Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಬ್ಯಾಂಕ್‍ಗಳ ವಿಲೀನೀಕರಣ...

ಚಿಕ್ಕಮಗಳೂರು: ಬ್ಯಾಂಕ್‍ಗಳ ವಿಲೀನೀಕರಣ ಖಂಡಿಸಿ ಬ್ಯಾಂಕ್ ಸಿಬ್ಬಂದಿ ಮುಷ್ಕರ

ಕೇಂದ್ರದ ವಿರುದ್ಧ ನೌಕರರಿಂದ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ26 Dec 2018 11:25 PM IST
share
ಚಿಕ್ಕಮಗಳೂರು: ಬ್ಯಾಂಕ್‍ಗಳ ವಿಲೀನೀಕರಣ ಖಂಡಿಸಿ ಬ್ಯಾಂಕ್ ಸಿಬ್ಬಂದಿ ಮುಷ್ಕರ

ಚಿಕ್ಕಮಗಳೂರು, ಡಿ.26: ಬ್ಯಾಂಕ್ ಸಂಘಗಳ ಸಂಯುಕ್ತ ವೇದಿಕೆಯ ಕರೆಯ ಮೇರೆಗೆ ನಡೆದ ಅಖಿಲ ಭಾರತ ಬ್ಯಾಂಕ್ ಮುಷ್ಕರದ ಅಂಗವಾಗಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ವತಿಯಿಂದ ನಗರದ ಬ್ಯಾಂಕ್ ಉದ್ಯೋಗಿಗಳು ಮತ್ತು ಅಧಿಕಾರಿಗಳು ಬುಧವಾರ ಕೆನರಾ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕೆನರಾ ಬ್ಯಾಂಕಿನ ನೌಕರ ಬಸವರಾಜ್ ಮಾತನಾಡಿ, ಕೇಂದ್ರ ಸರಕಾರ ಎಸ್.ಬಿ.ಐ. ಸಹವರ್ತಿ ಬ್ಯಾಂಕ್‍ಗಳ ವಿಲೀನದಿಂದ ಬಂದಿರುವ ಫಲಿತಾಂಶ ನಕಾರಾತ್ಮಕವಾಗಿದ್ದು, ಪ್ರಥಮ ಬಾರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ವಿಲೀನದ ತರುವಾಯ ತನ್ನ ಬ್ಯಾಲನ್ಸ್ ಶೀಟ್‍ನಲ್ಲಿ ನಷ್ಟ ತೋರಿಸಿದೆ. ಭಾರತಕ್ಕೆ ಬೇಕಿರುವುದು ಬ್ಯಾಂಕುಗಳ ವಿಲೀನಿಕರಣವಲ್ಲ, ಬ್ಯಾಂಕುಗಳ ವಿಸ್ತರಣೆ ಆಗಬೇಕಿದೆ. ಅನೇಕ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಬ್ಯಾಂಕುಗಳು ಹೆಚ್ಚು ವಿಸ್ತರಣೆ ಆಗಿಲ್ಲ. ಸುಸ್ತಿ ಸಾಲಗಳು ಮರುಪಾವತಿಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದರ ಮೂಲಕ ಬ್ಯಾಂಕ್ ಕ್ಷೇತ್ರದ ಆರೋಗ್ಯವನ್ನು ಸುಧಾರಿಸಬೇಕಾಗಿದೆ ಎಂದರು.

ಆದರೂ ಬುದ್ಧಿ ಕಲಿಯದೆ ಕೇಂದ್ರ ಸರಕಾರ ತನ್ನ ಬ್ಯಾಂಕ್‍ಗಳ ವಿಲೀನದ ಕಾರ್ಯ ಮುಂದುವರೆಸಿದ್ದು, ಸದ್ಯ ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ ಮತ್ತು ವಿಜಯಾ ಬ್ಯಾಂಕ್‍ಗಳನ್ನು ವಿಲೀನಗೊಳಿಸಲು ಮುಂದಾಗಿದ್ದು, ಹಾಗೂ ಮುಂದಿನ ದಿನಗಳಲ್ಲಿ ಇನ್ನು ಹಲವು ಬ್ಯಾಂಕ್‍ಗಳನ್ನು ವಿಲೀನ ಗೊಳಿಸಲು ಮುಂದುವರೆಯುತ್ತಿರುವುದು ವಿಪರ್ಯಾಸ ಎಂದರು.

ಜಯಪ್ರಕಾಶ್ ಮಾತನಾಡಿ, ವಿಲೀನ ಪ್ರಕ್ರಿಯೆಯಿಂದ ನಮ್ಮ ದೇಶದ ಆರ್ಥಿಕತೆಗಾಗಲಿ ಅಥವಾ ಜನತೆಗಾಗಲಿ ಯಾವುದೇ ಪ್ರಯೋಜನವಾಗುತ್ತಿಲ್ಲ. ಇದು ಉದ್ಯೋಗಿಗಳ ಕೆಲಸಕ್ಕೆ, ಕೆಲಸದ ಭದ್ರತೆಗೆ ಹಾಗೂ ಅವರ ಹಿತಾಸಕ್ತಿಗಳಿಗೆ ಭಾದಕಗಳಾಗಿರುತ್ತದೆ. ಅಲ್ಲದೆ ಇದರಿಂದ ಬ್ಯಾಂಕುಗಳಲ್ಲಿನ ಉದ್ಯೋಗಾವಕಾಶಗಳಿಗೂ ಕುತ್ತುಂಟಾಗುತ್ತಿದೆ ಎಂದರು.

ಸರಕಾರ ಸುಸ್ತಿಯಾಗಿರುವ ಸಾಲಗಳನ್ನು ಮರುಪಾವತಿಸುವಂತಹ ಕ್ರಮಗಳನ್ನು ಜಾರಿಮಾಡುವುದರತ್ತ ಗಮನವನ್ನು ಹರಿಸುವ ಬದಲು ವಿಲೀನ ಪ್ರಕ್ರಿಯೆ ಮುಂದುವರಿಸಿ ವಿಫಲ ಕಾಣುತ್ತಿದೆ. ಈಗಾಗಲೇ ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆ ಸಹವರ್ತಿ ಬ್ಯಾಂಕುಗಳ ವಿಲೀನಿಕರಣ ಹಾನಿಕಾರಕವಾಗಿ ಪರಿಣಮಿಸಿದೆ. ಅನೇಕ ಶಾಖೆಗಳನ್ನು ಮುಚ್ಚಲಾಗಿದೆ. ಇದರಿಂದ ಸಿಬ್ಬಂದಿ ಕೊರತೆ ಉಂಟಾಗಿದೆ. ವ್ಯಾಪಾರ ವಹಿವಾಟುಗಳು ಕುಂಟಿತಗೊಂಡಿದೆ, ಮರುಪಾವತಿಯಾಗದ ಸಾಲಗಳು ಹೆಚ್ಚಾಗಿವೆ ಎಂದರು.

ಪ್ರತಿಭಟನೆಯಲ್ಲಿ ಸಿಂಡಿಕೇಟ್ ಬ್ಯಾಂಕಿನ ರೇವಣ್ಣ, ಎಸ್.ಬಿ.ಐ ಬ್ಯಾಂಕಿನ ಚಂದ್ರಪ್ಪ, ಕೆನರಾ ಬ್ಯಾಂಕ್ ಅಧಿಕಾರಿ ಯೂಸುಫ್ ಹಾಗು ಇನ್ನಿತರೆ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X