Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜದಲ್ಲಿ ಮಾನವೀಯತೆ, ಪರಸ್ಪರ ಪ್ರೀತಿ,...

ಸಮಾಜದಲ್ಲಿ ಮಾನವೀಯತೆ, ಪರಸ್ಪರ ಪ್ರೀತಿ, ಶಾಂತಿ ನೆಲಸುವಂತಾಗಲಿ: ಅತೀ.ವಂ.ಡಾ.ಪೀಟರ್ ಪಾವ್ಲ್ ಸಲ್ದಾನಾ

ಮಂಗಳೂರು ಬಿಷಪ್‌ರಿಂದ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು

ವಾರ್ತಾಭಾರತಿವಾರ್ತಾಭಾರತಿ19 Dec 2018 11:49 PM IST
share
ಸಮಾಜದಲ್ಲಿ ಮಾನವೀಯತೆ, ಪರಸ್ಪರ ಪ್ರೀತಿ, ಶಾಂತಿ ನೆಲಸುವಂತಾಗಲಿ: ಅತೀ.ವಂ.ಡಾ.ಪೀಟರ್ ಪಾವ್ಲ್ ಸಲ್ದಾನಾ

ಮಂಗಳೂರು.ಡಿ.19: ದೇವರು ಮತ್ತು ಮಾನವತೆಯ ಸಮಾಗಮವೇ ಕ್ರಿಸ್ ಮಸ್ ಹಬ್ಬದ ಸಾರ. ಕ್ರಿಸ್ ಮಸ್ ಹಬ್ಬ ಮಾನವೀಯತೆ, ಪರಸ್ಪರ ಪ್ರೀತಿ, ಬಂಧುತ್ವ, ಶಾಂತಿ ಎಲ್ಲರ ನಡುವೆ ನೆಲಸುವಂತಾಗಲಿ ಎಂದು ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಬಿಷಪ್ ಅತೀ.ವಂ.ಡಾ.ಪೀಟರ್ ಪಾವ್ಲ್ ಸಲ್ದಾನ್ಹಾ ಕ್ರಿಸ್ ಮಸ್ ಹಬ್ಬದ ಮುಂಚಿತವಾಗಿ ಶುಭ ಕೋರಿದ್ದಾರೆ.

ನಗರದ ಕೊಡಿಯಾಲ ಬೈಲ್‌ನ ಬಿಷಪ್ ಹೌಸ್‌ನಲ್ಲಿ ಪತ್ರಕರ್ತರೊಂದಿಗೆ ಹಮ್ಮಿಕೊಂಡ ಸಮಾರಂಭದಲ್ಲಿಂದು ಕ್ರಿಸ್ ಮಸ್ ಹಬ್ಬದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು. ಮಾನವರನ್ನು ದೈವತ್ವದ ಕಡೆಗೆ ಮೇಲೆತ್ತಲು ದೇವರೆ ಮಾನವನಾಗಿ ಜನಿಸಿದ ಘಟನೆಯನ್ನು ಕ್ರಿಸ್‌ಮಸ್ ಹಬ್ಬವೆಂದು ನಾವು ನಂಬುತ್ತೇವೆ. ಏಸು ಸ್ವಾಮಿ ಬಡವರ ಗೋದಲಿಯ ಮೇಲೆ ಜನಿಸಿ ತಮ್ಮನ್ನೆ ಈ ಮನುಕುಲಕ್ಕೆ ಕೊಡುಗೆಯಾಗಿ ನೀಡಿದ ದಿನವನ್ನು ಕ್ರಿಸ್ಮಸ್ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಬಿಷಪ್ ತಿಳಿಸಿದ್ದಾರೆ.

ಎಲ್ಲಾ ಚರ್ಚ್‌ಗಳಲ್ಲಿ ಸೌಹಾರ್ದ ಸಭೆ: ಪ್ರಕೃತಿ ನಮ್ಮೆಲ್ಲರ ಮನೆ. ಅದನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಜೊತೆಗೆ ಮಾನವ ಸಮುದಾಯದ ನಡುವೆ ಪರಸ್ಪರ ಪ್ರೀತಿ, ವಿಶ್ವಾಸವನ್ನೊಳಗೊಂಡ ಶಾಂತಿ ಸೌಹಾರ್ದತೆಯ ಸಂಬಂಧ ಸದಾ ನೆಲೆಸಿರಬೇಕು. ಈ ಹಿನ್ನೆಲೆಯಲ್ಲಿ ಧರ್ಮಪ್ರಾಂತ್ಯದ ಎಲ್ಲಾ 124 ಇಗರ್ಜಿಗಳಲ್ಲೂ ಈ ಬಾರಿ ಎಲ್ಲರೊಂದಿಗೆ ಸೇರಿಕೊಂಡು ಸೌಹಾರ್ದ ಕ್ರಿಸ್‌ಮಸ್ ಆಚರಿಸಲು ತೀರ್ಮಾನಿಸಲಾಗಿದೆ. ಎಲ್ಲಾ ಚರ್ಚ್‌ಗಳಲ್ಲೂ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಷಪ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ಧರ್ಮ ಪ್ರಾಂತ್ಯದ ಶ್ರೇಷ್ಠ ವಂ.ಮ್ಯಾಕ್ಸಿಂ ನರೋನ್ಹಾ, ಚ್ಯಾನ್ಸಲರ್ ವಂ.ವಿಕ್ಟರ್ ಜಾರ್ಜ್ ಡಿ ಸೋಜ, ಸಾರ್ವಜನಿಕ ಸಂಪಕಾಧಿಕಾರಿಗಳಾದ ವಂ.ವಿಕ್ಟರ್ ವಿಜಯ್ ಲೋಬೊ, ಮಾರ್ಸೆಲ್‌ ಮೊಂತೆರೋ, ಪಾಲನಾ ಮಂಡಳಿಯ ಕಾರ್ಯದರ್ಶಿ ಮೆಲ್ವಿನ್ ನರೋನ್ಹಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X