Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಡೋನೇಶ್ಯ ಸುನಾಮಿ: ಮೃತರ ಸಂಖ್ಯೆ...

ಇಂಡೋನೇಶ್ಯ ಸುನಾಮಿ: ಮೃತರ ಸಂಖ್ಯೆ 373ಕ್ಕೇರಿಕೆ

1,000ಕ್ಕೂ ಅಧಿಕ ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ24 Dec 2018 10:14 PM IST
share
ಇಂಡೋನೇಶ್ಯ ಸುನಾಮಿ: ಮೃತರ ಸಂಖ್ಯೆ 373ಕ್ಕೇರಿಕೆ

ಲಬುವನ್ (ಇಂಡೋನೇಶ್ಯ), ಡಿ. 24: ಜ್ವಾಲಾಮುಖಿ ಸಿಡಿತದಿಂದ ಸಮುದ್ರ ತಳ ಕಂಪಿಸಿ ಉಂಟಾದ ಸುನಾಮಿಯಿಂದಾಗಿ ಇಂಡೋನೇಶ್ಯದಲ್ಲಿ ಮೃತಪಟ್ಟವರ ಸಂಖ್ಯೆ 373ಕ್ಕೇರಿದೆ ಹಾಗೂ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಸೋಮವಾರ ತಿಳಿಸಿದೆ.

ಅವಶೇಷಗಳಡಿಯಲ್ಲಿ ಬದುಕುಳಿದಿರಬಹುದಾದ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಸುಂದಾ ಜಲಸಂಧಿಯ ಅಂಚಿನುದ್ದಕ್ಕೂ ಶನಿವಾರ ತಡರಾತ್ರಿ ಯಾವುದೇ ಮುನ್ಸೂಚನೆಯಿಲ್ಲದೆ ಅಪ್ಪಳಿಸಿದ ಸುನಾಮಿ ಅಲೆಗಳು ನಾಶನಷ್ಟಗಳ ಸರಮಾಲೆಯನ್ನೇ ಸೃಷ್ಟಿಸಿತ್ತು.

ಬಳಿಕ ಮುನ್ನೆಚ್ಚರಿಕೆಯ ಕ್ರಮವಾಗಿ, ಸಮುದ್ರ ತೀರದಲ್ಲಿ ವಾಸಿಸುತ್ತಿರುವ 3,000ಕ್ಕೂ ಅಧಿಕ ಮಂದಿ ಎತ್ತರದ ಸ್ಥಳಗಳಿಗೆ ತೆರಳಿದರು. ಈ ಪ್ರದೇಶದಲ್ಲಿ ಮಂಗಳವಾರದವರೆಗೆ ಎತ್ತರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತವೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಶೋಧ ಮತ್ತು ರಕ್ಷಣಾ ಅಧಿಕಾರಿಗಳು ಸೋಮವಾರ ಬರಿಗೈಯಿಂದಲೇ ಅವಶೇಷಗಳನ್ನು ವಿಲೇವಾರಿ ಮಾಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಬೃಹತ್ ಯಂತ್ರಗಳನ್ನು ಬಳಸಲಾಗುತ್ತಿದೆ. ಸರಕಾರಿ ಮತ್ತು ಸರಕಾರೇತರ ಸಂಘಟನೆಗಳ ನೆರವು ಸಾಮಗ್ರಿಗಳು ಜಾವಾದ ಪಶ್ಚಿಮ ಕರಾವಳಿಯ ಅತ್ಯಂತ ಹೆಚ್ಚು ಪೀಡಿತ ಪ್ರದೇಶ ಪಾಂಡೆಗ್ಲಂಗ್‌ಗೆ ಬರಲು ಆರಂಭಿಸಿವೆ.

ಪೆಸಿಫಿಕ್ ‘ರಿಂಗ್ ಆಫ್ ಫಯರ್’ನಲ್ಲಿ ಇಂಡೋನೇಶ್ಯ

ಇಂಡೋನೇಶ್ಯವು ಪೆಸಿಫಿಕ್ ಸಾಗರದ ಭೂಕಂಪ ವಲಯ ‘ರಿಂಗ್ ಆಫ್ ಫಯರ್’ನ ವ್ಯಾಪ್ತಿಯಲ್ಲಿ ಬರುತ್ತದೆ.ಈ ವಲಯದಲ್ಲಿ ಪದೇ ಪದೇ ಭೂಕಂಪ, ಸುನಾಮಿ ಮತ್ತು ಜ್ವಾಲಾಮುಖಿಗಳು ಸಂಭವಿಸುತ್ತಿರುತ್ತವೆ.ಈ ವರ್ಷದ ಜುಲೈ ಮತ್ತು ಆಗಸ್ಟ್‌ನಲ್ಲಿ ಪ್ರವಾಸಿ ದ್ವೀಪ ಲೊಂಬೊಕ್‌ನಲ್ಲಿ ಸರಣಿ ಭೂಕಂಪಗಳು ಸಂಭವಿಸಿದ್ದು, ದ್ವೀಪ ನೆಲಸಮಗೊಂಡಿದೆ.

ಸೆಪ್ಟಂಬರ್‌ನಲ್ಲಿ ಸುಲವೆಸಿ ದ್ವೀಪದಲ್ಲಿ ಭೂಕಂಪ ಮತ್ತು ಸುನಾಮಿ ದಾಳಿಯಿಂದಾಗಿ 2,000ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

2004ರ ಮಹಾಸುನಾಮಿಯ ನೆನಪು

ಕ್ರಿಸ್ಮಸ್‌ಗೆ ಕೇವಲ ಮೂರು ದಿನಗಳು ಇರುವಾಗ ಅಪ್ಪಳಿಸಿದ ಈ ಸುನಾಮಿಯು 2004 ಡಿಸೆಂಬರ್ 26ರಂದು ಸಂಭವಿಸಿದ ಮಹಾಸುನಾಮಿಯ ನೆನಪುಗಳನ್ನು ಜಾಗೃತಗೊಳಿಸಿದೆ.

ಹದಿನಾಲ್ಕು ವರ್ಷಗಳ ಹಿಂದೆ, ಹಿಂದೂ ಮಹಾಸಾಗರದಲ್ಲಿ ಸಂಭವಿಸಿದ ಸುನಾಮಿಗೆ 14 ದೇಶಗಳ 2.26 ಲಕ್ಷ ಜನರು ಬಲಿಯಾಗಿದ್ದಾರೆ. ಇಂಡೋನೇಶ್ಯವೊಂದರಲ್ಲೇ 1.20 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಮಹಾ ಸುನಾಮಿಯಲ್ಲಿ ಭಾರತದಲ್ಲಿ 1,500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X