Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಮಹಿಳಾ ತಂಡ ಪ್ರಕಟ: ನಾಯಕತ್ವ...

ಭಾರತ ಮಹಿಳಾ ತಂಡ ಪ್ರಕಟ: ನಾಯಕತ್ವ ಉಳಿಸಿಕೊಂಡ ಮಿಥಾಲಿ, ಹರ್ಮನ್‌ಪ್ರೀತ್

ನ್ಯೂಝಿಲೆಂಡ್ ವಿರುದ್ಧ ಏಕದಿನ, ಟ್ವೆಂಟಿ-20 ಸರಣಿ

ವಾರ್ತಾಭಾರತಿವಾರ್ತಾಭಾರತಿ21 Dec 2018 11:48 PM IST
share
ಭಾರತ ಮಹಿಳಾ ತಂಡ ಪ್ರಕಟ: ನಾಯಕತ್ವ ಉಳಿಸಿಕೊಂಡ ಮಿಥಾಲಿ, ಹರ್ಮನ್‌ಪ್ರೀತ್

ಹೊಸದಿಲ್ಲಿ, ಡಿ.21: ಮುಂದಿನ ತಿಂಗಳು ಆರಂಭವಾಗಲಿರುವ ನ್ಯೂಝಿಲೆಂಡ್ ಕ್ರಿಕೆಟ್ ಪ್ರವಾಸಕ್ಕೆ ಭಾರತ ಮಹಿಳಾ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಮಿಥಾಲಿ ರಾಜ್ ಹಾಗೂ ಹರ್ಮನ್‌ಪ್ರೀತ್ ಕೌರ್ ಕ್ರಮವಾಗಿ ಏಕದಿನ ಹಾಗೂ ಟ್ವೆಂಟಿ-20 ತಂಡದಲ್ಲಿ ನಾಯಕಿ ಸ್ಥಾನ ಉಳಿಸಿಕೊಂಡಿದ್ದಾರೆ. ಫಾರ್ಮ್‌ನಲ್ಲಿಲ್ಲದ ವೇದಾ ಕೃಷ್ಣಮೂರ್ತಿಯನ್ನು ಎರಡೂ ತಂಡಗಳಿಂದ ಕೈಬಿಡಲಾಗಿದೆ.

ಐಸಿಸಿ ಮಹಿಳಾ ಚಾಂಪಿಯನ್‌ಶಿಪ್‌ಗೆ ಪೂರ್ವಭಾವಿ ಯಾಗಿ ಭಾರತ ಜ.24ರಿಂದ ನ್ಯೂಝಿಲೆಂಡ್ ವಿರುದ್ಧ ತಲಾ 3 ಪಂದ್ಯಗಳ ಏಕದಿನ ಹಾಗೂ ಟ್ವೆಂಟಿ-20 ಸರಣಿಯನ್ನು ಆಡಲಿದೆ. ಭಾರತ ಕಳೆದ ತಿಂಗಳು ವಿಶ್ವ ಟ್ವೆಂಟಿ-20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ಗೆ ಶರಣಾದ ಬಳಿಕ ಇದೇ ಮೊದಲ ಬಾರಿ ಅಂತರ್‌ರಾಷ್ಟ್ರೀಯ ಸರಣಿ ಆಡುತ್ತಿದೆ. ಡಬ್ಲುವಿ ರಾಮನ್ ಮಹಿಳಾ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾದ ಮರುದಿನವೇ ಏಕದಿನ ಹಾಗೂ ಟ್ವೆಂಟಿ-20 ಸರಣಿಗೆ 15 ಸದಸ್ಯೆಯರನ್ನು ಒಳಗೊಂಡ ತಂಡ ಘೋಷಿಸಲಾಗಿದೆ.

ನ.30 ರಂದು ರಮೇಶ್ ಪೊವಾರ್ ಕೋಚ್ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ, ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಪೊವಾರ್ ಹಾಗೂ ಹರ್ಮನ್‌ಪ್ರೀತ್ ವಿಶ್ವಕಪ್ ಸೆಮಿ ಫೈನಲ್ ಪಂದ್ಯದಿಂದ ಮಿಥಾಲಿ ರಾಜ್‌ರನ್ನು ಕೈಬಿಡುವ ಒಮ್ಮತದ ನಿರ್ಧಾರಕ್ಕೆ ಬಂದಿದ್ದರು. ಆದರೆ, ಈ ನಿರ್ಧಾರ ವಿವಾದಕ್ಕೆ ಕಾರಣವಾಗಿತ್ತು. ಹರ್ಮನ್‌ಪ್ರೀತ್ ಹಾಗೂ ಟ್ವೆಂಟಿ-20 ತಂಡದ ಉಪ ನಾಯಕಿ ಸ್ಮತಿ ಮಂಧಾನ ಪೊವಾರ್ ಬೆಂಬಲಕ್ಕೆ ನಿಲ್ಲುವುದರೊಂದಿಗೆ ಮಹಿಳಾ ತಂಡದಲ್ಲಿ ಭಿನ್ನಾಭಿಪ್ರಾಯ ಕಂಡುಬಂದಿತ್ತು. ಹರ್ಮನ್‌ಪ್ರೀತ್ ಹಾಗೂ ಮಿಥಾಲಿ ತಮ್ಮಾಳಗಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು ಒಟ್ಟಿಗೆ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಶುಕ್ರವಾರ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಮಿಥಾಲಿ ಹಾಜರಾಗಿದ್ದರು. ಆಸ್ಟ್ರೇಲಿಯದಲ್ಲಿ ವನಿತೆಯರ ಬಿಗ್ ಬ್ಯಾಶ್ ಟೂರ್ನಿಯಲ್ಲಿ ಭಾಗವಹಿಸಿರುವ ಕೌರ್ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು. ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಹಾಗೂ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಸಮ್ಮುಖದಲ್ಲಿ ಆಯ್ಕೆ ಸಮಿತಿ ಮುಖ್ಯಸ್ಥೆ ಹೇಮಲತಾ ಕಾಲಾ ತಂಡವನ್ನು ಘೋಷಿಸಿದರು.

ಕಳಪೆ ಫಾರ್ಮ್‌ನಲ್ಲಿರುವ ಕನ್ನಡತಿ ವೇದಾರನ್ನು ಎರಡೂ ತಂಡಗಳಿಂದ ಕೈಬಿಡಲಾಗಿದೆ. ವೇದಾ ಬದಲಿಗೆ ಮೋನಾ ಮೆಶ್ರಮ್‌ರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಏಕದಿನ ತಂಡ

ಮಿಥಾಲಿ ರಾಜ್(ನಾಯಕಿ), ಪೂನಮ್ ರಾವತ್, ಸ್ಮತಿ ಮಂಧಾನ, ಜೆಮಿಮ್ಹಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್, ದೀಪ್ತಿ ಶರ್ಮಾ, ತಾನ್ಯಾ ಭಾಟಿಯಾ(ವಿಕೆಟ್‌ಕೀಪರ್), ಮೋನಾ ಮೆಶ್ರಮ್, ಏಕ್ತಾ ಬಿಶ್ತ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಪೂನಮ್ ಯಾದವ್, ರಾಜೇಶ್ವರಿ ಗಾಯಕ್ವಾಡ್, ಜುಲನ್ ಗೋಸ್ವಾಮಿ, ಶಿಖಾ ಪಾಂಡೆ.

ಟಿ-20 ತಂಡ

ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮತಿ ಮಂಧಾನ(ಉಪ ನಾಯಕಿ), ಮಿಥಾಲಿ ರಾಜ್, ದೀಪ್ತಿ ಶರ್ಮಾ, ಜೆಮಿಮ್ಹಾ ರೋಡ್ರಿಗಸ್, ಅನುಜಾ ಪಾಟೀಲ್, ದಯಾಲನ್ ಹೇಮಲತಾ, ಮಾನ್ಸಿ ಜೋಶಿ, ಶಿಖಾ ಪಾಂಡೆ, ತಾನ್ಯಾ ಭಾಟಿಯಾ(ವಿಕೆಟ್‌ಕೀಪರ್), ಪೂನಮ್ ಯಾದವ್, ಏಕ್ತಾ ಬಿಶ್ತ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಪ್ರಿಯಾ ಪೂನಿಯಾ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X