ಇಲಿ ಪಾಷಾಣ ಸೇವಿಸಿ ಮಹಿಳೆ ಆತ್ಮಹತ್ಯೆ

ಶಂಕರನಾರಾಯಣ, ಡಿ.24: ಗಂಡನ ಆಕ್ಷೇಪ ಹಾಗೂ ಸಾಲಬಾಧೆಯಿಂದ ಮನನೊಂದ ಮಹಿಳೆಯೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ನಡೆದಿದೆ.
ಮೃತರನ್ನು ಕುಳುಂಜೆ ಗ್ರಾಮದ ಮಾವಿನಕೊಡ್ಲು ನಿವಾಸಿ ಆಶಾ(28) ಎಂದು ಗುರುತಿಸಲಾಗಿದೆ. ಇವರು ವ್ಯಕ್ತಿಯೊಬ್ಬರ ಜೊತೆ ಮೊಬೈಲ್ನಲ್ಲಿ ಮಾತನಾಡಿ ಕೊಂಡಿದ್ದ ಬಗ್ಗೆ ಗಂಡ ಆಕ್ಷೇಪ ವ್ಯಕ್ತಪಡಿಸಿದ್ದು, ಅಲ್ಲದೆ ಧರ್ಮಸ್ಥಳ ಸ್ವಸಹಾಯ ಸಂಘದಲ್ಲಿ ಅವರು ಸಾಲ ಪಡೆದುಕೊಂಡಿದ್ದರು. ಈ ವಿಷಯದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆಶಾ ಡಿ.21ರಂದು ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದು, ಡಿ.23ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story