Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದ್ಯತಾ ವಲಯದತ್ತ ಬ್ಯಾಂಕ್‌ಗಳ...

ಆದ್ಯತಾ ವಲಯದತ್ತ ಬ್ಯಾಂಕ್‌ಗಳ ನಿರಾಸಕ್ತಿ: ಜಿಪಂ ಸಿಇಒ ಅಸಮಾಧಾನ

ದ.ಕ.ಜಿಲ್ಲಾ ಬ್ಯಾಂಕಿಂಗ್ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ20 Dec 2018 9:06 PM IST
share
ಆದ್ಯತಾ ವಲಯದತ್ತ ಬ್ಯಾಂಕ್‌ಗಳ ನಿರಾಸಕ್ತಿ: ಜಿಪಂ ಸಿಇಒ ಅಸಮಾಧಾನ

ಮಂಗಳೂರು, ಡಿ.20: ಆದ್ಯತಾ ವಲಯಗಳಾದ ಕೃಷಿ, ಮಧ್ಯಮ ಸಣ್ಣ ಮತ್ತು ಅತಿಸಣ್ಣ ರಂಗದ ಕೈಗಾರಿಗಳಿಗೆ ಸಾಲ ನೀಡಲು ಜಿಲ್ಲೆಯ ಬಹುತೇಕ ಬ್ಯಾಂಕ್‌ಗಳು ಆಸಕ್ತು ತೋರಿಸುತ್ತಿಲ್ಲ ಎಂದು ದ.ಕ.ಜಿಪಂ ಸಿಇಒ ಡಾ.ಸೆಲ್ವಮಣಿ ಆರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದ.ಕ.ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಬ್ಯಾಂಕಿಂಗ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನೇಕ ಸಭೆಗಳಲ್ಲಿ ಸಾರ್ವಜನಿಕರು ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಬ್ಯಾಂಕ್‌ನಿಂದ ಸಾಲ ಲಭಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಬೆಂಗಳೂರಿನ ಬಳಿಕ ದ.ಕ.ಜಿಲ್ಲೆಯು ಅತಿ ಹೆಚ್ಚು ನಗರೀಕರಣಗೊಂಡಿರುವ ಜಿಲ್ಲೆಯಾಗಿದೆ. ಉದ್ಯಮಕ್ಕೂ ಸಾಕಷ್ಟು ಅವಕಾಶ ಇದೆ. ಆದರೆ ಬ್ಯಾಂಕ್‌ಗಳು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸುತ್ತಿಲ್ಲ ಎಂದ ಡಾ. ಸೆಲ್ವಮಣಿ ಸೆಪ್ಟಂಬರ್ ಅಂತ್ಯಕ್ಕೆ ಕೃಷಿ ವಲಯಕ್ಕೆ ಜಿಲ್ಲೆಯ ಬ್ಯಾಂಕ್‌ಗಳು 2,074 ಕೋ.ರೂ. ಸಾಲ ನೀಡಿದ್ದು, ಶೇ. 42ರಷ್ಟು ಪ್ರಗತಿಯಷ್ಟೇ ಆಗಿದೆ. ಎಂಎಸ್‌ಎಂಇ ಕ್ಷೇತ್ರಕ್ಕೆ 1,325 ಕೋ.ರೂ.ಮುಂಗಡ ನೀಡಲಾಗಿದ್ದು ಶೇ.41ರಷ್ಟು ಪ್ರಗತಿ ಸಾಧಿಸಿದೆ. ಆದರೆ ಆದ್ಯತೇತರ ಕ್ಷೇತ್ರಗಳಲ್ಲಿ 5,078.81 ಕೋ.ರೂ. ಸಾಲ ನೀಡಿದ್ದು, ಶೇ.125ರಷ್ಟು ಸಾಧಿಸಲಾಗಿದೆ. ಒಟ್ಟಾರೆ ಬ್ಯಾಂಕ್‌ಗಳು ಇತರ ಕ್ಷೇತ್ರಗಳತ್ತ ಹೆಚ್ಚು ಗಮನ ಹರಿಸಿಲ್ಲ ಎಂದರು.

ಜಿಲ್ಲೆಯಲ್ಲಿ ಜೂನ್ ಅಂತ್ಯಕ್ಕೆ 645 ಬ್ಯಾಂಕ್ ಶಾಖೆಗಳಿದ್ದು, ಸೆಪ್ಟಂಬರ್ ಅಂತ್ಯಕ್ಕೆ 43,288.75 ಕೋ.ರೂ. ಠೇವಣಿ ಇರಿಸಿಕೊಳ್ಳುವ ಮೂಲಕ ಶೇ.8.53ರಷ್ಟು ಪ್ರಗತಿಯಾಗಿದೆ. ಮುಂಗಡ ನೀಡಿಕೆ ಶೇ. 19.5 ಪ್ರಗತಿಯೊಂದಿಗೆ 26,550 ಕೋ.ರೂ. ತಲಪಿದೆ. ಒಟ್ಟು ವಹಿವಾಟು ಶೇ 12.48ರ ಪ್ರಗತಿ ಸಹಿತ 70,062.78 ಕೋ.ರೂ. ಆಗಿದೆ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿದರು.

ಸಿಂಡಿಕೇಟ್ ಬ್ಯಾಂಕ್ ವಲಯ ವ್ಯವಸ್ಥಾಪಕ ಸುಧಾಕರ ಕೊಥಾರಿ, ಆರ್‌ಬಿಐ ಎಜಿಎಂ ಪಿ.ಕೆ.ಪಟ್ನಾಯಕ್, ಲೀಡ್ ಬ್ಯಾಂಕ್ ಮ್ಯಾನೇಜರ್ ಫ್ರಾನ್ಸಿಸ್ ಬೊರ್ಜಿಯಾ ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಮುಖ ಬ್ಯಾಂಕ್ ಸಹಿತ ಜಿಲ್ಲೆಯಲ್ಲಿನ ಬ್ಯಾಂಕ್‌ಗಳ ಸಿ.ಡಿ. ಅನುಪಾತ (ಸಾಲ-ಠೇವಣಿ ಅನುಪಾತ) ಭಾರತೀಯ ರಿಸರ್ವ್ ಬ್ಯಾಂಕ್ ಸೂಚಿತ ಶೇ.60ಕ್ಕಿಂತ ಕಡಿಮೆ ಇರುವುದು ಕೂಡ ಸಭೆಯಲ್ಲಿ ಬೆಳಕಿಗೆ ಬಂತು. ಹಿಂದಿನ ಸಾಲಿಗೆ ಹೋಲಿಸಿದರೆ ಅನುಪಾತದಲ್ಲಿ ತುಸು ಏರಿಕೆಯಾಗಿದೆ, ಸರಾಸರಿ ಅನುಪಾತ ಶೇ. 56.17ರಿಂದ ಶೇ. 61.85 ತಲಪಿದೆ. ಹಲವು ಪ್ರಮುಖ ಬ್ಯಾಂಕ್‌ಗಳ ಅನುಪಾತ ಶೇ.40ಕ್ಕೂ ಕಡಿಮೆ ಇರುವ ಬಗ್ಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.

ಜಿಲ್ಲೆಯಲ್ಲಿ ಗ್ರಾಮೀಣ ಮೂಲಸೌಕರ್ಯಗಳ ಆಧಾರದಲ್ಲಿ ನಬಾರ್ಡ್ ಸಿದ್ಧಪಡಿಸಿದ ಜಿಲ್ಲೆಯ 2019-20ರ ಸಂಭಾವ್ಯ ಸಂಯೋಜಿತ ಸಾಲ ಯೋಜನೆಯನ್ನು ಸಿಇಒ ಡಾ.ಸೆಲ್ವಮಣಿ ಬಿಡುಗಡೆಗೊಳಿಸಿದರು. ಆದ್ಯತಾ ವಲಯದ 8 ಪ್ರಮುಖ ಕ್ಷೇತ್ರಗಳಡಿ 12,659.04 ಕೋ.ರೂ.ನ ಸಾಲ ಯೋಜನೆ ಇದಾಗಿದೆ ಎಂದು ನಬಾರ್ಡ್ ಎಜಿಎಂ ಎಸ್.ರಮೇಶ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X