Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಗಳು ಹುಟ್ಟಿರುವುದು ಜನರ...

ಧರ್ಮಗಳು ಹುಟ್ಟಿರುವುದು ಜನರ ಕಲ್ಯಾಣಕ್ಕಾಗಿ: ಪ್ರೊ.ಶ್ರೀಪತಿ ತಂತ್ರಿ

ವಾರ್ತಾಭಾರತಿವಾರ್ತಾಭಾರತಿ20 Dec 2018 8:40 PM IST
share
ಧರ್ಮಗಳು ಹುಟ್ಟಿರುವುದು ಜನರ ಕಲ್ಯಾಣಕ್ಕಾಗಿ: ಪ್ರೊ.ಶ್ರೀಪತಿ ತಂತ್ರಿ

ಉಡುಪಿ, ಡಿ. 20: ಪ್ರತಿಯೊಂದು ಧರ್ಮವನ್ನು ಆಳವಾಗಿ, ಮುಕ್ತ ಮನಸ್ಸಿ ನಿಂದ ಅಧ್ಯಯನ ಮಾಡಿದಾಗ ಎಲ್ಲ ಧರ್ಮಗಳು ಹುಟ್ಟಿರುವುದು ಜನರ ಕಲ್ಯಾಣಕ್ಕಾಗಿ ಎಂಬುದು ಅರ್ಥ ಆಗುತ್ತದೆ. ಆದುದರಿಂದ ನಾವೆಲ್ಲ ಒಂದಾಗಿ ಪ್ರೀತಿಯಿಂದ ಪ್ರಕೃತಿ ಜೊತೆ ಬದುಕಬೇಕಾಗಿದೆ ಎಂದು ಉಡುಪಿಯ ನಿವೃತ್ತ ಪ್ರಾಂಶುಪಾಲ ಪ್ರೊ.ಪಿ.ಶ್ರೀಪತಿ ತಂತ್ರಿ ಹೇಳಿದ್ದಾರೆ.

ಸೌಹಾರ್ದ ಸಮಿತಿ, ಕೆಥೋಲಿಕ್ ಸಭಾ ಉಡುಪಿ ಘಟಕ, ಉಡುಪಿ ಶೋಕಮಾತಾ ಇಗರ್ಜಿ, ಲಯನ್ಸ್ ಜಿಲ್ಲಾ 317ಸಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಸಂಗಮ ಇವುಗಳ ಸಂಯುಕ್ತ ಆಶ್ರಯದಲ್ಲಿ ಶೋಕಮಾತಾ ಇಗರ್ಜಿ ಯಲ್ಲಿ ಗುರುವಾರ ಆಯೋಜಿಸಲಾದ ಸರ್ವಧರ್ಮ ಕ್ರಿಸ್‌ಮಸ್ ಆಚರಣೆ ಯಲ್ಲಿ ಅವರು ಮಾತನಾಡುತಿದ್ದರು.

ಇಂದು ಧರ್ಮವನ್ನು ಕೆಳಮಟ್ಟದಲ್ಲಿ ಅರ್ಥೈಸುತ್ತಿರುವುದರಿಂದ ಧರ್ಮ- ಧರ್ಮಗಳ ಮಧ್ಯೆ ವಿಭಜನೆ ಉಂಟಾಗಿ ಸಂಘರ್ಷಗಳು ನಡೆಯುತ್ತಿವೆ. ಧರ್ಮ ಬೇರೆ ಬೇರೆಯಾದರೂ ದೇವರು ಮಾತ್ರ ಒಂದೆ. ಆದರೆ ಮಕ್ಕಳು ಮಾತ್ರ ಅದನ್ನು ಅರ್ಥ ಮಾಡಿಕೊಳ್ಳದೆ ಪರಸ್ಪರ ಬಡಿದಾಡಿಕೊಳ್ಳುತ್ತಿದ್ದಾರೆ. ನಾವಿಂದು ಬಹು ಮತೀಯ ವಿಶ್ವ ಸಮಾಜದಲ್ಲಿ ಹೊಂದಿಕೊಂಡು ಬದುಕಬೇಕು. ಆಹಾರ, ಬಣ್ಣ, ಭಾಷೆ, ಉಡುಪಿನಲ್ಲಿ ಭಿನ್ನತೆ ಹುಡುಕಿದರೆ ಸಂಘರ್ಷ ಉಂಟಾಗುತ್ತದೆ ಎಂದು ಅವರು ತಿಳಿಸಿದರು.

ಜಗತ್ತಿನಲ್ಲಿ ಧರ್ಮದ ಆಧಾರದಲ್ಲಿ ಮಾನವ ಹತ್ಯೆಯಾಗಿರುವುದು ಎಲ್ಲ ಸಾಂಕ್ರಾಮಿಕ ರೋಗ, ಪ್ರಾಕೃತಿಕ ವಿಕೋಪಗಳಿಗಿಂತ 10ಪಾಲು ಹೆಚ್ಚು. ಇದನ್ನು ಮುಂದುವರೆಸದೆ ಮಾನವೀಯತೆಯನ್ನು ನಾವು ಬೆಳೆಸಿಕೊಳ್ಳಬೇಕು. ಉಡುಪಿ ಯಲ್ಲಿ ಎಲ್ಲ ಧರ್ಮದವರು ಯಾವುದೇ ಸಂಘರ್ಷ ಇಲ್ಲದೆ ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಈ ಸೌಹಾದರ್ತೆಯ ಪರಿಸರವನ್ನು ಉಳಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಲ್ಪೆ ಯುಬಿಎಂ ಎಬ್ನಿಜರ್ ಚರ್ಚ್‌ನ ಪಾಸ್ಟರ್ ರೆ.ಡೇವಿಡ್ ನಿರ್ಮಾಣಿಕ್, ಕೇಂದ್ರ ಸರಕಾರದ ಆಯೋಗ್ಯ ವಿಭಾಗದ ಇನ್ಪೆಕ್ಷನ್ ಫ್ಯಾಕಲ್ಟಿ ಡಾ.ಮುಹಮ್ಮದ್ ರಫೀಕ್ ಹೂಡೆ ಮಾತನಾಡಿದರು.

ಶೋಕಮಾತಾ ಇಗರ್ಜಿಯ ಪ್ರಧಾನ ಧರ್ಮಗುರು ಅ.ವಂ.ವಲೇರಿಯನ್ ಮೆಂಡೋನ್ಸಾ ಸ್ವಾಗತಿಸಿದರು. ಸೌಹಾರ್ದ ಸಮಿತಿಯ ಸಂಚಾಲಕ ಮೈಕಲ್ ಡಿಸೋಜ ವಂದಿಸಿದರು. ಕಾರ್ಯಕ್ರಮ ಸಂಯೋಜಕ ಅಲ್ಫೋನ್ಸ್ ಡಿಕೋಸ್ಟಾ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಬೃಹತ್ ಗಾತ್ರದ ಕ್ರಿಸ್‌ಮಸ್ ಟ್ರೀ, ವಿವಿಧ ನಕ್ಷತ್ರಗಳ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರಿಸ್‌ಮಸ್ ಗೀತೆಗಳು, ಕೇಕ್ ವಿತರಣೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X