Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿವೇಶನ ನೋಂದಣಿ ಮಾಡಿಸುವುದಾಗಿ ನಂಬಿಸಿ...

ನಿವೇಶನ ನೋಂದಣಿ ಮಾಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ: ಅಧಿಕಾರಿಯಿಂದ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ26 Dec 2018 10:23 PM IST
share
ನಿವೇಶನ ನೋಂದಣಿ ಮಾಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ: ಅಧಿಕಾರಿಯಿಂದ ದೂರು ದಾಖಲು

ಶಿವಮೊಗ್ಗ, ಡಿ. 26: ನಿವೇಶನ ಮಂಜೂರಾತಿಯ ಬಗ್ಗೆ ವಿವರ ಕಲೆ ಹಾಕಲು ಇಲ್ಲಿನ ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಗೆ ಆಗಮಿಸಿದ್ದ ಇಲಾಖೆಯೊಂದರ ಹಿರಿಯ ಅಧಿಕಾರಿಗೆ, ವಂಚಕನೋರ್ವ ಲಕ್ಷಾಂತರ ರೂ. ವಂಚಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಕುರಿತಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. 

ಪ್ರಸ್ತುತ ಬೆಂಗಳೂರಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಉಪ ನಿರ್ದೇಶಕರಾಗಿರುವ ಕೆ. ರಂಗಸ್ವಾಮಿ ವಂಚನೆಗೊಳಗಾದ ಅಧಿಕಾರಿ ಎಂದು ಗುರುತಿಸಲಾಗಿದೆ. ತಮಗೆ 1.58 ಲಕ್ಷ ರೂ.ಗಳನ್ನು ವಂಚಿಸಲಾಗಿದೆ ಎಂದು ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಖಡಕ್ ಪೊಲೀಸ್ ಅಧಿಕಾರಿ ಖ್ಯಾತಿಯ ಪಿಎಸ್ಐ ಎನ್.ಎಸ್.ರವಿ ನೇತೃತ್ವದ ಪೊಲೀಸ್ ತಂಡ, ವಂಚಕನ ಪತ್ತೆಗೆ ತನಿಖೆ ತೀವ್ರಗೊಳಿಸಿದೆ.

ಘಟನೆ ಹಿನ್ನೆಲೆ: ಕಳೆದ ಐದಾರು ವರ್ಷಗಳ ಹಿಂದೆ, ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರ ರಚಿಸಿದ್ದ ಬಡಾವಣೆಯೊಂದರಲ್ಲಿ ನಿವೇಶನಕ್ಕೆ ದೂರುದಾರ ಕೆ.
ರಂಗಸ್ವಾಮಿಯವರು ಅರ್ಜಿ ಸಲ್ಲಿಸಿದ್ದರು. ನಿವೇಶನ ಮಂಜೂರಾಗಿದೆಯೇ, ಇಲ್ಲವೇ ಎಂಬುವುದರ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಅಧಿಕಾರಿಯು ಸೋಮವಾರ ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಗೆ ಆಗಮಿಸಿದ್ದಾರೆ.

ಕಚೇರಿ ಬಳಿ ಓಡಾಡಿಕೊಂಡಿದ್ದ ವಂಚಕನು, ತಾನು ಈ ಕಚೇರಿಯ ನೌಕರನೆಂದು ಪರಿಚಯಿಸಿಕೊಂಡಿದ್ದಾನೆ. ಅವರ ಬಳಿಯಿದ್ದ ದಾಖಲೆ ಪಡೆದುಕೊಂಡಿದ್ದಾನೆ. ಪ್ರಾಧಿಕಾರದ ನೌಕರರ ಬಳಿ ಚರ್ಚಿಸುವ ನಾಟಕ ಮಾಡಿದ್ದಾನೆ. ಕಚೇರಿಯ ಕೆಲ ವಿಭಾಗಗಳಿಗೆ ಓಡಾಡಿದ್ದಾನೆ. ನಂತರ ಅವರನ್ನು ಸಮೀಪದ ಸಬ್ ರಿಜಿಸ್ಟಾರ್ ಕಚೇರಿಗೆ ಕರೆ ತಂದಿದ್ದಾನೆ. ಅಲ್ಲಿಯೂ ಕೂಡ ಅಲ್ಲಿನ ಕೆಲ ಸಿಬ್ಬಂದಿಗಳ ಜೊತೆ ಮಾತಾಡಿ, ಏನೇನೂ ಬರೆದುಕೊಂಡಿದ್ದಾನೆ. ತದನಂತರ ದೂರುದಾರರ ಬಳಿ ಆಗಮಿಸಿ, 'ನೀವು ಅದೃಷ್ಟವಂತರು. ಕಳೆದ ಕೆಲ ವರ್ಷಗಳ ಹಿಂದೆಯೇ ನಿಮಗೆ ನಿವೇಶನ ಮಂಜೂರಾಗಿದೆ. ತಕ್ಷಣವೇ ನಿಮ್ಮ ನಿವೇಶನ ನೊಂದಣಿ ಮಾಡಿಸಿಕೊಳ್ಳಿ. ಇಲ್ಲದಿದ್ದರೆ ರದ್ದಾಗುತ್ತದೆ' ಎಂದು ಹೇಳಿದ್ದಾನೆ. ವಂಚಕನ ಮಾತು ನಂಬಿದ ದೂರುದಾರ ಅಧಿಕಾರಿಯು, 1.58 ಲಕ್ಷ ರೂ.ಗಳನ್ನು ಸಂಗ್ರಹಿಸಿ ತಂದಿದ್ದಾರೆ. ಪ್ರಾಧಿಕಾರದ ಕಚೇರಿಯ ಬಳಿ ವಂಚಕನಿಗೆ ನೀಡಿದ್ದಾರೆ.

'ಪ್ರಾಧಿಕಾರದ ಅಧಿಕಾರಿಗಳು ಊಟಕ್ಕೆ ಹೋಗಿದ್ದಾರೆ. ಅಧಿಕಾರಿಗಳ ಮನೆಗೆ ಹೋಗಿ ಸಹಿ ಹಾಕಿಸಿಕೊಂಡು ಬರುತ್ತೆನೆ' ಎಂದು ದೂರುದಾರರಿಗೆ ತಿಳಿಸಿ ವಂಚಕ ಹೋಗಿದ್ದಾನೆ. ಆದರೆ ಎಷ್ಟೇ ಹೊತ್ತಾದರೂ ವಂಚಕನು ಕಚೇರಿಯತ್ತ ತಲೆ ಹಾಕಿಲ್ಲ. ಇದರಿಂದ ಅನುಮಾನಗೊಂಡ ದೂರುದಾರರು, ಕಚೇರಿಯ ಇತರೆ ಸಿಬ್ಬಂದಿಗಳ ಬಳಿ ತೆರಳಿ ವಿಷಯ ತಿಳಿಸಿದ್ದಾರೆ. ಈ ವೇಳೆ ವಂಚನೆಗೊಳಗಾಗಿರುವುದನ್ನರಿತ ದೂರುದಾರರು ವಿನೋಬನಗರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಸಿ. ಸಿ. ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆ!
ನಗರಾಭಿವೃದ್ದಿ ಪ್ರಾಧಿಕಾರ ಕಚೇರಿಯ ಪ್ರತಿಯೊಂದು ವಿಭಾಗದಲ್ಲಿಯೂ ಸಿ.ಸಿ. ಕ್ಯಾಮರ ಅಳವಡಿಸಲಾಗಿದೆ. ವಂಚಕನು ವಿವಿಧ ವಿಭಾಗಗಳಿಗೆ ಓಡಾಡುತ್ತಿರುವ ದೃಶ್ಯಾವಳಿಯು ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಗಳನ್ನು ಸಂಗ್ರಹಿಸಿರುವ ಸಬ್ ಇನ್ಸ್ಪೆಕ್ಟರ್ ಎನ್.ಎಸ್.ರವಿಯವರು ತನಿಖೆ ತೀವ್ರಗೊಳಿಸಿದ್ದಾರೆ. ಹಾಗೆಯೇ ಸೂಡಾ ಹಾಗೂ ಸಬ್ ರಿಜಿಸ್ಟಾರ್ ಕಚೇರಿಗಳಿಗೆ ಪೊಲೀಸರು ಭೇಟಿಯಿತ್ತು ಅಲ್ಲಿನ ಸಿಬ್ಬಂದಿಗಳಿಂದ ಮಾಹಿತಿ ಕೂಡ ಕಲೆ ಹಾಕಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X