ಬಿಜೆಪಿಯ ಪಶ್ಚಿಮಬಂಗಾಳದ ರಥಯಾತ್ರೆಗೆ ಕಲ್ಕತ್ತಾ ಹೈಕೋರ್ಟ್ ಅನುಮತಿ
![ಬಿಜೆಪಿಯ ಪಶ್ಚಿಮಬಂಗಾಳದ ರಥಯಾತ್ರೆಗೆ ಕಲ್ಕತ್ತಾ ಹೈಕೋರ್ಟ್ ಅನುಮತಿ ಬಿಜೆಪಿಯ ಪಶ್ಚಿಮಬಂಗಾಳದ ರಥಯಾತ್ರೆಗೆ ಕಲ್ಕತ್ತಾ ಹೈಕೋರ್ಟ್ ಅನುಮತಿ](https://www.varthabharati.in/sites/default/files/images/articles/2018/12/20/168862.jpg)
ಕೋಲ್ಕತಾ, ಡಿ.20: ಮುಂಬರುವ ಲೋಕಸಭಾ ಚುನಾವಣೆಗಿಂತ ಮೊದಲು ಬಿಜೆಪಿ ನಡೆಸಲು ಉದ್ದೇಶಿಸಿರುವ ಮೂರು ರಥಯಾತ್ರೆಗಳಿಗೆ ಕಲ್ಕತಾ ಹೈಕೋರ್ಟ್ ಗುರುವಾರ ಹಸಿರು ನಿಶಾನೆ ತೋರಿದೆ.
ಕೋಮುಗಲಭೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ರಥ ಯಾತ್ರೆಗೆ ಅನುಮತಿ ನಿರಾಕರಿಸಿದ ರಾಜ್ಯ ಸರಕಾರದ ನಿರ್ಧಾರವನ್ನು ಹೈಕೋರ್ಟಿನ ಏಕಸದಸ್ಯ ಪೀಠ ಈ ಹಿಂದೆ ಸಮ್ಮತಿಸಿತ್ತು.
ಆದರೆ, ಬಿಜೆಪಿಯ ಮೇಲ್ಮನವಿಯನ್ನು ಆಲಿಸಿದ ಹೈಕೋರ್ಟಿನ ವಿಭಾಗೀಯ ಪೀಠ, ರಥ ಯಾತ್ರೆಗೆ ಅನುಮತಿ ನೀಡಿದ್ದಲ್ಲದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ.
Next Story