Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಪಾಲರಿಗೆ ಸಂಕಟ ತಂದ ರಾಜಧಾನಿ...

ರಾಜ್ಯಪಾಲರಿಗೆ ಸಂಕಟ ತಂದ ರಾಜಧಾನಿ ಬೆಕ್ಕುಗಳು: ತಕ್ಷಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ21 Dec 2018 9:48 PM IST
share
ರಾಜ್ಯಪಾಲರಿಗೆ ಸಂಕಟ ತಂದ ರಾಜಧಾನಿ ಬೆಕ್ಕುಗಳು: ತಕ್ಷಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಪತ್ರ

ಬೆಂಗಳೂರು, ಡಿ.21: ರಾಜ್ಯಪಾಲರಿಗೆ ಹಾಗೂ ಅವರನ್ನು ಭೇಟಿಯಾಗಲು ಬರುವ ಗಣ್ಯರಿಗೆ 25ಕ್ಕೂ ಹೆಚ್ಚು ಬೆಕ್ಕುಗಳು ತೊಂದರೆ ಉಂಟು ಮಾಡುತ್ತಿದ್ದು, ಅವುಗಳನ್ನು ಹಿಡಿಯುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಪತ್ರ ಬರೆಯಲಾಗಿದೆ.

ಬೆಕ್ಕುಗಳು ರಾಜಭವನದ ಪ್ರಶಾಂತ ವಾತಾವರಣವನ್ನು ಹಾಳು ಮಾಡುತ್ತಿದ್ದು, ರಾಜ್ಯಪಾಲರಿಗೆ ರಾತ್ರಿ ನಿದ್ದೆ ಮಾಡಲು ಬಿಡುತ್ತಿಲ್ಲವಂತೆ. ಅವರು ತಮ್ಮ ನಾಯಿಯೊಂದಿಗೆ ವಾಯು ವಿಹಾರಕ್ಕೆ ಹೋಗುವಾಗಲೂ ತೊಂದರೆ ಕೊಡುತ್ತಿವೆ. ಅಲ್ಲದೆ, ಬೆಕ್ಕುಗಳಿಂದಾಗಿ ಗಣ್ಯರ ಸಭಾಂಗಣ ಹಾಗೂ ಖಾಸಗಿ ನಿವಾಸ ಗಲೀಜಾಗಿದೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಬೆಕ್ಕಿನ ಕಾಟವನ್ನು ತಡೆಯಲು ವಿಫಲವಾದ ಕಾರಣ ಮೇಲಧಿಕಾರಿಗಳ ಕೋಪಕ್ಕೆ ಗುರಿಯಾದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆನಂದ್ ಅವರು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ, ರಾಜಭವನದ ಸನ್ನಿವೇಶವನ್ನು ಅವಲೋಕಿಸಲು ತೆರಳಿದ ಬಿಬಿಎಂಪಿ ಅಧಿಕಾರಿಗಳು ಅವುಗಳು ಸಾಕಿದ ಬೆಕ್ಕುಗಳಲ್ಲ. ಅವುಗಳನ್ನು ಹಿಡಿಯಲು ಅರಣ್ಯ ಇಲಾಖೆಯ ನೆರವಿನ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ತಪಾಸಣೆಗೆ ಹೋದಾಗ ಕೆಲವು ಮರಗಳ ಮೇಲೆ ಕುಳಿತಿದ್ದವು. ಇನ್ನೂ ಕೆಲವು ಉದ್ಯಾನದ ಪೊದೆಯಲ್ಲಿದ್ದವು. ಹೀಗಾಗಿ, ಪರಿಣಿತರನ್ನು ಕರೆಯಿಸುತ್ತೇವೆ. ಅವರು ಬೆಕ್ಕುಗಳ ವರ್ತನೆಯನ್ನು ಅಧ್ಯಯನ ಮಾಡಿ ಹಿಡಿಯಲು ಕೆಲವು ದಿನ ಬೇಕಾಗುತ್ತದೆ. ನಮಗೆ ನಾಯಿಗಳು ಹಿಡಿಯುವುದು ಗೊತ್ತು. ಬೆಕ್ಕುಗಳನ್ನು ಹಿಡಿದ ಅನುಭವವಿಲ್ಲ. ಬಹುತೇಕ ಬೆಕ್ಕುಗಳು ವಿಶೇಷ ತಳಿಯವು. ಸುತ್ತಮುತ್ತಲ ಪ್ರದೇಶದಿಂದ ರಾಜಭವನಕ್ಕೆ ಬಂದಿರಬಹುದು. ಅವುಗಳನ್ನು ಹಿಡಿಯಲು ಹೋದಾಗ ಕ್ಷಣ ಮಾತ್ರದಲ್ಲಿಯೇ ತಪ್ಪಿಸಿಕೊಂಡು ಹೋಗುತ್ತವೆ ಎಂದು ಬೀದಿ ನಾಯಿಗಳನ್ನು ಹಿಡಿಯುವ ಬಿಬಿಎಂಪಿ ತಂಡ ಹೇಳಿದೆ.

ಬೀದಿ ನಾಯಿಗಳನ್ನು ಹಿಡಿಯುವ ಬಿಬಿಎಂಪಿ ತಂಡ, ಬೆಕ್ಕುಗಳನ್ನು ಹಿಡಿಯಲು ಹೆಣಗಾಡುತ್ತಿದೆ. ಬೆಕ್ಕಿನ ವರ್ತನೆಗಳನ್ನು ಅಧ್ಯಯನ ಮಾಡಿ ಪುಲಾಯಿಸಿ ಹಿಡಿಯುವ ತಜ್ಞರ ತಂಡವನ್ನು ನಿಯೋಜಿಸಲು ಅದು ಮುಂದಾಗಿದ್ದು, ಅವುಗಳನ್ನು ಹಿಡಿದು ಪುನರ್ವಸತಿ ಕಲ್ಪಿಸಲು ಚಿಂತನೆ ನಡೆಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X