Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾತಿಧರ್ಮದ ಭೇದವಿಲ್ಲದ ಮಾನವೀಯ ಗುಣ...

ಜಾತಿಧರ್ಮದ ಭೇದವಿಲ್ಲದ ಮಾನವೀಯ ಗುಣ ಮುಖ್ಯ: ವಿನಯ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ23 Dec 2018 6:56 PM IST
share
ಜಾತಿಧರ್ಮದ ಭೇದವಿಲ್ಲದ ಮಾನವೀಯ ಗುಣ ಮುಖ್ಯ: ವಿನಯ ಹೆಗ್ಡೆ

ಶಿರ್ವ, ಡಿ.23: ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದೇಶದಲ್ಲಿ ಇಂದು ಒಂದು ಅನಪೇಕ್ಷಿತ ವಾತಾವರಣ ಸೃಷ್ಟಿಯಾಗಿದೆ. ದೇಶದ ಪ್ರಗತಿಯ ದೃಷ್ಟಿಯಲ್ಲಿ ಇದು ಅಪೇಕ್ಷಣೀಯವಲ್ಲ. ಜಾತಿ ಧರ್ಮದ ಬಗೆಗಿನ ಬಿನ್ನಾಭಿಪ್ರಾಯ ವಿದ್ಯಾ ಸಂಸ್ಥೆಗಳಿಗೂ ಸೋಕದಂತೆ ವಿದ್ಯಾರ್ಥಿಗಳು, ಹೆತ್ತವರು, ಶಿಕ್ಷಕರು ಮತ್ತು ಆಡಳಿತ ಮಂಡಳಿ ಜಾಗ್ರತೆ ವಹಿಸಬೇಕು ಎಂದು ನಿಟ್ಟೆ ವಿಶ್ವ ವಿದ್ಯಾನಿಲಯದ ಕುಲಪತಿ ಎನ್.ವಿನಯ ಹೆಗ್ಡೆ ಹೇಳಿದ್ದಾರೆ.

ಶಿರ್ವ ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡುತಿದ್ದರು. ಧರ್ಮ ತೀರಾ ವೈಯಕ್ತಿಕ ವಿಷಯ. ಪ್ರತಿಯೊಬ್ಬರಿಗೂ ಅವರದೇ ಆದ ಧಾರ್ಮಿಕ ನಂಬಿಕೆಗಳಿ ರುತ್ತವೆ. ಒಬ್ಬರ ನಂಬಿಕೆಗೆ ಇನ್ನೊಬ್ಬರ ವಿರೋಧ ಸಲ್ಲದು. ಎಲ್ಲಿಯವರೆಗೆ ಸಮಾಜ ಎಚ್ಚೆತ್ತುಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ನಾವು ಉದ್ದಾರವಾಗು ವುದಿಲ್ಲ. ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಜಾತಿಧರ್ಮದ ಭೇದವಿಲ್ಲದ ಮಾನವೀಯ ಗುಣಗಳನ್ನು ಬೆಳೆಸಬೇಕು ಎಂದರು.

ಮುಖ್ಯ ಅತಿಥಿಗಳಾಗಿದ್ದ ಮಂಗಳೂರು ತೇಜಸ್ವಿನಿ ಆಸ್ಪತ್ರೆಯ ನಿರ್ದೇಶಕ ನಿಟ್ಟೆ ವಿವಿಯ ಸಹ ಕುಲಪತಿ ಪ್ರೊ.ಎಂ.ಶಾಂತಾರಾಮ ಶೆಟ್ಟಿ ಮಾತನಾಡಿ, ವಿದ್ಯಾಸಂಸ್ಥೆಗಳು ಅತ್ಯುತ್ತಮ ಇಂಜಿನಿಯರ್ಸ್‌, ಡಾಕ್ಟರ್ಸ್‌, ಲಾಯರ್ಸ್‌ಗಳನ್ನು ತಯಾರು ಮಾಡಿದರಷ್ಟೇ ಸಾಲದು. ಉತ್ತಮ ಮನುಷ್ಯರನ್ನು ತಯಾರು ಮಾಡ ಬೇಕು. ಕಲಿಕೆ, ಹೋರಾಟ, ದುಡಿಮೆ ವಿಷಯದಲ್ಲಿ ನೈತಿಕತೆಯನ್ನು ಪಾಲಿಸುವ ವ್ಯಕ್ತಿ ಮಾತ್ರ ಶ್ರೇಷ್ಟ್ರ ಮನುಷ್ಯ ಆಗುತ್ತಾನೆ ಎಂದು ತಿಳಿಸಿದರು. ಶಾಲಾಡಳಿತ ಮಂಡಳಿಯ ಅಧ್ಯಕ್ಷ ಗುರ್ಮೆ ಸುರೇಶ್ ಪಿ.ಶೆಟ್ಟಿ, ಶಾಲಾ ಸಂಚಾಲಕ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿದರು. ಶಿರ್ವ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ಬಯ್ಯ ಹೆಗ್ಡೆ, ಆಡಳಿತಾಧಿಕಾರಿ ಪ್ರೊ.ವೈ ಭಾಸ್ಕರ್ ಶೆಟ್ಟಿ, ಆಡಳಿತ ಮಂಡಳಿಯ ಕೋಶಾಧಿಕಾರಿ ಜಗದೀಶ್ ಅರಸ್ ಉಪಸ್ಥಿತರಿದ್ದರು.

ಪ್ರಾಂಶುಪಾಲ ಪ್ರಶಾಂತ್ ಕುಮಾರ್ ನಂಬಿಯಾರ್ ವರದಿ ವಾಚಿಸಿದರು. ಶಿಕ್ಷಕಿ ಅನಿತಾ ಉಪಾಧ್ಯಾಯ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ಅಂಕಿತ ಸ್ವಾಗತಿಸಿದರು. ವಿಶ್ವಜಿತ್ ವಂದಿಸಿದರು. ರೆವೊನಾ ರೀಷಾ ಡಿಸೋಜ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X