Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ ತಲುಪಿದ ಭಾರತೀಯ ಸಂಸ್ಕೃತಿ...

ದಾವಣಗೆರೆ ತಲುಪಿದ ಭಾರತೀಯ ಸಂಸ್ಕೃತಿ ಉತ್ಸವದ ಜಾಗೃತಿ ಜಾಥಾ

ವಾರ್ತಾಭಾರತಿವಾರ್ತಾಭಾರತಿ20 Dec 2018 11:25 PM IST
share
ದಾವಣಗೆರೆ ತಲುಪಿದ ಭಾರತೀಯ ಸಂಸ್ಕೃತಿ ಉತ್ಸವದ ಜಾಗೃತಿ ಜಾಥಾ

ದಾವಣಗೆರೆ,ಡಿ.20: ವಿಜಯಪುರ ಜಿಲ್ಲೆಯ ಕಗ್ಗೊಡು ಗ್ರಾಮದ ರಾಮನಗೌಡ ಬಾಪುಗೌಡ ಪಾಟೀಲ್ (ಯತ್ನಾಳ್) ಗೋರಕ್ಷಾ ಕೇಂದ್ರದಲ್ಲಿ ಡಿ.24 ರಿಂದ 31ರವರೆಗೆ ಭಾರತ್ ವಿಕಾಸ್ ಸಂಗಮದ ವತಿಯಿಂದ ರಾಷ್ಟ್ರ ಮಟ್ಟದಲ್ಲಿ ನಡೆಯುವ ಭಾರತೀಯ ಸಂಸ್ಕೃತಿ ಉತ್ಸವದ ಜಾಗೃತಿ ಜಾಥಾ ನಗರಕ್ಕೆ ಗುರುವಾರ ಆಗಮಿಸಿತು.

ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಅವರು ದೊಡ್ಡಪೇಠೆಯ ವಿರಕ್ತಮಠದಲ್ಲಿ ಜಾಥಾಕ್ಕೆ ಸ್ವಾಗತಿಸಿ, ಶುಭ ಕೋರಿದರು.

ಪ್ರಚಾರ ಜಾಥಾದ ಮುಖಂಡ ಜೂನಿಯರ್ ರಾಜಕುಮಾರ ಎಂದೇ ಖ್ಯಾತರಾದ ಅಶೋಕ ಬಸ್ತಿ ಮಾತನಾಡಿ, ಭಾರತೀಯ ಸಂಸ್ಕೃತಿ ಉತ್ಸವವು ಭಾರತೀಯ ಭವ್ಯ ಪರಂಪರೆ, ಇತಿಹಾಸದ ಮೇಲೆ ಬೆಳಕು ಚೆಲ್ಲಲಿದ್ದು, ಈ ಉತ್ಸವದ ಕುರಿತು ರಾಜ್ಯದ್ಯಂತ ಪ್ರಚಾರ ಕಾರ್ಯ ನಡೆದಿದೆ. ಡಿ.24ರಂದು ಬೆಳಿಗ್ಗೆ 10.30ಕ್ಕೆ ಭವ್ಯ ಮೆರವಣಿಗೆ ನಡೆಲಿಯದೆ. ದೇಶದ ಸಾಂಸ್ಕೃತಿಕ ಚಿತ್ರಣ ಬಿಂಬಿಸುವ ಕಲಾತಂಡಗಳು, ಸ್ಥಬ್ಧ ಚಿತ್ರಗಳು ಇದರಲ್ಲಿ ಇರಲಿವೆ. ಡಿ.25ರಂದು ಮಾತೃ ಸಂಗಮ ನಡೆಯಲಿದೆ. 50 ಸಾವಿರಕ್ಕೂ ಹೆಚ್ಚು ಮಾತೆಯರು ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಾತೃ ಭೋಜನ ಮಾಡಿಸುವರು. 26ರಂದು ಜ್ಞಾನ ಸಂಗಮ, 27ರಂದು ಕೃಷಿ ಸಂಗಮ, 28ರಂದು ಯುವ ಶಕ್ತಿ ಸಂಗಮ, 30ರಂದು ಗ್ರಾಮ ಸಂಗಮ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಡಿ.29 ಬೆಳಿಗ್ಗೆ 5.30ಕ್ಕೆ ಶ್ರೀ ಅಮೃತಾನಂದ ಸ್ವಾಮಿ, 30, 31ರಂದು ಬೆಳಿಗ್ಗೆ 5.30ಕ್ಕೆ ಬಾಬಾ ರಾಮ್‍ದೇವ್ ಅವರಿಂದ ಉಚಿತ ಯೋಗ ಶಿಬಿರ ನಡೆಯಲಿದೆ. ಕಾರ್ಯಕ್ರಮಗಳಲ್ಲಿ ವಿಶ್ವ ಪ್ರಸಿದ್ಧ ಕಲಾವಿದರು ಭಾಗವಹಿಸುವರು. ಜನಪದ ಹಾಡುಗಳು, ಏಕಪಾತ್ರಾಭಿನಯ ಸೇರಿದಂತೆ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಸ್ಕೃತಿ ಉತ್ಸವದ ಕುರಿತು ಎಲ್ಲಾ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಈಗ ಹಾವೇರಿಯಿಂದ ಬಂದಿದ್ದು, ದಾವಣಗೆರೆಯ ನಂತರ ಚಿತ್ರದುರ್ಗ ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದರು.

ಈ ಸಂದರ್ಭದಲ್ಲಿ ಶಿಮುಶ ಕಾಲೇಜಿನ ಪ್ರಾಚಾರ್ಯ ರವಿ, ವ್ಯವಸ್ಥಾಪಕ ಶರಣಬಸವ, ಎಸ್.ಜೆ.ಎಂ.ಸ್ಕೂಲ್‍ನ ಮುಖ್ಯಗುರು ಲತಾ, ರಾಜೇಂದ್ರ ಪ್ರಸಾದ, ವೀಣಾ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X