ಮೂವರು ಐಎಎಸ್ ಅಧಿಕಾರಿಗಳ ನಿಯೋಜನೆ
![ಮೂವರು ಐಎಎಸ್ ಅಧಿಕಾರಿಗಳ ನಿಯೋಜನೆ ಮೂವರು ಐಎಎಸ್ ಅಧಿಕಾರಿಗಳ ನಿಯೋಜನೆ](https://www.varthabharati.in/sites/default/files/images/articles/2018/12/21/169065.jpg)
ಬೆಂಗಳೂರು, ಡಿ. 21: ಹುದ್ದೆ ನಿರೀಕ್ಷೆಯಲ್ಲಿದ್ದ ಮೂವರು ಐಎಎಸ್ ಅಧಿಕಾರಿಗಳನ್ನು ತಮ್ಮ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣವೇ ನಿಯೋಜನೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಡಾ.ಜಿ.ಕಲ್ಪನಾ-ಎಸಿಎಸ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿ.ಎಚ್.ಅನಿಲ್ ಕುಮಾರ್-ಎಸಿಎಸ್ ಉನ್ನತ ಶಿಕ್ಷಣ ಇಲಾಖೆ ಹಾಗೂ ಡಿ.ಎಸ್. ರಮೇಶ್-ಯೋಜನಾ ನಿರ್ದೇಶಕರು ರಾಷ್ಟ್ರೀಯ ಆರೋಗ್ಯ ಮಿಷನ್ ಇಲ್ಲಿಗೆ ನೇಮಕ ಮಾಡಲಾಗಿದೆ.
Next Story