Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದ ಬ್ಯಾಂಕ್ ವಿಲೀನ ನಿರ್ಧಾರಕ್ಕೆ...

ಕೇಂದ್ರದ ಬ್ಯಾಂಕ್ ವಿಲೀನ ನಿರ್ಧಾರಕ್ಕೆ ವಿರೋಧ: ದಾವಣಗೆರೆಯಲ್ಲಿ ಬ್ಯಾಂಕ್ ನೌಕರರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Dec 2018 11:55 PM IST
share
ಕೇಂದ್ರದ ಬ್ಯಾಂಕ್ ವಿಲೀನ ನಿರ್ಧಾರಕ್ಕೆ ವಿರೋಧ: ದಾವಣಗೆರೆಯಲ್ಲಿ ಬ್ಯಾಂಕ್ ನೌಕರರಿಂದ ಪ್ರತಿಭಟನೆ

ದಾವಣಗೆರೆ,ಡಿ.26: ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಾದ ಬ್ಯಾಂಕ್ ಆಫ್ ಬರೋಡಾ, ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ವಿಲೀನೀಕರಿಸುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರ ವಿರೋಧಿಸಿ ದಾವಣಗೆರೆ ಪಿಬಿ ರಸ್ತೆ ವಿಜಯಾ ಬ್ಯಾಂಕ್ ಮುಖ್ಯ ಶಾಖೆ ಮುಂಭಾಗದಲ್ಲಿ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಮುಖಂಡ ಕೆ. ರಾಘವೇಂದ್ರ ನಾಯರಿ, ಕೇಂದ್ರ ಸರ್ಕಾರದ ವಿಲೀನೀಕರಣ ನೀತಿಯು ಅತ್ಯಂತ ಅವೈಜ್ಞಾನಿಕ ಮತ್ತು ಅಸಮರ್ಥನೀಯವಾಗಿದೆ. "ದೊಡ್ಡ ಬ್ಯಾಂಕ್ - ದೊಡ್ಡ ಅಪಾಯ" ಎನ್ನುವಂತೆ ಬ್ಯಾಂಕ್ ವಿಲೀನೀಕರಣದಿಂದ ಯಾವುದೇ ರೀತಿಯ ಅನುಕೂಲತೆಗಳು ಆಗುವ ಸಾಧ್ಯತೆಗಳಿಲ್ಲ. ನಮ್ಮ ದೇಶಕ್ಕೆ ದೊಡ್ಡ ಬ್ಯಾಂಕುಗಳ ಅಗತ್ಯಕ್ಕಿಂತ ಭದ್ರವಾದ ಬುನಾದಿ ಹೊಂದಿರುವ ಮತ್ತು ಜನಸಾಮಾನ್ಯನ ಅಗತ್ಯಕ್ಕೆ ಸ್ಪಂದಿಸುವ ಸೇವಾ ಮನೋಭಾವನೆಯುಳ್ಳ ಬ್ಯಾಂಕುಗಳ ಅಗತ್ಯವಿದೆ ಎನ್ನುವುದನ್ನು ಸರ್ಕಾರ ಅರ್ಥಮಾಡಿಕೊಳ್ಳುತ್ತಿಲ್ಲ ಎಂದರು.

ಈ ವಿಲೀನೀಕರಣ ಧೋರಣೆ ಸಂಪೂರ್ಣ ಕಾರ್ಮಿಕ ವಿರೋಧಿಯಾಗಿದ್ದು, ವಿಲೀನೀಕರಣದ ನಂತರದ ದಿನಗಳಲ್ಲಿ ಸರ್ಕಾರವು ಬ್ಯಾಂಕ್ ಶಾಖೆಗಳ ಮುಚ್ಚುವಿಕೆ, ಸಿಬ್ಬಂದಿ ಸ್ವಯಂ ನಿವೃತ್ತಿಗೊಳಿಸುವಿಕೆ, ಸಿಬ್ಬಂದಿಗಳ ನೇಮಕಾತಿಯಲ್ಲಿ ಕಡಿತ ಮತ್ತು ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆ ದುರ್ಬಲಗೊಳಿಸುವ ಅಪಾಯವಿದೆ. ಇದು ರಾಷ್ಟ್ರೀಕೃತ ಬ್ಯಾಂಕಿಂಗ್ ವ್ಯವಸ್ಥೆ ದುರ್ಬಲಗೊಳಿಸುವ ಹುನ್ನಾರ ಮತ್ತು ಹೊಸ ತಲೆಮಾರಿನ ಖಾಸಗಿ ಬ್ಯಾಂಕುಗಳಿಗೆ ಅನಗತ್ಯವಾದ ಸಹಕಾರ ನೀಡುವ ದುರಾಲೋಚನೆಯಾಗಿದೆ ಎಂದರು.

ಪ್ರಸ್ತುತ ಭಾರತದ ದೇಶದ ಆರ್ಥಿಕ ವ್ಯವಸ್ಥೆಗೆ ಮತ್ತು ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಗೆ ಬೇಕಾಗಿರುವುದು ಬ್ಯಾಂಕುಗಳ ವಿಲೀನವಲ್ಲ. ಬ್ಯಾಂಕುಗಳ ವಿಸ್ತಾರ ಈಗಿನ ಅತ್ಯಗತ್ಯ ಅವಶ್ಯಕತೆ. ಅನೇಕ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಬ್ಯಾಂಕುಗಳ ವಿಸ್ತರಣೆ ಇನ್ನೂ ಪರಿಣಾಮಕಾರಿಯಾಗಿ ಆಗಿಲ್ಲ. ಸರ್ಕಾರಿ ಬ್ಯಾಂಕುಗಳ ವಿಸ್ತರಣೆ ಮತ್ತು ಅಗತ್ಯ ಸಿಬ್ಬಂದಿ ನೇಮಕಾತಿ ಈಗಿನ ತುರ್ತು ಅಗತ್ಯವೇ ಹೊರತು ಬ್ಯಾಂಕುಗಳ ವಿಲೀನವಲ್ಲ. ಜೊತೆಗೆ ಖಾಸಗಿ ಬಂಡವಾಳಶಾಹಿಗಳ ಸುಸ್ತಿ ಸಾಲ ವಸೂಲಾತಿ ಮಾಡುವ ನಿಟ್ಟಿನಲ್ಲಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ. ಉದ್ದೇಶಿತ ಸುಸ್ತಿದಾರರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲು ಮಾಡಿ ಅವರ ಆಸ್ತಿಗಳನ್ನು ಜಪ್ತಿ ಮಾಡಬೇಕು. ಸುಸ್ತಿದಾರರ ಹೆಸರನ್ನು ಸಾರ್ವಜನಿಕವಾಗಿ ಪ್ರಕಟ ಮಾಡಬೇಕು. ಇದು ನಮ್ಮ ಬೇಡಿಕೆ ಮತ್ತು ಇಂದಿನ ಅಗತ್ಯವಾಗಿದೆ ಎಂದರು.

ಹಾಗಾಗಿ, ಬ್ಯಾಂಕುಗಳ ಮುಚ್ಚುವಿಕೆ, ಶಾಖೆಗಳ ಮುಚ್ಚುವಿಕೆ, ಸಿಬ್ಬಂದಿಗಳ ನೇಮಕಾತಿಯಲ್ಲಿ ಕುಂಠಿತ, ಉದ್ಯೋಗದ ಅಭದ್ರತೆ ಮುಂತಾದ ಹಲವಾರು ಅಪಾಯಗಳಿಗೆ ಕಾರಣವಾಗಿರುವ ಬ್ಯಾಂಕ್ ವಿಲೀನೀಕರಣ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ತತ್‍ಕ್ಷಣವೇ ನಿಲ್ಲಿಸಬೇಕು. ಬ್ಯಾಂಕ್ ಆಫ್ ಬರೋಡಾ, ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‍ಗಳ ವಿಲೀನದ ನಿರ್ಧಾರ ಹಿಂಪಡೆಯಬೇಕು ಹಾಗೂ ಬ್ಯಾಂಕುಗಳ ಆರೋಗ್ಯಕ್ಕೆ ಹಾನಿಕಾರಕವಾಗಿ ಪರಿಣಮಿಸಿರುವ ಸುಸ್ತಿ ಸಾಲವನ್ನು ವಸೂಲಾತಿ ಮಾಡಲು ಕಠಿಣಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾ ನಿರತ ಬ್ಯಾಂಕ್ ಉದ್ಯೋಗಿಗಳು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆ.ಎನ್. ಗಿರಿರಾಜ್, ಹರೀಶ್ ಎಂ. ಪೂಜಾರ್, ಎಸ್. ಪ್ರಶಾಂತ್, ಆನಂದಮೂರ್ತಿ, ಜಿ.ರಂಗಸ್ವಾಮಿ, ಪುರುಷೋತ್ತಮ ಪಿ.ಆರ್, ವಾಗೀಶ್ ಎಂ.ಎಸ್., ವಿ. ಶಂಭುಲಿಂಗಪ್ಪ, ಕೆ.ಎನ್. ಗಿರಿರಾಜ್, ಹರೀಶ್ ಎಂ.ಪೂಜಾರ್, ಎಸ್. ಪ್ರಶಾಂತ್, ಕೆ. ವಿಶ್ವನಾಥ್ ಬಿಲ್ಲವ, ವಿಜಯಾ ಬ್ಯಾಂಕ್ ಆನಂದಮೂರ್ತಿ, ತಿಪ್ಪೇಸ್ವಾಮಿ ಹೆಚ್.ಎಸ್., ಜಿ.ರಂಗಸ್ವಾಮಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X