Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸರಿಗೆ ಹೊಸ ವರ್ಷಕ್ಕೆ ಉಡುಗೊರೆ:...

ಪೊಲೀಸರಿಗೆ ಹೊಸ ವರ್ಷಕ್ಕೆ ಉಡುಗೊರೆ: ಮುಖ್ಯಮಂತ್ರಿ ಕುಮಾರಸ್ವಾಮಿ

ನೂತನ ಗಸ್ತು ದ್ವಿಚಕ್ರ ವಾಹನಗಳು ಸೇವೆಗೆ ಸಮರ್ಪಣೆ

ವಾರ್ತಾಭಾರತಿವಾರ್ತಾಭಾರತಿ26 Dec 2018 9:33 PM IST
share
ಪೊಲೀಸರಿಗೆ ಹೊಸ ವರ್ಷಕ್ಕೆ ಉಡುಗೊರೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಡಿ.26: ಪೊಲೀಸರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಹೊಸವರ್ಷದ ಉಡುಗೊರೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಬುಧವಾರ ವಿಧಾನಸೌಧದ ಪೂರ್ವದ್ವಾರದಲ್ಲಿ ಪೊಲೀಸರಿಗೆ ನೂತನ ಗಸ್ತು ದ್ವಿಚಕ್ರ ವಾಹನಗಳನ್ನು ಸೇವೆಗೆ ಸಮರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರಕಾರ ಗಮನ ಹರಿಸಿದೆ. ಹೀಗಾಗಿ, ಮುಂದಿನ ವರ್ಷದ ಆರಂಭದಲ್ಲಿ ಬೇಡಿಕೆಗಳನ್ನು ಈಡೇರಿಸುವ ಮೂಲಕ ಉಡುಗರೆ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಪೊಲೀಸರು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ಮಾಡಲು ಅಗತ್ಯವಿರುವ ಸೌಲಭ್ಯ ಮತ್ತು ಸೌಕರ್ಯವನ್ನು ಪೂರೈಸಲು ಸರಕಾರ ಸಂಪೂರ್ಣ ಸಹಕಾರ ನೀಡುತ್ತದೆ. ಕೆಳ ಹಂತದಲ್ಲಿ ಕಾರ್ಯನಿರ್ವಹಿಸುವ ಪೊಲೀಸರು ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕೆಲಸ ಮಾಡಲು ಅವರಿಗೆ ಮತ್ತು ಅವರ ಕುಟುಂಬ ವರ್ಗಕ್ಕೆ ಕೆಲವು ಸೌಲಭ್ಯ ಕಲ್ಪಿಸಬೇಕಿದೆ. ಸೌಲಭ್ಯ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಅನೇಕ ವರದಿ ಸಲ್ಲಿಕೆಯಾಗಿದೆ. ಎಲ್ಲವನ್ನೂ ಪರಿಗಣಿಸಿ ಸಿಬ್ಬಂದಿಗೆ ಹೊಸ ವರ್ಷದ ಉಡುಗೊರೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಹೊಸ ನೇಮಕಾತಿ: ಬೆಂಗಳೂರು ನಗರ ದಿನದಿಂದ ದಿನಕ್ಕೆ ನಿರೀಕ್ಷೆ ಮತ್ತು ಕಲ್ಪನೆಗೂ ಮೀರಿ ಬೆಳೆಯುತ್ತಿದೆ. ಅದರಂತೆ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಸಿಬ್ಬಂದಿ ಪ್ರಮಾಣ ಹೆಚ್ಚಿಸಬೇಕಾಗಿದೆ. ಹಾಗಾಗಿ ಹೊಸ ಪೊಲೀಸರ ನೇಮಕಾತಿಗೆ ಸಹ ಮುಂದಾಗುವ ಪ್ರಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಎದುರಾಗಿರುವ ಪೊಲೀಸ್ ಸಿಬ್ಬಂದಿ ಕೊರತೆ ಸರಿದೂಗಿಸಲು ಮುಂಬರುವ ವರ್ಷಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಪೊಲೀಸರ ನೇಮಕಾತಿ ಆಗಲಿದೆ. ಪೊಲೀಸರಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ನಾಗರಿಕರ ರಕ್ಷಣೆ ಹಾಗೂ ಕಾನೂನ ಸುವ್ಯವಸ್ಥೆಗೆ ಎಲ್ಲ ಸೌಲಭ್ಯ ಸರ್ಕಾರ ಒದಗಿಸಲಿದೆ ಎಂದರು.

ಸರಗಳ್ಳತನಕ್ಕೆ ಕಡಿವಾಣ: ವಿತರಿಸಿರುವ ದ್ವಿಚಕ್ರ ವಾಹನಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಗರದಲ್ಲಿ ಹೆಚ್ಚುತ್ತಿರುವ ಸರಗಳ್ಳತನಗಳಿಗೆ ಕಡಿವಾಣ ಹಾಕಿ. ಮಹಿಳೆಯರಲ್ಲಿ ತಾವು ಸುರಕ್ಷಿತ ಎಂಬ ಭಾವನೆ ಮೂಡಿಸಿ ಎಂದು ಮುಖ್ಯಮಂತ್ರಿ ಇದೇ ವೇಳೆ ಸೂಚಿಸಿದರು.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾತನಾಡಿ, ಬೆಂಗಳೂರು ಪೊಲೀಸ್ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು, ಇಲಾಖೆಗೆ ಇನ್ನಷ್ಟು ಬಲ ತುಂಬಲು 911 ದ್ವಿಚಕ್ರ ವಾಹನಗಳನ್ನು ಗಸ್ತು ತಿರುಗಲು ನೀಡಲಾಗಿದೆ. ಈಗಾಗಲೇ 300 ಹೊಯ್ಸಳ ಕಾರುಗಳು ಗಸ್ತು ತಿರುಗುತ್ತಿವೆ. ಆದರೆ ಕೆಲ ಬೀದಿಗಳಿಗೆ ಕಾರುಗಳು ಹೋಗಲು ಸಾಧ್ಯವಿಲ್ಲ. ಹೀಗಾಗಿ ನಗರದೆಲ್ಲೆಡೆ ಗಸ್ತು ತಿರುಗಲು ಬೈಕ್ ನೀಡಲಾಗಿದ್ದು, ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್, ಶಾಸಕ ರೋಷನ್‌ ಬೇಗ್, ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು, ನಗರ ಪೊಲೀಸ್ ಆಯುಕ್ತ ಸುನೀಲ್‌ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಮದ್ದೂರಿನ ಜೆಡಿಎಸ್ ಮುಖಂಡ ಪ್ರಕಾಶ್ ಹಂತಕರನ್ನು ಸ್ಮೋಕ್‌ಔಟ್ ಮಾಡಿ ಎಂದು ಹೇಳುವ ಬದಲು ಭಾವಾವೇಶದಲ್ಲಿ ಶೂಟ್‌ಔಟ್ ಎಂಬ ಪದ ಬಳಸಿದ್ದೇನೆ. ಆದರೆ ಇದನ್ನೇ ದೊಡ್ಡದು ಮಾಡುವುದು ಸರಿಯಲ್ಲ. ನಾನು ಭಾವುಕ ಮನುಷ್ಯ ಹಾಗಾಗಿ ಆ ಸಂದರ್ಭದಲ್ಲಿ ಆ ರೀತಿ ಮಾತನಾಡಿದ್ದೆ. ಪದ ಬಳಕೆಯಲ್ಲಿ ತಪ್ಪಾಗಿದೆ. ಬೇಕು ಬೇಕೆಂದು ಈ ರೀತಿ ನಾನು ಹೇಳಿಲ್ಲ.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X