Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 2019ರಲ್ಲಿ ಮಹಾಮೈತ್ರಿಕೂಟ ಅಧಿಕಾರಕ್ಕೆ,...

2019ರಲ್ಲಿ ಮಹಾಮೈತ್ರಿಕೂಟ ಅಧಿಕಾರಕ್ಕೆ, ರಾಹುಲ್ ಗಾಂಧಿ ಪ್ರಧಾನಿ: ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ24 Dec 2018 2:13 PM IST
share
2019ರಲ್ಲಿ ಮಹಾಮೈತ್ರಿಕೂಟ ಅಧಿಕಾರಕ್ಕೆ, ರಾಹುಲ್ ಗಾಂಧಿ ಪ್ರಧಾನಿ: ಮೊಯ್ಲಿ

ಮಂಗಳೂರು, ಡಿ.24: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. 200 ಸ್ಥಾನಗಳನ್ನು ಕಾಂಗ್ರೆಸ್ ಜಯಿಸಲಿದ್ದು, ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಆಯ್ಕೆಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಎಂ.ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಕ್ಷೀಣಿಸಿದೆ. ಅದೇರೀತಿ ಶಿವಸೇನೆ ಮತ್ತು ಕುಶ್ವಾಹ ಅವರ ಪಕ್ಷ ಎನ್‌ಡಿಎ ತೊರೆದಿವೆ. ಇದೇವೇಳೆ ವಿಪಕ್ಷಗಳು ಧ್ರುವಿಕರಣಗೊಂಡು ಬಲಯುತವಾಗುತ್ತಿವೆ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಬಿಜೆಪಿಗೆ 3 ಅಥವಾ 4 ಸ್ಥಾನ ಸಿಕ್ಕಿದರೂ ಆಶ್ಚರ್ಯವಿಲ್ಲ. ಒಟ್ಟಾರೆಯಾಗಿ ಮೋದಿ ಅಧಿಕಾರದಿಂದ ಕೆಳಗಿಳಿಯುವುದು ನಿಶ್ಚಿತ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೇರುವುದನ್ನು ಮೈತ್ರಿಕೂಟ ಒಪ್ಪುತ್ತದೆ. ಆದರೆ ಈಗಲೇ ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ. ಚುನಾವಣೆ ಆಗಲಿ. ಮೈತ್ರಿಕೂಟದಲ್ಲಿ ಕಾಂಗ್ರೆಸ್ 200 ಸ್ಥಾನ ಜಯಿಸಿದರೆ ರಾಹುಲ್ ಗಾಂಧಿ ಮೈತ್ರಿಕೂಟದ ಮುಖಂಡರಾಗುತ್ತಾರೆ. ಅತ್ಯಧಿಕ ಸ್ಥಾನ ಗಳಿಸಿದರು ಪ್ರಧಾನಿ ಆಗುತ್ತಾರೆ ಎಂದು ಮೊಯ್ಲಿ ವಿವರಿಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಗೊಂದಲ ಕಡಿಮೆ ಆಗಿದೆ. ಬಿಜೆಪಿ ಗಾಳ ಹಾಕುತ್ತಾ ಕಾಯುತ್ತಾ ಇತ್ತು. ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಇಲ್ಲ ಎಂಬ ದೂರಿತ್ತು. ಈಗ ಅದೆಲ್ಲವನ್ನು ಈಗ ಸರಿಪಡಿಸಲಾಗಿದೆ ಎಂದ ಮೊಯ್ಲಿ, 60 ಮಂದಿಯನ್ನೂ ಸಚಿವರನ್ನಾಗಿಸಲು ಸಾಧ್ಯವಿಲ್ಲ. ಮಂತ್ರಿ ಆಗದವರು ಸಹನೆ ಕಳೆದುಕೊಳ್ಳಬಾರದು ಎಂದು ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಕಿವಿಮಾತು ಹೇಳಿದರು.

ಮುಂಬರು ಲೋಕಸಭಾ ಚುನಾವಣೆಯಲ್ಲಿ ತಾನು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸುತ್ತೇನೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಮೊಯ್ಲಿ ಉತ್ತರಿಸಿದರು. ಮೂರನೇ ಬಾರಿಯೂ ಚಿಕ್ಕಬಳ್ಳಾಪುರದಿಂದಲೇ ಸ್ಪರ್ಧಿಸುವೆ. ಮಂಗಳೂರಿನಿಂದ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X