Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಪೊರೇಟ್ ಅಪರಾಧದ ಬಗ್ಗೆ ಇರಲಿ ಎಚ್ಚರ:...

ಕಾರ್ಪೊರೇಟ್ ಅಪರಾಧದ ಬಗ್ಗೆ ಇರಲಿ ಎಚ್ಚರ: ಡಾ. ಸತಿನಾಥ್

ವಾರ್ತಾಭಾರತಿವಾರ್ತಾಭಾರತಿ22 Dec 2018 4:34 PM IST
share
ಕಾರ್ಪೊರೇಟ್ ಅಪರಾಧದ ಬಗ್ಗೆ ಇರಲಿ ಎಚ್ಚರ: ಡಾ. ಸತಿನಾಥ್

ಮಂಗಳೂರು, ಡಿ.22: ಭೋಪಾಲ ಅನಿಲ ದುರಂತವು ದೇಶಕ್ಕೆ ಕಾರ್ಪೊರೇಟ್ ಅಪರಾಧದ ಬಗ್ಗೆ ಸಾಕಷ್ಟು ಪಾಠವನ್ನು ಕಲಿಸಿದೆ. ಇದರಿಂದ ಜನತೆ ಎಚ್ಚೆತ್ತುಕೊಳ್ಳದಿದ್ದರೆ ಮತ್ತೊಂದು ದುರಂತಕ್ಕೆ ಆಹ್ವಾನ ನೀಡಿದಂತಾಗುತ್ತದೆ ಎಂದು ಭೋಪಾಲ ಅನಿಲ ದುರಂತ ಸಂತ್ರಸ್ತರ ಪರ ಹೋರಾಟಗಾರ ಡಾ.ಸತಿನಾಥ ಸಾರಂಗಿ ಎಚ್ಚರಿಸಿದ್ದಾರೆ.

ನಗರದ ಸಂತ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ ಸಹಕಾರದಲ್ಲಿ ಶನಿವಾರ ‘ರಾಸಾಯನಿಕ ಕೈಗಾರಿಕೆಗಳು ಮತ್ತು ಸಾರ್ವಜನಿಕ ಅಸಹಾಯಕತೆ-ಭೋಪಾಲದ ಅನುಭವ ಮತ್ತು ಪಾಠಗಳ’ ವಿಷಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಎಂಆರ್‌ಪಿಎಲ್ ಸಮೀಪದ ಪ್ರದೇಶಗಳಿಗೆ ನಿನ್ನೆ ಭೇಟಿ ನೀಡುವಾಗ ನನಗೆ ಭೋಪಾಲ ದುರಂತ ನೆನಪಾಯಿತು. ಇಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಸಂಗ್ರಹಾಗಾರ ಇದೆ. ಅಲ್ಲಿನ ಸುತ್ತಮುತ್ತಲಿನ ಜಲಮೂಲಗಳನ್ನು ನೋಡಿದಾಗ ಈಗಾಗಲೇ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸರಕಾರಿ ಇಲಾಖೆಗಳಿಂದ ಸಮಗ್ರ ಅಧ್ಯಯನ ನಡೆಸಬೇಕು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದರು.

ಹಸಿರು ಕ್ರಾಂತಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆಯಾದರೂ ಇದು ಸಂಶ್ಲೇಷಿತ ರಾಸಾಯನಿಕಗಳ ಬಳಕೆಗೆ ಹೆಚ್ಚು ಪ್ರೋತ್ಸಾಹ ನೀಡಿರುವುದರಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಎರಡನೆ ಮಹಾಯುದ್ಧದ ಬಳಿಕ ಈ ಸಂಶ್ಲೇಷಿತ ರಾಸಾಯನಿಕಗಳನ್ನು ಕೀಟನಾಶಕ, ರಸಗೊಬ್ಬರಗಳ ಉತ್ಪನ್ನಗಳಿಗೆ ಬಳಸಿಕೊಳ್ಳಲಾಯಿತು. ಇದರ ಪರಿಣಾಮವೇ ಭೋಪಾಲದಲ್ಲಿ ತಲೆ ಎತ್ತಿದ ರಾಸಾಯನಿಕ ಕಾರ್ಖಾನೆ. ಆ ಕಾರ್ಖಾನೆ ಅಮೆರಿಕದಲ್ಲೂ ಕಾರ್ಯನಿರ್ವಹಿಸುತ್ತಿತ್ತು. ಆದರೆ ಭೋಪಾಲದ ಕಾರ್ಖಾನೆಯ ವಿನ್ಯಾಸ, ಸ್ಥಳ ಮತ್ತು ನಿರ್ವಹಣೆಯಲ್ಲಿ ಅಜಗಜಾಂತರದ ವ್ಯತ್ಯಾಸವೇ ದುರಂತಕ್ಕೆ ಕಾರಣ. ಕಂಪೆನಿಯು ತನ್ನ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೈಗೊಂಡ ಕೆಲವೊಂದು ನಿರ್ಧಾರಗಳು ಆ ಕಾರ್ಖಾನೆ ಜನಸಾಮಾನ್ಯರಿಗೆ ಅಸುರಕ್ಷಿತವಾಗಿ ಸಾವಿರಾರು ಜನರನ್ನು ಬಲಿಪಡೆಯಿತು. ಈ ದುರಂತ ಆಕಸ್ಮಿಕವಲ್ಲ. ಬದಲಾಗಿ ಇದೊಂದು ಕಾರ್ಪೊರೇಟ್ ಅಪರಾಧ ಎಂದು ಅವರು ವಿಶ್ಲೇಷಿಸಿದರು.

ಇಂತಹ ಕಾರ್ಪೊರೇಟ್ ಅಪರಾಧ ಮಂಗಳೂರಿನಲ್ಲಿ ಆಗಬಾರದೆಂದರೆ ಜನರು ಎಚ್ಚೆತ್ತು ಜನಪ್ರತಿನಿಧಿಗಳನ್ನು, ನಮ್ಮನ್ನಾಳುವವರನ್ನು ಪ್ರಶ್ನಿಸುವಂತಾಗಬೇಕು ಎಂದರು.

ಬಳಿಕ ವಿದ್ಯಾರ್ಥಿಗಳ ಜತೆಗಿನ ಸಂವಾದದ ಸಂದರ್ಭ, ಎಂಆರ್‌ಪಿಎಲ್‌ನಿಂದ ಪೆಟ್ರೋಲಿಂಯ ಉತ್ಪನ್ನಗಳನ್ನು ತಯಾರಿಸಲಾಗುತ್ತಿರುವುದರಿಂದ ಈಗಾಗಲೇ ಜಲಮೂಲಗಳ ಮೇಲೆ ಪರಿಣಾಮ ಬಿದ್ದಿರುವುದನ್ನು ಅಲ್ಲಗಳೆಯಲಾಗದು. ಈ ಬಗ್ಗೆ ಸಮಗ್ರ ವೈಜ್ಞಾನಿಕ ಅಧ್ಯಯನದ ಅಗತ್ಯವಿದೆ ಎಂದರು.

ಕಾರ್ಪೊರೇಟ್ ಅಪರಾಧಕ್ಕೆ ತುತ್ತಾಗುವುದು ಬಡವರ್ಗದ ಜನತೆ. ಅವರಿಗೆ ಸರಕಾರದ ನೆರವು, ಬೆಂಬಲ ಇರುವುದಿಲ್ಲ ಎಂದು ಅವರು ಹೇಳಿದರು.

ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ. ಫಾ.ಪ್ರವೀಣ್ ಮಾರ್ಟಿಸ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ವಕ್ತಾರ ಟಿ.ಆರ್.ಭಟ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾ ದಿನಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X