ಪ್ರಾರ್ಥನೆ ಸಲ್ಲಿಸುತ್ತಿದ್ದ ಕ್ರೈಸ್ತರ ಮೇಲೆ ದುಷ್ಕರ್ಮಿಗಳ ದಾಳಿ: 12 ಮಂದಿಗೆ ಗಾಯ
ಕಬ್ಬಿಣದ ರಾಡ್, ಕತ್ತಿಗಳನ್ನು ಹಿಡಿದು ನುಗ್ಗಿದ ಮುಸುಕುಧಾರಿಗಳು
![ಪ್ರಾರ್ಥನೆ ಸಲ್ಲಿಸುತ್ತಿದ್ದ ಕ್ರೈಸ್ತರ ಮೇಲೆ ದುಷ್ಕರ್ಮಿಗಳ ದಾಳಿ: 12 ಮಂದಿಗೆ ಗಾಯ ಪ್ರಾರ್ಥನೆ ಸಲ್ಲಿಸುತ್ತಿದ್ದ ಕ್ರೈಸ್ತರ ಮೇಲೆ ದುಷ್ಕರ್ಮಿಗಳ ದಾಳಿ: 12 ಮಂದಿಗೆ ಗಾಯ](https://www.varthabharati.in/sites/default/files/images/articles/2018/12/25/169675.jpg)
ಕೊಹ್ಲಾಪುರ, ಡಿ.25: ರವಿವಾರದ ಪ್ರಾರ್ಥನೆಗಾಗಿ ಸೇರಿದ್ದ ಕ್ರೈಸ್ತರ ಮೇಲೆ ಮಾರಕಾಯುಧಗಳೊಂದಿಗೆ ಆಗಮಿಸಿದ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದಿದೆ.
ಮುಸುಕು ಹಾಕಿಕೊಂಡಿದ್ದ ದುಷ್ಕರ್ಮಿಗಳು ಆಯುಧಗಳು ಮತ್ತು ಕಬ್ಬಿಣದ ರಾಡ್ ಗಳಿಂದ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇಲ್ಲಿನ ಕೊವಾಡ್ ಗ್ರಾಮದಲ್ಲಿ ಪ್ರಾರ್ಥನೆ ನಡೆಯುತ್ತಿತ್ತು ಎನ್ನಲಾಗಿದೆ.
ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ದೌರ್ಜನ್ಯಗಳ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಈ ದಾಳಿ ನಡೆದಿದೆ. ಬೈಕ್ ಗಳಲ್ಲಿ ಆಗಮಿಸಿದ 10ರಿಂದ 15ರವರೆಗಿದ್ದ ದುಷ್ಕರ್ಮಿಗಳು ಮನೆಯೊಳಕ್ಕೆ ನುಗ್ಗಲು ಯತ್ನಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ದುಷ್ಕರ್ಮಿಗಳು ಕಲ್ಲೆಸೆದರು. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story