Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ಲಾಮಾಬಾದ್: ಭಾರತದ ವಸತಿ ಸಂಕೀರ್ಣಕ್ಕೆ...

ಇಸ್ಲಾಮಾಬಾದ್: ಭಾರತದ ವಸತಿ ಸಂಕೀರ್ಣಕ್ಕೆ ಅನಿಲ ಪೂರೈಕೆ ನಿರಾಕರಿಸಿದ ಪಾಕ್

ವಾರ್ತಾಭಾರತಿವಾರ್ತಾಭಾರತಿ23 Dec 2018 9:21 AM IST
share
ಇಸ್ಲಾಮಾಬಾದ್: ಭಾರತದ ವಸತಿ ಸಂಕೀರ್ಣಕ್ಕೆ ಅನಿಲ ಪೂರೈಕೆ ನಿರಾಕರಿಸಿದ ಪಾಕ್

ಹೊಸದಿಲ್ಲಿ, ಡಿ. 23: ಇಸ್ಲಾಮಾಬಾದ್‌ನಲ್ಲಿ ಹೊಸದಾಗಿ ನಿರ್ಮಿಸಿರುವ ಭಾರತೀಯರ ವಸತಿ ಸಂಕೀರ್ಣಕ್ಕೆ ಅನಿಲ ಪೂರೈಕೆ ಮಾಡಲು ಪಾಕಿಸ್ತಾನ ನಿರಾಕರಿಸಿದೆ.

ಪಾಕಿಸ್ತಾನದ ಹೈಕಮಿಷನರ್ ಸುಹೈಲ್ ಮುಹಮ್ಮದ್ ಅವರ ಕೊಲ್ಕತ್ತಾ ಭೇಟಿಗೆ ಭಾರತ ಸರ್ಕಾರ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರದ ಈ ಕ್ರಮ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿದೆ.

ಸುಹೈಲ್ ಮುಹಮ್ಮದ್ ಭೇಟಿಗೆ ಅವಕಾಶ ನಿರಾಕರಿಸಿದ್ದೇಕೆ ಎಂಬ ಬಗ್ಗೆ ಎರಡೂ ಸರ್ಕಾರಗಳು ಬಾಯಿಬಿಟ್ಟಿಲ್ಲ. ಆದರೆ ಭೇಟಿಗೆ ಅನುಮೋದನೆ ಕೋರುವುದು ವಿಳಂಬವಾದ್ದರಿಂದ ಅವಕಾಶ ನಿರಾಕರಿಸಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಭಾರತ ಹಾಗೂ ಪಾಕಿಸ್ತಾನದ ಹೈಕಮಿಷನರ್ ತಾವು ಕಾರ್ಯನಿರ್ವಹಿಸುವ ಪ್ರದೇಶದ ಅಂದರೆ ರಾಜಧಾನಿಯ ಹೊರಗೆ ಎಲ್ಲೇ ಭೇಟಿ ನೀಡಬೇಕಿದ್ದರೂ, ಅನುಮೋದನೆ ಪಡೆಯುವುದು ಅಗತ್ಯ. ಇಸ್ಲಾಮಾಬಾದ್‌ನಲ್ಲಿ ಭಾರತ ನಿರ್ಮಿಸಿದ ಹೊಸ ವಸತಿ ಸಂಕೀರ್ಣಕ್ಕೆ ಅನಿಲ ಪೂರೈಕೆ ಮಾಡಲು ವಿಳಂಬವಾಗುತ್ತಿರುವ ವಿಚಾರವನ್ನು ಭಾರತ ಪಾಕಿಸ್ತಾನ ಸರ್ಕಾರದ ಬಳಿ ಒಯ್ದಿದೆ. ಕಳೆದ ಒಂದು ತಿಂಗಳಿಂದ ಪದೇ ಪದೇ ಈ ವಿಚಾರವನ್ನು ಪಾಕಿಸ್ತಾನ ಹೈಕಮಿಷನ್ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಂದೆ ಪ್ರಸ್ತಾವಿಸಲಾಗಿದೆ ಎಂದು ಹೇಳಿವೆ.

"ಹಲವು ಬಾರಿ ಈ ಬಗ್ಗೆ ಪ್ರಸ್ತಾವ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ" ಎಂದು ಮೂಲಗಳು ತಿಳಿಸಿದ್ದು, ಉಭಯ ದೇಶಗಳ ರಾಜಧಾನಿಯಲ್ಲಿ ರಾಜತಾಂತ್ರಿಕರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಪರಸ್ಪರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ವಸತಿ ಸಂಕೀರ್ಣ ವಿವಾದ ಮಹತ್ವ ಪಡೆದುಕೊಂಡಿದೆ.

ನಿರ್ಮಾಣ ಹಂತದಲ್ಲಿದ್ದಾಗ ವಸತಿ ಸಂಕೀರ್ಣಕ್ಕೆ ಕೆಲವರು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ನೀರು ಹಾಗೂ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ್ದಾರೆ ಎಂಬ ವಿಚಾರ ಉಭಯ ದೇಶಗಳ ನಡುವೆ ಒಂದು ತಿಂಗಳಿಗೂ ಹೆಚ್ಚು ಕಾಲ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು.

ಈ ವಸತಿ ಸಂಕೀರ್ಣದಲ್ಲಿ ಭಾರತೀಯ ರಾಜತಾಂತ್ರಿಕರು ಹಾಗೂ ಇತರ ಸಿಬ್ಬಂದಿ ವಾಸವಿದ್ದಾರೆ. ಆದರೆ ಪೈಪ್‌ಲೈನ್ ಅಳವಡಿಸಿದರೂ ಇದಕ್ಕೆ ಅನಿಲ ಪೂರೈಕೆ ಇನ್ನೂ ಆರಂಭವಾಗಿಲ್ಲ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೇರಿದಂತೆ ಪಾಕಿಸ್ತಾನ ಸರ್ಕಾರದ ಅಧಿಕಾರಿಗಳು ಇದಕ್ಕೆ ಇನ್ನೂ ಅನುಮತಿ ನೀಡಿಲ್ಲ ಎನ್ನಲಾಗಿದೆ. ಸಂಕೀರ್ಣದಲ್ಲಿ ಶಾಖ ವ್ಯವಸ್ಥೆ ಚಾಲನೆ ಮಾಡಲು ಅನಿಲ ಬೇಕಾಗಿದ್ದು, ಅನಿಲ ಸರಬರಾಜು ಇಲ್ಲದ ಕಾರಣ ಅಸಾಧ್ಯ ಚಳಿಯಿಂದ ಸಿಬ್ಬಂದಿ ತತ್ತರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X