Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುತ್ಲೂರು: ಡಿ.23ರಂದು ಪತ್ರಕರ್ತರ...

ಕುತ್ಲೂರು: ಡಿ.23ರಂದು ಪತ್ರಕರ್ತರ ಗ್ರಾಮವಾಸ್ತವ್ಯ

ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್, ಪೊಲೀಸರ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ22 Dec 2018 10:22 PM IST
share
ಕುತ್ಲೂರು: ಡಿ.23ರಂದು ಪತ್ರಕರ್ತರ ಗ್ರಾಮವಾಸ್ತವ್ಯ

ವೇಣೂರು, ಡಿ. 22: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ತಾ. ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ದ.ಕ.ಜಿ.ಪಂ., ದ.ಕ. ಪೊಲೀಸ್ ಇಲಾಖೆ ಹಾಗೂ ನಾರಾವಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಕುತ್ಲೂರಿನಲ್ಲಿ ಡಿ.23ರಂದು ನಡೆಯಲಿರುವ ಪತ್ರಕರ್ತರ ಗ್ರಾಮವಾಸ್ತವ್ಯ ಹಾಗೂ ಎ.ಜೆ. ಆಸ್ಪತ್ರೆಯ ಸಹಯೋಗದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರಕ್ಕೆ ಕುತ್ಲೂರು ಶಾಲೆಯಲ್ಲಿ ಸರ್ವ ವ್ಯವಸ್ಥೆ ಏರ್ಪಡಿಸಲಾಗಿದೆ. ಶನಿವಾರ ಬೆಳ್ತಂಗಡಿ ಪ್ರಭಾರ ತಹಶೀಲ್ದಾರ್ ಅನಂತ ಶಂಕರ ಅವರು ಭೇಟಿ ನೀಡಿದರು.

ಕಳೆದ ಡಿ.19ರಂದು ಪುತ್ತೂರು ಸಹಾಯಕ ಆಯುಕ್ತರ ಸಮ್ಮುಖದಲ್ಲಿ ತಾಲೂಕು ಮಟ್ಟದ ಅಧಿಕಾರಗಳು, ಜಿಲ್ಲಾ ಹಾಗೂ ತಾಲೂಕು ಪತ್ರಕರ್ತರ ಸಂಘದ ಸದಸ್ಯರು ಕುತ್ಲೂರಿನಲ್ಲಿ ಪೂರ್ವಭಾವಿ ಸಭೆ ಕರೆದು ಕುತ್ಲೂರು ಗ್ರಾಮವನ್ನು ಗ್ರಾಮವಾಸ್ತವ್ಯಕ್ಕೆ ಅಂತಿಮಗೊಳಿಸಿದ್ದರು.

ಅರ್ಜಿ ಸ್ವೀಕಾರ
ತಾ. ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಗ್ರಾಮಸ್ಥರ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಅಹವಾಲು ಅರ್ಜಿಯನ್ನು ದ್ವಿಪ್ರತಿಯಲ್ಲಿ ಪಡೆಯಲಾಗುತ್ತದೆ. ಸ್ಥಳದಲ್ಲೇ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಲು ಶ್ರಮವಹಿಸಲಿದ್ದಾರೆ. ಒಂದು ಪ್ರತಿಯನ್ನು ತಾ. ಪತ್ರಕರ್ತರ ಸಂಘ ಪಡೆದು ಜಿಲ್ಲಾ ಸಂಘಕ್ಕೆ ರವಾಣಿಸಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಇಲಾಖೆಯಲ್ಲಿ ಗ್ರಾಮಸ್ಥರ ಸಮಸ್ಯೆಯನ್ನು ಪರಿಹರಿಸಲು ಶ್ರಮಿಸಲಾಗುತ್ತದೆ. 

ಸ್ಥಳದಲ್ಲೇ ಆಧಾರ್ ಯಂತ್ರ

ಶನಿವಾರ ಕುತ್ಲೂರಿಗೆ ಆಗಮಿಸಿದ ತಹಶೀಲ್ದಾರ್ ಅವರು ಸ್ಥಳದಲ್ಲೇ ಆಧಾರ್ ತಿದ್ದುಪಡಿ ಹಾಗೂ ನೂತನ ಅರ್ಜಿ ಸ್ವೀಕಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು. ಈ ಹಿನ್ನೆಲೆಯಲ್ಲಿ 2 ಆಧಾರ್ ಯಂತ್ರಗಳು ಸ್ಥಳದಲ್ಲೇ ಕಾರ್ಯಾಚರಿಸಲಿದೆ. ವೃದ್ಯಾಪ್ಯ ವೇತನಕ್ಕೆ ಫಲಾನುಭವಿಗಳ ಬೆರಳಚ್ಚು ಸ್ವೀಕಾರವಾಗುವುದಿಲ್ಲ ಎಂಬ ಅಧಿಕಾರಿಗಳ ಮಾಹಿತಿಗೆ ತಹಶೀಲ್ದಾರ್ ಅವರು ಸ್ಥಳದಲ್ಲೇ ಪಂಚಾಯತ್‍ರಾಜ್ ಎಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನರೇಂದ್ರ ಅವರನ್ನು ಸಂಪರ್ಕಿಸಿದ್ದು, ಕೇವಲ ಐರಿಸ್ ಯಂತ್ರದ ಮೂಲಕ ನಮೂದಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 

ನಾರಾವಿ ಗ್ರಾ.ಪಂ. ಆಡಳಿತ ಮಂಡಳಿ ಸ್ಥಳದಲ್ಲಿ ಅತಿಥಿಗಳಿಗೆ ಕೊಠಡಿ, ಸಭಾವೇದಿಕೆ, ನೀರಿನ ವ್ಯವಸ್ಥೆ, ಸ್ವಚ್ಚತೆಗೆ ಆದ್ಯತೆ, ಪಾರ್ಕಿಂಗ್, ಅರ್ಜಿ ಸ್ವೀಕಾರ ಕೌಂಟರ್, ಆರೋಗ್ಯ ತಪಾಸಣೆ ಕೇಂದ್ರಕ್ಕೆ ಕೌಂಟರ್ ವ್ಯವಸ್ಥೆ ನಿರ್ವಹಿಸಿದೆ. ಬೆಳಗ್ಗೆ ಉಪಹಾರ, ಮಧ್ಯಾಹ್ನ ಊಟ, ಸಂಜೆ ಕಾಫಿಗೆ ವ್ಯವಸ್ಥೆ ಮಾಡಲಾಗಿದೆ.

ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಗ್ರಾಮಸ್ಥ ಹಿರಿಯರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದೆ. ವೇಣೂರು ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ನಾರಾವಿ ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ, ಉಪಾಧ್ಯಕ್ಷೆ ಯಶೋದ, ಅಭಿವೃದ್ಧಿ ಅಧಿಕಾರಿ ರವಿ ಎಸ್. ಎಂ., ಕಾರ್ಯದರ್ಶಿ ನಿರ್ಮಲ್ ಕುಮಾರ್, ಗ್ರಾಮ ಲೆಕ್ಕಿಗ ನಾರಾಯಣ ಕುಲಾಲ್, ಗ್ರಾಮ ಸಹಾಯಕ ನಾರಾವಿ ಗ್ರಾ.ಪಂ. ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಸಂತೋಷ್, ಪ್ರಮೀಳಾ ಭಟ್, ಮಾಜಿ ತಾ.ಪಂ. ಸದಸ್ಯ ಜೀವಂಧರ ಕುಮಾರ್, ಕುತ್ಲೂರು ಶಾಲಾ ಮುಖ್ಯ ಶಿಕ್ಷಕ ಕೃಷ್ಣ ನಾಯ್ಕ, ಗ್ರಾಮ ಸಹಾಯಕ ದೇವಪ್ಪ ಹಾಗೂ ಮತ್ತಿತರು ಉಪಸ್ಥಿತರಿದ್ದು, ವ್ಯವಸ್ಥೆಗೆ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X