Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಾದ್ಯಂತ ಸಂಭ್ರಮದ ಕ್ರಿಸ್‌ಮಸ್...

ಬೆಂಗಳೂರಿನಾದ್ಯಂತ ಸಂಭ್ರಮದ ಕ್ರಿಸ್‌ಮಸ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ25 Dec 2018 9:45 PM IST
share
ಬೆಂಗಳೂರಿನಾದ್ಯಂತ ಸಂಭ್ರಮದ ಕ್ರಿಸ್‌ಮಸ್ ಆಚರಣೆ

ಬೆಂಗಳೂರು, ಡಿ.25: ಕ್ರಿಸ್‌ಮಸ್ ಹಬ್ಬದ ಅಂಗವಾಗಿ ನಗರದ ಎಲ್ಲಡೆ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಚರ್ಚ್‌ಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ, ಮಾಲ್‌ಗಳಲ್ಲಿ ಸಂತಾಕ್ಲಾಸ್ ಪ್ರತಿಬಿಂಬ, ಶುಭ ಸಂಕೇತದ ಗಂಟೆಗಳನ್ನಿಡುವ ಮೂಲಕ ಸಡಗರದಿಂದ ಶಾಂತಿಧೂತನ ಜನ್ಮದಿನವನ್ನು ಆಚರಿಸಿದರು.

ನಗರದ ಕ್ಯಾಥೊಲಿಕ್ ಮತ್ತು ಪ್ರೊಟೆಸ್ಟೆಂಟ್ ಚರ್ಚ್‌ಗಳಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರವಿಡೀ ಕ್ರಿಸ್‌ಮಸ್ ಹಬ್ಬವನ್ನು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಯಿತು. ನಗರದಾದ್ಯಂತ ‘ಮೇರಿ ಕ್ರಿಸ್‌ಮಸ್’ ಸಂದೇಶದ ಕ್ರಿಸ್‌ಮಸ್ ಕಾರ್ಡ್‌ಗಳು, ಉಡುಗೊರೆಗಳು ಪರಸ್ಪರ ವಿನಿಮಯ ಮಾಡಿಕೊಳ್ಳಲಾಯಿತು. ಅಲ್ಲದೆ, ಹಲವು ಕ್ರೈಸ್ತ ಬಾಂಧವರು ಅಶಕ್ತರಿಗೆ ಮತ್ತು ಬಡವರಿಗೆ ಬಟ್ಟೆ, ಹಣ ಇತ್ಯಾದಿಗಳ ದಾನಕಾರ್ಯ ಮಾಡುವ ಮೂಲಕ ಹಬ್ಬವನ್ನು ಆಚರಿಸಿಕೊಂಡರು.

ಮಂಗಳವಾರ ಬೆಳಗ್ಗೆ 6 ರಿಂದ 10ರವರೆಗೆ ಚರ್ಚ್‌ಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಹುತೇಕ ಚರ್ಚ್‌ಗಳಲ್ಲಿ ಮೊದಲು ಕನ್ನಡದಲ್ಲಿ ಪ್ರಾರ್ಥನೆ ಜರುಗಿತು. ನಂತರ ಇಂಗ್ಲಿಷ್, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲೂ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿತ್ತು. ಧರ್ಮಗುರುಗಳು ಸಾಮಾಜಿಕ ಬಾಂಧವ್ಯ ಮತ್ತು ಜಾಗತಿಕ ಶಾಂತಿಯ ಕುರಿತು ಸಂದೇಶಗಳನ್ನು ಸಾರಿದರು. ಕ್ರಿಸ್‌ಮಸ್ ಎಂದರೆ ಪರರ ನೋವಿಗೆ ಸ್ಪಂದಿಸುವುದು, ಪರರ ದುಃಖದಲ್ಲಿ ಭಾಗಿಯಾಗುವುದು, ಹಸಿದವರಿಗೆ, ಬಡತನದ ಬೇಗೆಯಲ್ಲಿರುವವರಿಗೆ ನೆರವಾಗುವುದು ಕ್ರಿಸ್‌ಮಸ್. ಹೀಗಾಗಿ ಕ್ರಿಸ್‌ಮಸ್ ಎಂದರೆ ಕೇವಲ ಡಿಸೆಂಬರ್ 24-25ರ ಆಚರಣೆ ಮಾತ್ರವಲ್ಲ. ಪ್ರತಿ ಒಳ್ಳೆಯ ಕೆಲಸ ಮಾಡಿದಾಗಲೂ ಕ್ರಿಸ್ತರು ಜನ್ಮ ತಾಳುತ್ತಾರೆ ಎಂಬ ಸಂದೇಶವನ್ನು ಚರ್ಚ್‌ಗಳಲ್ಲಿ ಪ್ರಾರ್ಥನೆ ಮೂಲಕ ಸಾರಲಾಯಿತು.

ಶಿವಾಜಿನಗರದ ಸೇಂಟ್ ಮೇರಿಸ್ ಬೆಸಿಲಿಕಾ ಚರ್ಚ್, ಫ್ರೇಜರ್‌ಟೌನ್‌ನಲ್ಲಿರುವ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಕೆಥೆಡ್ರಲ್ ಚರ್ಚ್, ಬ್ರಿಗೇಡ್ ರಸ್ತೆಯಲ್ಲಿರುವ ಸಂತ ಪ್ಯಾಟ್ರಿಕ್ಸ್ ಚರ್ಚ್, ಸೇಂಟ್ ಮಾರ್ಕ್ಸ್ ಕೆಥೆಡ್ರಲ್, ಚಾಮರಾಜಪೇಟೆಯ ಸೇಂಟ್ ಜೋಸೆಫ್ ಚರ್ಚ್, ಲಿಂಗರಾಜಪುರದ ಹೋಲಿ ಗೋಸ್ಟ್ ಚರ್ಚ್, ಹಲಸೂರಿನ ಹೋಲಿ ಟ್ರಿನಿಟಿ ಚರ್ಚ್, ಎಂಜಿ ರಸ್ತೆಯ ಈಸ್ಟ್ ಪೆರೇಡ್ ಚರ್ಚ್, ರಿಚ್‌ಮಂಡ್ ರಸ್ತೆಯಲ್ಲಿರುವ ಸೇಕ್ರೇಡ್ ಹಾರ್ಟ್ ಚರ್ಚ್, ಸಂಪಂಗಿರಾಮನಗರದ ಹಡ್ಸನ್ ಸ್ಮಾರಕ ಚರ್ಚ್ ಸೇರಿದಂತೆ ನಗರದ ಹಲವು ರೋಮನ್ ಕ್ಯಾಥೊಲಿಕ್ ಮತ್ತು ಪ್ರೊಟೆಸ್ಟೆಂಟ್ ಚರ್ಚ್‌ಗಳ(ಸಿಎಸ್‌ಐ)ಲ್ಲಿ ವಿಶೇಷ ಪ್ರಾರ್ಥನಾ ಸಭೆಗಳು ನಡೆದವು.

ತಿಂಡಿಗಳ ಸಂಭ್ರಮ: ಕ್ರಿಸ್‌ಮಸ್ ಎಂದರೆ ಕೇಕು, ಸಿಹಿ ತಿನಿಸು ಬಲು ಪ್ರಸಿದ್ಧಿ. ಜತೆಗೆ ಎಲ್ಲರ ಮನೆಯಲ್ಲಿ ಘಮ ಘಮ ಬಿರಿಯಾನಿ ಸೇರಿದಂತೆ ಮಾಂಸಾಹಾರದ ಭಕ್ಷ್ಯ ಭೋಜನಗಳು ನಡೆದವು. ಇದಲ್ಲದೆ ಪ್ಲಂ ಕೇಕ್ (ಸಾದಾ ಮತ್ತು ಡ್ರ್ರೈೂಟ್ಸ್ ಮಿಶ್ರಿತ), ಬಿರಿಯಾನಿ, ಗಲಗಲಾ ಸಿಹಿ ತಿನಿಸು, ಮೊಟ್ಟೆ ಕಜ್ಜಾಯ ಇತ್ಯಾದಿಗಳು ಕಂಗೊಳಿಸಿದ್ದವು.

ಡಿ.24ರ ಮಧ್ಯರಾತ್ರಿ 12 ಗಂಟೆಗೆ ಬಾಲಕ ಯೇಸುವನ್ನು ಮೆರವಣಿಗೆಯ ಮೂಲಕ ತಂದು ಮೊದಲೇ ನಿರ್ಮಾಣಗೊಂಡಿದ್ದ ಗೋದಲಿಯಲ್ಲಿ ನಂತರ ಪವಿತ್ರ ತೀರ್ಥದ ಪ್ರೋಕ್ಷಣೆ ನಡೆಯಿತು. ಧೂಪದ ಆರತಿ, ಪುಷ್ಪದ ಅರ್ಚನೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X