Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಲ್ಕು ವರ್ಷಗಳ ಹಿಂದಿನ ಹತ್ಯೆ ಪ್ರಕರಣ:...

ನಾಲ್ಕು ವರ್ಷಗಳ ಹಿಂದಿನ ಹತ್ಯೆ ಪ್ರಕರಣ: ಮಾಜಿ ಕಾರ್ಪೊರೇಟರ್ ಪುತ್ರನ ಮೇಲಿನ ಆರೋಪ ಸಾಬೀತು

ಡಿ.26 ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ24 Dec 2018 8:44 PM IST
share
ನಾಲ್ಕು ವರ್ಷಗಳ ಹಿಂದಿನ ಹತ್ಯೆ ಪ್ರಕರಣ: ಮಾಜಿ ಕಾರ್ಪೊರೇಟರ್ ಪುತ್ರನ ಮೇಲಿನ ಆರೋಪ ಸಾಬೀತು

ಮಂಗಳೂರು, ಡಿ.24: ಹಳೆ ವೈಷಮ್ಯದ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಹಾಡಹಗಲೇ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದ ಮಾಜಿ ಕಾರ್ಪೊರೇಟರ್ ಪುತ್ರನ ಮೇಲಿನ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಡಿ.26ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಪ್ರಕರಣದ ಇತರ ಐವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಅಶೋಕನಗರ ಹೊಯ್ಗೆಬೈಲ್ ನಿವಾಸಿ, ಮಾಜಿ ಕಾರ್ಪೊರೇಟರ್ ಬಿ.ಕಮಲಾಕ್ಷ ಅವರ ಪುತ್ರ ಆಶ್ರಿತ್ ಯಾನೆ ಆಶು (23) ಆರೋಪಿ. ಅದೇ ಪ್ರದೇಶದ ಸಂಜಯ ಯಾನೆ ವರುಣ್ (19) ಹತ್ಯೆಗೀಡಾದ ವ್ಯಕ್ತಿ. ಘಟನೆ ನಡೆದು ನಾಲ್ಕು ವರ್ಷಗಳಾಗಿದ್ದು, ಆರೋಪಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ. ಇತ್ತೀಚೆಗೆ ಮತ್ತೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಘಟನೆ ವಿವರ: 2014ರ ಮೇ 22ರಂದು ಮಧ್ಯಾಹ್ನ 2 ಗಂಟೆಗೆ ಸಂಜಯ ತನ್ನ ಹುಟ್ಟುಹಬ್ಬ ಆಚರಿಸಲು ಗೆಳೆಯನೊಂದಿಗೆ ಮಹೇಶ ಎಂಬ ಮತ್ತೊಬ್ಬ ಸ್ನೇಹಿತನನ್ನು ಕರೆಯಲು ಆತನ ಮನೆ ಕಡೆಗೆ ತೆರಳುತ್ತಿದ್ದರು. ದಾರಿಮಧ್ಯೆ ಹೊಯ್ಗೆಬೈಲ್‌ನ ಮಾಡರ್ನ್ ರೈಸ್ ಮಿಲ್ ಬಳಿ ಆರೋಪಿ ಆಶ್ರಿತ್ ಎದುರಾಗಿದ್ದ. ಹಳೆಯ ಸಣ್ಣ ವೈಷಮ್ಯ ಇವರಿಬ್ಬರ ನಡುವೆ ಇದ್ದುದರಿಂದ ಮಾತಿನ ಚಕಮಕಿ ಬೆಳೆದಿತ್ತು. ಕೂಡಲೆ ಆಶ್ರಿತ್ ತನ್ನ ಸ್ನೇಹಿತರನ್ನು ಸ್ಥಳಕ್ಕೆ ಕರೆಸಿದ. ಈ ಸಂದರ್ಭ ತಪ್ಪಿಸಿಕೊಂಡು ಓಡಲು ಸಂಜಯ ಯತ್ನಿಸಿದರೂ ಬಿಡದ ಆಶ್ರಿತ್, ಚೂರಿಯಿಂದ 9 ಕಡೆ ಬರ್ಬರವಾಗಿ ಇರಿದು ಸಂಜಯನನ್ನು ಹತ್ಯೆಗೈದಿದ್ದ. ಹಾಡಹಗಲೇ ನಡೆದ ಈ ಘಟನೆಯಿಂದ ಸ್ಥಳೀಯರು ತೀವ್ರ ಆತಂಕಕ್ಕೊಳಗಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸಂಜಯನನ್ನು ಅಪರಾಧಿ ಎಂದು ತೀರ್ಪು ನೀಡಿದೆ. ಸರಕಾರಿ ಅಭಿಯೋಜಕ ರಾಜು ಪೂಜಾರಿ ಬನ್ನಾಡಿ ವಾದ ಮಂಡಿಸಿದ್ದರು.

ತಂದೆ ಬಳಿ ದೂರು ಹೇಳಿದ್ದಕ್ಕೆ ಕೊಂದ!
ಕೊಲೆ ಘಟನೆ ನಡೆಯುವ ಕೆಲ ಸಮಯ ಹಿಂದೆ ಸಂಜಯನ ಇಬ್ಬರು ಸ್ನೇಹಿತರು ಬೋಳೂರಿನಲ್ಲಿ ಕೋಲಕ್ಕೆ ತೆರಳಿ ಬಳಿಕ ಹೊಟೇಲ್‌ಗೆ ಹೋಗುತ್ತಿದ್ದಾಗ ಆಶ್ರಿತ್‌ನ ಸ್ನೇಹಿತರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ ಸಂಜಯನ ಸ್ನೇಹಿತ ಚಿನ್ನು ಎಂಬಾತನ ಮುಖಕ್ಕೆ ಆಶ್ರಿತ್ ಸ್ನೇಹಿತರು ಸಿಗರೆಟ್‌ನಿಂದ ಸುಟ್ಟಿದ್ದರು. ಈ ಘಟನೆ ನಡೆದಾಗ ಸಂಜಯ ಇರಲಿಲ್ಲ. ಆದರೆ ಮರುದಿನ ಆಶ್ರಿತ್‌ನ ಮನೆಗೆ ಹೋದ ಸಂಜಯ, ತನ್ನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದನ್ನು ಆಶ್ರಿತ್ ತಂದೆ ಕಮಲಾಕ್ಷರ ಬಳಿ ದೂರಿದ್ದ. ಆಗ ತನ್ನ ತಂದೆ ಎದುರೇ ‘ನಿನ್ನನ್ನು ಕೊಲ್ಲದೆ ಬಿಡಲ್ಲ’ ಎಂದು ಆಶ್ರಿತ್ ಬೆದರಿಕೆ ಹಾಕಿದ್ದ! ಇದೇ ವೈಷಮ್ಯ ಮುಂದುವರಿಸಿದ್ದ ಆಶ್ರಿತ್, ಸಂಜಯನನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X