Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: ರೈಲ್ವೇಸ್ ಗೆ ಸೋಲುಣಿಸಿದ ಕರ್ನಾಟಕ

ರಣಜಿ: ರೈಲ್ವೇಸ್ ಗೆ ಸೋಲುಣಿಸಿದ ಕರ್ನಾಟಕ

ಆತಿಥೇಯರ ಕ್ವಾರ್ಟರ್‌ಫೈನಲ್ ಆಸೆ ಜೀವಂತ

ವಾರ್ತಾಭಾರತಿವಾರ್ತಾಭಾರತಿ25 Dec 2018 11:20 PM IST
share
ರಣಜಿ: ರೈಲ್ವೇಸ್ ಗೆ ಸೋಲುಣಿಸಿದ ಕರ್ನಾಟಕ

ಶಿವಮೊಗ್ಗ, ಡಿ.25: ನಿರೀಕ್ಷೆಯಂತೆ ಕರ್ನಾಟಕ ತಂಡ ರೈಲ್ವೇಸ್ ವಿರುದ್ಧ ಜಯ ಸಾಧಿಸಿ ತನ್ನ ಕ್ವಾರ್ಟರ್ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಗೌತಮ್ ಕೃಷ್ಣಪ್ಪ ಸ್ಪಿನ್ ಕೈಚಳಕಕ್ಕೆ ಕಂಗಾಲಾದ ಪ್ರವಾಸಿಗರು ಅಂತಿಮವಾಗಿ 185 ರನ್‌ಗೆ ಪೆವಿಲಿಯನ್ ಸೇರಿದರು. 176 ರನ್‌ಗಳಿಂದ ಕರ್ನಾಟಕ ವಿಜಯದ ಪತಾಕೆ ಹಾರಿಸಿತು.

ಇಲ್ಲಿಯ ಕೆಎಸ್‌ಸಿಎ ನವುಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸೋಮವಾರ 44 ರನ್ ಗಳಿಸಿ 1 ವಿಕೆಟ್ ಕಳೆದುಕೊಂಡಿದ್ದ ರೈಲ್ವೇಸ್ ನಾಲ್ಕನೇ ದಿನವಾದ ಮಂಗಳವಾರ ತನ್ನ ಆಟ ಆರಂಭಿಸಿ 185 ರನ್‌ಗಳಿಗೆ ಸರ್ವ ಪತನವಾಯಿತು. ದಿನದಾಟ ಆರಂಭಿಸಿದ್ದ ವಾಸಕ್ಕರ್(43) ಹಾಗೂ ನಿತಿನ್ ಭಿಲ್ಲೆ(39) ಉತ್ತಮ ಆಟವಾಡಿ ತಂಡ ಡ್ರಾ ಸಾಧಿಸಲು ನೆರವಾಗುವ ನಿರೀಕ್ಷೆಯಲ್ಲಿದ್ದರು. ವಾಸಕ್ಕರ್ ರನೌಟ್ ಆಗಿ ಪೆವಿಲಿಯನ್ ಸೇರಿದರೆ, ಭಿಲ್ಲೆ ಅವರು ಗೌತಮ್‌ರ ಸ್ಪಿನ್ ಬಲೆಗೆ ಬಿದ್ದರು. ಆನಂತರ ಪ್ರಥಮ್ ಸಿಂಗ್(48) ಹಾಗೂ ರೈಲ್ವೇಸ್ ನಾಯಕ ಅರಿಂದಮ್(ಔಟಾಗದೇ 24) ತಂಡಕ್ಕೆ ಚೇತರಿಕೆ ನೀಡುವ ಪ್ರಯತ್ನದಲ್ಲಿ ಅಲ್ಪ ಯಶಸ್ಸು ಕಂಡರೂ ಡ್ರಾ ಸಾಧಿಸುವಷ್ಟು ತಾಳ್ಮೆ ತೋರಲಿಲ್ಲ.

ಪ್ರಥಮ್ ಸಿಂಗ್ ವಿಕೆಟ್ ಒಪ್ಪಿಸಿದ ನಂತರ ಕ್ರೀಸ್‌ಗೆ ಬಂದ ಇತರ ದಾಂಡಿಗರು ಎರಡಂಕಿ ಮೊತ್ತವನ್ನೂ ಗಳಿಸಲಿಲ್ಲ. ರೈಲ್ವೇಸ್‌ನ ನಾಲ್ವರು ಸೊನ್ನೆ ಸುತ್ತಿದ್ದು ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು. ಒಂದು ಹಂತದಲ್ಲಿ 159ರನ್‌ಗೆ ಮೂರೇ ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿದ್ದ ರೈಲ್ವೇಸ್‌ಗೆ ಕೃಷ್ಣಪ್ಪ ಗೌತಮ್ ತಡೆ ಒಡಿದ್ಡರು. ಡ್ರಾದತ್ತ ಮುಖ ಮಾಡಿದ್ದ ಪಂದ್ಯವನ್ನು ಕರ್ನಾಟಕದತ್ತ ತಿರುಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. 24 ಓವರ್‌ಗಳ ಸ್ಪೆಲ್‌ನಲ್ಲಿ ಕೇವಲ 30 ರನ್ ನೀಡಿ 6 ವಿಕೆಟ್‌ನ್ನು ತಮ್ಮ ಖಾತೆ ಸೇರಿಸಿದರು. ಅವರ 11 ಓವರ್ ಮೇಡನ್ ಆಗಿದ್ದವು. ಗೌತಮ್‌ರಿಗೆ ಉತ್ತಮ ಸಾಥ್ ನೀಡಿದ ಶ್ರೇಯಸ್ ಗೋಪಾಲ್ 2 ವಿಕೆಟ್ ಪಡೆದರು. ಅಂತಿಮವಾಗಿ ಪ್ರವಾಸಿಗರು 185 ರನ್‌ಗಳಿಗೆ ಸರ್ವಪತನ ಕಂಡರು. ಎರಡೂ ಇನಿಂಗ್‌ನಲ್ಲಿ ಒಟ್ಟು 153 ರನ್ ಗಳಿಸಿದ ಕರ್ನಾಟಕದ ನಿಶ್ಚಲ್‌ಗೆ ಪಂದ್ಯಶ್ರೇಷ್ಠ ಗೌರವ ಒಲಿಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X