Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೈನರು ಗ್ರಂಥಗಳನ್ನು ಮೆರವಣಿಗೆ...

ಜೈನರು ಗ್ರಂಥಗಳನ್ನು ಮೆರವಣಿಗೆ ಮಾಡುತ್ತಾರೆಯೇ ಹೊರತು ಓದುವುದಿಲ್ಲ: ಡಾ.ಷ.ಶೆಟ್ಟರ್‌

ವಾರ್ತಾಭಾರತಿವಾರ್ತಾಭಾರತಿ23 Dec 2018 10:20 PM IST
share

ಬೆಂಗಳೂರು, ಡಿ.23: ಜೈನರು ಗ್ರಂಥಗಳು ಪ್ರಕಟವಾದಾಗ ಆನೆ ಮೇಲೆ ಅವುಗಳನ್ನ ಇಟ್ಟು ಮೆರವಣಿಗೆ ಮಾಡುತ್ತಾರೆಯೇ ಹೊರತು, ಅವುಗಳನ್ನು ಓದುವುದಿಲ್ಲ. ಗ್ರಂಥಗಳನ್ನು ಪ್ರಕಟಿಸುವುದರ ಜತಗೆ ಓದು ಸಂಸ್ಕೃತಿಯನ್ನು ಮೊದಲು ಮೈಗೂಡಿಸಿಕೊಳ್ಳಬೇಕು ಎಂದು ಖ್ಯಾತ ಸಂಶೋಧಕ ಮತ್ತು ಇತಿಹಾಸ ತಜ್ಞ ಡಾ.ಷ.ಶೆಟ್ಟರ್ ಸಲಹೆ ನೀಡಿದ್ದಾರೆ.

ರವಿವಾರ ನಗರದ ಕರ್ನಾಟಕ ಜೈನ ಭವನದಲ್ಲಿ ಏರ್ಪಡಿಸಲಾಗಿದ್ದ, ಮಹಾ ಪುರಾಣದ ನಾಲ್ಕನೇ ಆವೃತ್ತಿ ಲೋಕಾರ್ಪಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯಾವುದೇ ಗ್ರಂಥಗಳಾಗಿರಲಿ ಅವುಗಳನ್ನು ಪೂಜಾ ಭಾವನೆಯಿಂದ ನೋಡುವುದನ್ನು ಬಿಟ್ಟು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಉತ್ತಮ ಗ್ರಂಥಗಳನ್ನು ಓದದೇ ಹಾಗೆ ಪೂಜ್ಯ ಭಾವನೆಯಿಂದ ನೋಡಿ ಇಟ್ಟರೆ ಅದು ಆ ಗ್ರಂಥಕ್ಕೆ ನಾವು ಮಾಡಿದ ಅನ್ಯಾಯ ಎಂದು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಲೋಕಕ್ಕೆ ಜೈನ ಸಮುದಾಯದ ಕೊಡುಗೆ ಅಪಾರ. ಜೈನ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಮಾತ್ರ ಇಡೀ ಕನ್ನಡ ಸಾಹಿತ್ಯವನ್ನು ಅಧ್ಯಯನ ಸಾಧ್ಯ. ಆದಿ ಪುರಾಣ, ಪಂಪ ಭಾರತ, ಮಹಾಪುರಾಣ ಸೇರಿದಂತೆ ಹಲವು ಕಾವ್ಯಗಳು ಹಲವರಿಗೆ ಸ್ಫೂರ್ತಿಯ ಸೆಲೆಯಾಗಿವೆ ಎಂದರು.

ವಿನಯವಾದಂತ ಗ್ರಂಥಗಳನ್ನು ಓದುವುದರ ಜತಗೆ ಅವುಗಳನ್ನು ಇತರರಿಗೂ ಓದಿಸಿ, ಹಾಗೆ ಮಹಾಪುರಾಣದ ಸಾರದ ಮಹತ್ವವನ್ನು ತಿಳಿ ಹೇಳಬೇಕು. ಜೈನರ ಧರ್ಮ ಗ್ರಂಥಗಳು ಕೇವಲ ಜೈನರಿಗೆ ಮಾತ್ರ ಸೀಮಿತವಾದದ್ದಲ್ಲ. ಅವು ಎಲ್ಲಾ ಧರ್ಮಿಯರು ಓದುವಂತಹ ಗ್ರಂಥ ಸಾರಗಳಾಗಿವೆ ಎಂದು ಹೇಳಿದರು.ಜೈನರು ಪ್ರಾಕೃತ ಭಾಷೆಯನ್ನು ಆಡಳಿತ ಭಾಷೆಯನ್ನಾಗಿ ಬಳಸಿ, ಸ್ಥಳೀಯ ಭಾಷೆಗೆ ಮಾನ್ಯತೆ ನೀಡಿದ್ದರಿಂದ ಜೈನ ಧರ್ಮದ ಗ್ರಂಥ ಪ್ರಚಾರಕ್ಕೆ ಹಿನ್ನಡೆಯಾಯಿತು. ಅಲ್ಲದೆ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳು ಎರಡು ಏಕಕಾಲದಲ್ಲಿ ದಕ್ಷಿಣ ಭಾರತಕ್ಕೆ ಹೆಜ್ಜೆ ಇರಿಸಿದವು. ಆದರೆ ಬೌದ್ಧ ಧರ್ಮದ ಗ್ರಂಥ ಹೆಚ್ಚು ಪ್ರಚಾರವಾಯಿತು. ಈ ನಿಟ್ಟಿನಲ್ಲಿ ಜೈನರು ಗ್ರಂಥ ದಾನ ಮಾಡುವ ಸಂಪ್ರದಾಯವನ್ನು ಮತ್ತಷ್ಟು ಬೆಳಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಭಾರತೀಯ ಜೈನ ಮಿಲನದ ರಾಷ್ಟ್ರೀಯ ಕಾರ್ಯದರ್ಶಿ ಧರ್ಮಸ್ಥಳ ಸುರೇಂದ್ರ ಕುಮಾರ್, ಮಹಾಪುರಾಣದ ನಾಲ್ಕನೇ ಆವೃತ್ತಿ ಲೋಕಾರ್ಪಣೆ ಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಅಖಿಲ ಭಾರತ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪದ್ಮಿನಿ ಪದ್ಮರಾಜ್, ಕಂಬದಹಳ್ಳಿ ಜೈನ ಮಠದ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X