Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೀಘ್ರ ಸುಳ್ಳು ಭರವಸೆ ನೀಡುವ...

ಶೀಘ್ರ ಸುಳ್ಳು ಭರವಸೆ ನೀಡುವ ಅಭ್ಯರ್ಥಿಗಳು ಅನರ್ಹ?

ಚುನಾವಣಾ ಆಯೋಗದ ಹೊಸ ಸುಧಾರಣೆಗಳು ಹೀಗಿರಲಿದೆ…

ವಾರ್ತಾಭಾರತಿವಾರ್ತಾಭಾರತಿ23 Dec 2018 9:52 PM IST
share
ಶೀಘ್ರ ಸುಳ್ಳು ಭರವಸೆ ನೀಡುವ ಅಭ್ಯರ್ಥಿಗಳು ಅನರ್ಹ?

ಹೊಸದಿಲ್ಲಿ,ಡಿ.23: ಸುಳ್ಳು ಘೋಷಣೆಗಳ ಸಲ್ಲಿಕೆಯನ್ನು ಅನರ್ಹತೆಗೆ ಕಾರಣವನ್ನಾಗಿಸುವುದು ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಅಭ್ಯರ್ಥಿಗಳ ವೆಚ್ಚದ ಮೇಲೆ ಮಿತಿ ಹೇರಿಕೆ ಸೇರಿದಂತೆ ಚುನಾವಣಾ ಸುಧಾರಣೆಗಳಿಗಾಗಿ ಚುನಾವಣಾ ಆಯೋಗವು ಕೇಂದ್ರ ಸರಕಾರವನ್ನು ಒತ್ತಾಯಿಸಲಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ಬಳಿಕ ಶಾಸಕಾಂಗ ಕಾರ್ಯದರ್ಶಿ ಜಿ.ನಾರಾಯಣ ರಾಜು ಅವರೊಂದಿಗೆ ಆಯೋಗದ ಉದ್ದೇಶಿತ ಸಭೆಯಲ್ಲಿ ಚುನಾವಣಾ ಅವಧಿಯಲ್ಲಿ ಲಂಚಗುಳಿತನವನ್ನು ಸಂಜ್ಞೇಯ ಅಪರಾಧವಾಗಿ ಪರಿಗಣಿಸುವಂತೆಯೂ ಸರಕಾರಕ್ಕೆ ಸೂಚಿಸಲಿದೆ ಎಂದು ಚುನಾವಣಾ ಆಯೋಗದಲ್ಲಿನ ಉನ್ನತ ಮೂಲಗಳು ತಿಳಿಸಿವೆ.

ಕಾನೂನು ಸಚಿವಾಲಯವು ಚುನಾವಣಾ ಅಯೋಗಕ್ಕೆ ಆಡಳಿತಾತ್ಮಕ ಸಚಿವಾಲಯವಾಗಿದ್ದರೆ,ಶಾಸಕಾಂಗ ಇಲಾಖೆಯು ಆಯೋಗಕ್ಕೆ ಸಂಬಂಧಿಸಿದ ವಿಷಯಗಳಿಗೆ ನೋಡಲ್ ಘಟಕವಾಗಿದೆ.

ಮುಖ್ಯ ಚುನಾವಣಾ ಆಯುಕ್ತರಂತೆ ಇಬ್ಬರು ಚುನಾವಣಾ ಆಯುಕ್ತರಿಗೂ ಸಾಂವಿಧಾನಿಕ ರಕ್ಷಣೆಯನ್ನು ವಿಸ್ತರಿಸುವಂತೆಯೂ ಆಯೋಗವು ಕಾನೂನು ಸಚಿವಾಲಯವನ್ನು ಕೋರಲಿದೆ ಎಂದು ಮೂಲಗಳು ತಿಳಿಸಿದವು.

 ಸಶಸ್ತ್ರ ಪಡೆಗಳ ಸಿಬ್ಬಂದಿಗಳಿಗಾಗಿ ಮತದಾರರ ಕಾನೂನನ್ನು ಲಿಂಗ ತಟಸ್ಥವಾಗಿಸುವಂತೆಯೂ ಆಯೋಗವು ಕೋರಲಿದೆ. ಈಗ ಸಶಸ್ತ್ರ ಪಡೆಗಳ ಸಿಬ್ಬಂದಿಗಳ ಪತ್ನಿಯರು ರಕ್ಷಣಾ ಪಡೆಗಳ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುವ ಅರ್ಹತೆಯನ್ನು ಹೊಂದಿದ್ದಾರೆ. ಆದರೆ ಮಹಿಳಾ ಸೇನಾ ಸಿಬ್ಬಂದಿಯ ಪತಿಗೆ ಈ ಅರ್ಹತೆಯಿಲ್ಲ. ಕಾನೂನಿನಲ್ಲಿ ‘ಪತಿ’್ನ ಎಂಬ ಶಬ್ಧದ ಬದಲಾಗಿ ‘ಪತಿ ಅಥವಾ ಪತ್ನಿ’ಎಂದು ಸೇರಿಸಲು ಉದ್ದೇಶಿಸಿರುವ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದರೂ ರಾಜ್ಯಸಭೆಯಲ್ಲಿ ಬಾಕಿಯಾಗಿದೆ.

ಸುಳ್ಳು ಘೋಷಣೆಗಳಿಗೆ ಸಂಬಂಧಿಸಿದಂತೆ ಮೂಲಗಳು,ಹಾಲಿ ಇಂತಹ ಅಪರಾಧಕ್ಕೆ ಆರು ತಿಂಗಳ ಜೈಲುಶಿಕ್ಷೆಯನ್ನು ವಿಧಿಸಲಾಗುತ್ತಿದೆ. ಆದರೆ ಇದನ್ನು ಚುನಾವಣಾ ಅಪರಾಧವನ್ನಾಗಿಸಲು ಆಯೋಗವು ಬಯಸಿದೆ ಮತ್ತು ಇಂತಹ ಅಪರಾಧಗಳಲ್ಲಿ ದೋಷನಿರ್ಣಯವಾದರೆ ಅದು ಅನರ್ಹತೆಗೆ ಕಾರಣವಾಗುತ್ತದೆ ಎಂದು ವಿವರಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X