Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯದ ಮೂರನೇ ಟೆಸ್ಟ್ ತಂಡಕ್ಕೆ...

ಆಸ್ಟ್ರೇಲಿಯದ ಮೂರನೇ ಟೆಸ್ಟ್ ತಂಡಕ್ಕೆ ಏಳರ ಬಾಲಕ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ23 Dec 2018 5:20 PM IST
share
ಆಸ್ಟ್ರೇಲಿಯದ ಮೂರನೇ ಟೆಸ್ಟ್ ತಂಡಕ್ಕೆ ಏಳರ ಬಾಲಕ ಸೇರ್ಪಡೆ

ಮೆಲ್ಬೋರ್ನ್, ಡಿ.23: ಏಳರ ಪೋರ ಆರ್ಚಿ ಶಿಲ್ಲರ್ ಪಾಲಿಗೆ ಈ ವರ್ಷದ ಕ್ರಿಸ್‌ಮಸ್ ಬೇಗನೆ ಆಗಮಿಸಿದೆ. ಭಾರತ ವಿರುದ್ಧ ಡಿ.26 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ(ಎಂಸಿಜಿ)ನಡೆಯುವ ಬಾಕ್ಸಿಂಗ್ ಡೇ ಟೆಸ್ಟ್ ಎಂದೇ ಕರೆಯಲ್ಪಡುವ ಮೂರನೇ ಟೆಸ್ಟ್‌ಗೆ ಆಸ್ಟ್ರೇಲಿಯ  ತನ್ನ 15 ಸದಸ್ಯರನ್ನು ಒಳಗೊಂಡ ತಂಡದಲ್ಲಿ ಬಾಲಕ ಶಿಲ್ಲರ್‌ಗೆ ಸ್ಥಾನ ನೀಡಿದೆ. ಮೇಕ್-ಎ-ವಿಶ್ ಆಸ್ಟ್ರೇಲಿಯ ಫೌಂಡೇಶನ್‌ನಿಂದಾಗಿ ಇದು ಸಾಧ್ಯವಾಗಿದೆ.

  ಶಿಲ್ಲರ್ ಮೂರು ತಿಂಗಳ ಮಗುವಾಗಿದ್ದಾಗಲೇ ದೋಷಯುಕ್ತ ಹೃದಯ ಕವಾಟ ಇರುವುದು ಪತ್ತೆಯಾಗಿತ್ತು. ಈತ ಈಗಾಗಲೇ ಹಲವಾರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ. ಆತನ ಆರೋಗ್ಯ ಸ್ಥಿತಿಯು ಸ್ನೇಹಿತರೊಂದಿಗೆ ಪ್ರತಿನಿತ್ಯವೂ ಮುಕ್ತವಾಗಿ ಆಡಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಈ ಬಾಲಕ ಪ್ರತಿನಿತ್ಯ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಆರ್ಚಿಗೆ ಸಾಧ್ಯವಾದಾಗಲೆಲ್ಲಾ ಕ್ರಿಕೆಟ್ ಆಡುವುದೆಂದರೆ ತುಂಬಾ ಇಷ್ಟ.

ಕ್ರಿಕೆಟ್ ಪ್ರೇಮಿ ಆರ್ಚಿ ಬಳಿ ಅವರ ತಂದೆ ನೀನು ಮುಂದೇನಾಗಲು ಇಷ್ಟಪಡುತ್ತೀಯಾ? ಎಂದು ಕೇಳಿದಾಗ ಆತ ನಾನು ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕನಾಗಲು ಬಯಸುತ್ತೇನೆ ಎಂದು ಉತ್ತರಿಸಿದ್ದನಂತೆ.

ಆರ್ಚಿ ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ಮೇಕ್-ಎ-ವಿಶ್ ಆಸ್ಟ್ರೇಲಿಯ ಫೌಂಡೇಶನ್ ಆರ್ಚಿಯ ಹೃದಯದ ಸ್ಥಿತಿ-ಗತಿ ಹಾಗೂ ಆತನ ಆಕಾಂಕ್ಷೆಯ ಬಗ್ಗೆ ತಿಳಿದುಕೊಂಡಿತ್ತು.

 ಎಂಸಿಜಿ ಟೆಸ್ಟ್‌ನಲ್ಲಿ ತನ್ನೊಂದಿಗೆ ಆರ್ಚಿ ಕೂಡ ಸಹ-ನಾಯಕನಾಗಿರುತ್ತಾನೆ ಎಂದು ಆಸ್ಟ್ರೇಲಿಯದ ನಾಯಕ ಟಿಮ್ ಪೈನ್ ಯರ್ರಾ ಪಾರ್ಕ್‌ನಲ್ಲಿ ನಡೆದ ಫ್ಯಾಮಿಲಿ ಡೇ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

  ಮೂರನೇ ಟೆಸ್ಟ್ ತಂಡಕ್ಕೆ ಶಿಲ್ಲರ್ರನ್ನು ಸೇರ್ಪಡೆಗೊಳಿಸುವ ವಿಚಾರವನ್ನು ಈ ತಿಂಗಳಾರಂಭದಲ್ಲೇ ಬಹಿರಂಗಪಡಿಸಲಾಗಿತ್ತು. ಆಸ್ಟ್ರೇಲಿಯದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್, ಬಾಲಕನಿಗೆ ದೂರವಾಣಿ ಕರೆ ಮಾಡಿ ತಂಡಕ್ಕೆ ಸೇರ್ಪಡೆಗೊಳಿಸುವ ಸುದ್ದಿಯನ್ನು ತಿಳಿಸಿದ್ದರು.

‘‘ಆತ(ಆರ್ಚಿ)ಕಠಿಣ ಸಮಯವನ್ನು ಎದುರಿಸಿದ್ದು, ತನ್ನ ಜೀವನದ ಹೆಚ್ಚಿನ ಸಮಯವನ್ನು ಆಸ್ಪತ್ರೆಯ ಬೆಡ್‌ನಲ್ಲೇ ಕಳೆದಿದ್ದಾನೆ. ಆತನ ಮುಖದಲ್ಲಿ ಮಂದಹಾಸ ಮೂಡಿಸುವ ನಿಟ್ಟಿನಲ್ಲಿ ನಾವು ನೆರವಾಗಲಿದ್ದೇವೆ. ನಾನು ಆತನಿಗಾಗಿ ಮಾಡಬಹುದಾದ ಸಣ್ಣ ನೆರವು ಇದಾಗಿದೆ’’ ಎಂದು ಲ್ಯಾಂಗರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X