Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೋಲ್ ಸಂಗ್ರಹ ಕುರಿತು ಅಪಪ್ರಚಾರ:...

ಟೋಲ್ ಸಂಗ್ರಹ ಕುರಿತು ಅಪಪ್ರಚಾರ: ಎನ್‌ಎಚ್‌ಎಐ ಯೋಜನಾ ನಿರ್ದೇಶಕರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ23 Dec 2018 8:05 PM IST
share
ಟೋಲ್ ಸಂಗ್ರಹ ಕುರಿತು ಅಪಪ್ರಚಾರ: ಎನ್‌ಎಚ್‌ಎಐ ಯೋಜನಾ ನಿರ್ದೇಶಕರ ಪ್ರತಿಕ್ರಿಯೆ

ಮಂಗಳೂರು, ಡಿ.23: ಟೋಲ್ ಸಂಗ್ರಹದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯು ಸಂಪೂರ್ಣ ಸುಳ್ಳಾಗಿದ್ದು, ಈ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ವಿಜಯ್ ಸ್ಯಾಮ್ಸನ್ ಪ್ರತಿಕ್ರಿಯಿಸಿದ್ದಾರೆ.

‘ನೀವು ವಾಹನದಲ್ಲಿ ಸಂಚರಿಸುವಾಗ ಟೋಲ್‌ಗೇಟ್ ಸಿಕ್ಕಿದರೆ ಅಲ್ಲಿನ ಸಿಬ್ಬಂದಿ ಒಂದಾ ಅಥವಾ ಎರಡಾ (ಹೋಗುವುದು ಮತ್ತು ಬರುವುದು) ಎಂದು ಕೇಳುತ್ತಾರೆ. ಆಗ ನೀವು ‘ನಾನು 12 ಗಂಟೆಗಳ ಟೋಲ್ ಪಾವತಿಸುತ್ತೇನೆ’ ಎಂದು ಹೇಳಬೇಕು. ಟೋಲ್ ನಿಯಮ ಪ್ರಕಾರ ಯಾವುದೇ ವಾಹನ ಟೋಲ್‌ಗೇಟ್ ಪಾಸಾದ ನಂತರ 12 ಗಂಟೆಗಳ ಒಳಗೆ ಅದೇ ಟೋಲ್‌ನಲ್ಲಿ ಮರಳಿ ಬಂದರೆ ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಟೋಲ್ ಚೀಟಿಯಲ್ಲಿ ಸಮಯ ನಮೂದಿಸಲಾಗಿರುತ್ತದೆ. (ಉದಾಹರಣೆಗೆ, ನೀವು ಬೆಳಗ್ಗೆ 9 ಗಂಟೆಗೆ ಒನ್‌ವೇ ಟೋಲ್ ಟಿಕೆಟ್ ಪಡೆದು ಹೊರಟರೆ ರಾತ್ರಿ 9 ಗಂಟೆಯೊಳಗೆ ಅದೇ ಟೋಲ್ಗೇಟ್‌ನಲ್ಲಿ ವಾಪಸ್ ಬಂದರೆ ಟೋಲ್ ಪಾವತಿಸಬೇಕಿಲ್ಲ. ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇಲ್ಲದಿರುವುದರಿಂದ ಟೋಲ್ ಗುತ್ತಿಗೆದಾರರು ಇದನ್ನು ಮುಚ್ಚಿಟ್ಟು ಪ್ರತೀ ದಿನ ವಾಹನ ಸವಾರರಿಂದ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದಾರೆ. ಸಾರ್ವಜನಿಕರು ಇದನ್ನು ಅರಿತು ಜಾಗೃತಿ ಮೂಡಿಸಬೇಕು. ಟೋಲ್ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿಯಾಗುವುದನ್ನು ತಪ್ಪಿಸಬೇಕು'

ಇದು ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಎರಡ್ಮೂರು ದಿನದಿಂದ ಹರಿದಾಡುತ್ತಿರುವ ಸುದ್ದಿಯಾಗಿದೆ. ಇದನ್ನು ಪರಿಶೀಲಿಸದೆ ಅದೆಷ್ಟೋ ಮಂದಿ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಫಾರ್ವಡ್ ಮಾಡಿದ್ದೂ ಇದೆ. ಅಲ್ಲದೆ ನಂಬಿದ್ದೂ ಇದೆ.

ವಾಸ್ತವವಾಗಿ ಇಂಥದ್ದೊಂದು ನಿಯಮವೇ ಇಲ್ಲ. ಆದಾಗ್ಯೂ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಈ ಮಧ್ಯೆ ಕೆಲವು ವಾಹನಿಗರು ಟೋಲ್ ಸಿಬ್ಬಂದಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಆದರೆ ಅಂತಹ ಯಾವ ಸೂಚನೆಯೂ ಬಾರದ ಕಾರಣ ಸಿಬ್ಬಂದಿ ಎಂದಿನಂತೆ ಟೋಲ್ ಸಂಗ್ರಹ ಮಾಡಿರುವ ಬಗ್ಗೆ ‘ವಾರ್ತಾಭಾರತಿ’ಗೆ ಮಾಹಿತಿ ಲಭಿಸಿದೆ.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಯನ್ನೇ ಹೆಚ್ಚಿನವರು ನಂಬಿದಂತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂಥದ್ದೊಂದು ಅಪಪ್ರಚಾರ ಬಿರುಸಿನಿಂದ ನಡೆಯುತ್ತಿದ್ದರೂ ಕೂಡ ಎನ್‌ಎಚ್‌ಎಐ ಅಧಿಕಾರಿಗಳು, ದ.ಕ. ಜಿಲ್ಲಾಧಿಕಾರಿ, ನವಯುಗ ಕಂಪೆನಿಯ ಅಧಿಕಾರಿಗಳು ಮಾಧ್ಯಮ ಗಳಿಗೆ ಲಿಖಿತ ಹೇಳಿಕೆ ನೀಡಲು ಆಸಕ್ತಿ ವಹಿಸದಿರುವುದು ವಿಪರ್ಯಾಸ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X