Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಸಿವಿನ ರಾಜಕಾರಣಕ್ಕಿಂತ ಹಸುವಿನ ರಾಜಕಾರಣ...

ಹಸಿವಿನ ರಾಜಕಾರಣಕ್ಕಿಂತ ಹಸುವಿನ ರಾಜಕಾರಣ ಅಪಾಯ: ಸಾಹಿತಿ ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ23 Dec 2018 11:26 PM IST
share
ಹಸಿವಿನ ರಾಜಕಾರಣಕ್ಕಿಂತ ಹಸುವಿನ ರಾಜಕಾರಣ ಅಪಾಯ: ಸಾಹಿತಿ ಬರಗೂರು ರಾಮಚಂದ್ರಪ್ಪ

ತುಮಕೂರು, ಡಿ.23:ಹಸಿವಿನ ರಾಜಕಾರಣಕ್ಕಿಂತ ಇಂದು ನಡೆಯುತ್ತಿರುವ ಹಸುವಿಗಾಗಿ ನಡೆಯುತ್ತಿರುವ ರಾಜಕಾರಣ ಅತ್ಯಂತ  ಅಪಾಯಕಾರಿ ಎಂದು ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ತುಮಕೂರು ನಗರದ ಕನ್ನಡ ಭವನದಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಮತ್ತು ಶಶಾಂಕ ಪ್ರಕಾಶನ ಆಯೋಜಿಸಿದ್ದ ಡಾ. ಓ. ನಾಗರಾಜು ಅವರ ಹಟ್ಟಿ ಅರಳಿ ಹೂವಾಗಿ ಕಾಂದಬರಿಯನ್ನು ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು, ಸಮಾಜದಲ್ಲಿ ಯಾವುದೇ ಸಂಘರ್ಷ ನಡೆಯದೆ, ಉಳಿಗಮಾನ ಪದ್ದತಿಯನ್ನು ಒಪ್ಪಿಕೊಂಡು ಬದುಕಿದರೆ ಅದು ಕೆಲವರ ಪ್ರಕಾರ ಒಳ್ಳೆಯ ಕಾಲ. ಸಂಕಟಗಳಿಂದ ಹೊರಬರಲು ಸಂಘರ್ಷ ನಡೆದರೆ ಅಲ್ಲಿ ಏನೋ ನಡೆಯುತ್ತಿದೆ ಎಂದರ್ಥ. ಹಸಿವಿಗಾಗಿ ರಾಜಕಾರಣ ಮಾಡಿದರೆ ಒಳ್ಳೆಯದು. ಅದು ಆಗದೆ ಹಸುವಿನ ರಾಜಕಾರಣ ನಡೆಯುತ್ತಿದೆ ಎಂದು ತಿಳಿಸಿದರು.

ಚಳವಳಿಗಳು ಸೃಜನಶೀಲತೆಯನ್ನು ನಾಶ ಮಾಡುತ್ತದೆ ಎಂಬ ವಾದವಿದೆ. ಆದರೆ ಇದು ಸುಳ್ಳು. ಸಾಮಾಜಿಕ ಮತ್ತು ಸಾಹಿತ್ಯಕ ಚಳವಳಿಗಳು ನಡೆಯುವುದರಿಂದಲೇ ಒಳ್ಳೆಯ ಕೃತಿಗಳು ಮೂಡಿಬರಲು ಸಾಧ್ಯ. ಅದರ ಭಾಗವೇ ಹಟ್ಟಿ ಅರಳಿ ಹೂವಾಗಿ ಕೃತಿಯಂಥವುಗಳು ಬರಹ ರೂಪ ತಾಳುತ್ತವೆ. ಪಂಪ, ವಚನಕಾರರು, ಕುಮಾರವ್ಯಾಸ ಸಾಹಿತ್ಯ ಕೃತಿಗಳಲ್ಲಿ ಚಳವಳಿಯಿಂದ ಸೃಜನಶೀಲವಾಗಿ ಅಭಿವ್ಯಕ್ತಿಸಿರುವುದನ್ನು ನಾವು ನೋಡಬಹುದು. ಈ ಸನ್ನಿವೇಶಗಳನ್ನು ನೋಡದೇ ಹೋದರೆ ಇಂತಹ ಅಪವ್ಯಾಖ್ಯಾನಗಳು ಮೂಡಿಬರಲು ಸಾಧ್ಯ. ಪಂಪ ರಾಜಪ್ರಭುತ್ವದ ವಿರುದ್ದ ದನಿ ಎತ್ತಿದ. ವಚನಕಾರರು ಭಾಷಾ ಚಳವಳಿಯನ್ನೇ ನಡೆಸುವ ಜೊತೆಗೆ ಧಾರ್ಮಿಕ ಚಳವಳಿಯನ್ನು ಮಾಡಿದರು ಎಂದು ವಿವರಿಸಿದರು.

ದಲಿತ-ಬಂಡಾಯ ಸಾಹಿತ್ಯ ಬಂದ ಮೇಲೆ ಸಾಹಿತಿಗಳು ಬೀದಿಗೆ ಬಂದರು.ಅಲ್ಲಿಯವರೆಗೆ ಊರಿಗೆ ಸಿಮಿತವಾಗಿದ್ದ ಸಾಹಿತ್ಯ  ಹಟ್ಟಿಗಳ ಅನುಭವ ಹೊರಬಂತು.70ರ ದಶಕ ದಲ್ಲಾದ ಚಳವಳಿಯ ಪರಿಣಾಮ ಇಂದು ಊರು ಕೇರಿ, ಹಟ್ಟಿಗಳು ಕೂಡ ಸಾಹಿತ್ಯದ ಒಳಗೆ ಬಂದಿವೆ.ಇತ್ತೀಚಿನ ಬರಹಗಳಲ್ಲಿ ಹೊಸ ಚಹರೆ ಕಂಡುಬರುತ್ತಿದೆ.ಜನಪರ ಚಳವಳಿಗಳ ಪ್ರಭಾವ ಪರಿಣಾಮವೇ ಇಂತಹ ಕೃತಿಗಳ ರಚನೆಗೆ ಕಾರಣ ಎಂದು ತಿಳಿಸಿದರು.

ಹಟ್ಟಿ ಅರಳಿ ಹೂವಾಗಿ ಒಂದು ಆದರ್ಶದ ಕಾದಂಬರಿ.ಇಲ್ಲಿ ಬರುವ ಪಾತ್ರಗಳೆಲ್ಲವೂ ಒಳ್ಳೆಯದನ್ನೇ ಆಶಿಸುತ್ತವೆ. ಕಾದಂಬರಿಕಾರರ ಆಶಯ ಒಳ್ಳೆಯದೆ.ಹಟ್ಟಿಗಳ ಅರಳಿ ಹೂವಾಗುವ ಮತ್ತು ಹಟ್ಟಿಗಳು ನರಳಿ ನೋವಾಗುವ ಬಗೆಯೂ ಇದೆ. ಶಿಕ್ಷಣ ಪಡೆದವರು ಹೊಸ ಆಲೋಚನೆ ಮಾಡತೊಡಗುತ್ತಾರೆ. ಕಾದಂಬರಿಯಲ್ಲಿ ಈ ಬದಲಾವಣೆಯೂ ಕಂಡುಬರುತ್ತದೆ ಎಂದರು.

ಪ್ರಜಾಪ್ರಭುತ್ವದ ನಂತರ ಹಳ್ಳಿಗಳು ಬದಲಾಗಿರುವುದನ್ನು ಹಟ್ಟಿ ಅರಳಿ ಕಾದಂಬರಿಯಲ್ಲಿ ದಾಖಲಾಗಿದೆ. ಇದು ಡಾ.ಒ.ನಾಗರಾಜು ಅವರ ಕನಸಿನ ಕಾದಂಬರಿ. ಸಮಾಜ ಸೌಹಾರ್ದವಾಗಿರಬೇಕು ಎಂಬ ಕಾದಂಬರಿ ಕಾರರ ಕನಸು ನನಸಾದರೆ ಒಳ್ಳೆಯದು ಎಂದು ಡಾ.ಬರಗೂರು ರಾಮಚಂದ್ರಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಸಮಾಜ ಚಿಂತಕ ಪ್ರೊ.ಜಿ.ಎಂ.ಶ್ರೀನಿವಾಸಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕವಿ ಡಾ.ಆರನಕಟ್ಟೆ ರಂಗನಾಥ ಹಟ್ಟಿ ಅರಳಿ ಹೂವಾಗಿ ಕಾದಂಬರಿ ಕುರಿತು ಮಾತನಾಡಿದರು. ಯುವಜನ ಮುಖಂಡ ಬಿ.ರಾಜಶೇಖರಮೂರ್ತಿ, ಕರ್ನಾಟಕ ರಾಜ್ಯ ಸರಕಾರಿ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಡಾ.ಟಿ.ಎಂ.ಮಂಜುನಾಥ್, ಕಾದಂಬರಿಕಾರ ಡಾ.ಓ.ನಾಗರಾಜು ಉಪಸ್ಥಿತರಿದ್ದರು. 

ಉಪನ್ಯಾಸಕಿ ಶ್ವೇತಾರಾಣಿ ಸ್ವಾಗತಿಸಿದರೆ,ಸಹಾಯಕ ಪ್ರಾಧ್ಯಾಪಕ ಡಾ.ಓ.ನಾಗಭೂಷಣ್ ಬಗ್ಗನಡು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X