರಣಗಳ ತನಿಖೆಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Dec 2018 10:20 PM IST
share
ಮಂಗಳೂರು ವಿವಿ ಹಗರಣಗಳ ತನಿಖೆಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

ಮಂಗಳೂರು, ಡಿ.19: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಹಗರಣಗಳ ಕುರಿತು ರಾಜ್ಯ ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಬೆಗಾವಿ ಅಧಿವೇಶನದಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಅಧಿವೇಶನದಲ್ಲಿ ಮಾತನಾಡಿದ ಅವರು ಮಂಗಳೂರು ವಿವಿಯಲ್ಲಿ ಮೂರು ವರ್ಷಗಳಿಂದ ನಡೆದ ಹಗರಣಗಳು ಸರಕಾರದ ಗಮನಕ್ಕೆ ಬಂದಿದೆಯಾ ಎಂದು ಪ್ರಶ್ನೆ ಕೇಳಿದಾಗ ಗಮನಕ್ಕೆ ಬಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರು ಉತ್ತರ ನೀಡಿದ್ದಾರೆ.

ಮಂಗಳೂರು ವಿವಿಯಲ್ಲಿ ನಡೆದ ಹಗರಣಗಳ ಬಗ್ಗೆ ಪತ್ರಿಕೆ, ಟಿವಿ ಮಾಧ್ಯಮಗಳು ಸಾಕಷ್ಟು ವರದಿ ಮಾಡಿವೆ. ಇನ್ನು ಬೆಂಗಳೂರು ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಕೂಡ ದಾಖಲೆಗಳೊಂದಿಗೆ ಮಾತನಾಡಿದ್ದಾರೆ. ಅದು ಕೂಡ ಮರುದಿನ ಮಾಧ್ಯಮಗಳಲ್ಲಿ ವರದಿಯಾಗಿದೆ. ತಾನು ಕೂಡ ಜುಲೈ 13ರಂದು ಪತ್ರದ ಮೂಲಕ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಆದರೂ ಗಮನಕ್ಕೆ ಬಂದಿಲ್ಲ ಎನ್ನುವ ಉತ್ತರ ಬಂದಿರುವ ಬಗ್ಗೆ ಶಾಸಕ ಕಾಮತ್ ಸಭಾಧ್ಯಕ್ಷರ ಗಮನ ಸೆಳೆದರು.

ಇನ್ನು ಮಂಗಳೂರು ವಿವಿಯಲ್ಲಿ ನಡೆದ ಹಗರಣಗಳ ಬಗ್ಗೆ ತಪ್ಪಿತಸ್ಥರ ಮೇಲೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಮುದ್ರಣ ಮಾಧ್ಯಮದಲ್ಲಿ ವರದಿಯಾದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ವರದಿ ಪಡೆಯಲಾಗಿದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂಬ ಉತ್ತರ ಬಂದಿದೆ. ಆದರೆ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ದಾಖಲೆ ಸಮೇತ ನೀಡಬೇಕು ಎಂದು ಶಾಸಕ ಕಾಮತ್ ಒತ್ತಾಯಿಸಿದರು.

ಇಂತಹ ವಿಚಾರಗಳಿಗೆ ಸಮಯದ ಪರಿಧಿಯೊಳಗೆ ಸರಕಾರ ವಿಚಾರಣೆ ಮುಗಿಸಬೇಕು ಎಂದು ಸಭಾಧ್ಯಕ್ಷ ರಮೇಶ್ ಕುಮಾರ್ ಸೂಚಿಸಿದರು.
ಆ ಸಂದರ್ಭ ಕುಲಪತಿ ಆಗಿದ್ದವರು ಈಗ ನಿವೃತ್ತರಾಗಿದ್ದಾರೆ. ಆರೋಪಕ್ಕೆ ಒಳಗಾದವರು ಈಗ ಪದೋನ್ನತಿಗೊಂಡಿದ್ದಾರೆ ಎಂದು ಶಾಸಕ ಕಾಮತ್ ಹೇಳಿದಾಗ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮೂರು ತಿಂಗಳೊಳಗೆ ಇದನ್ನು ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X