Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ವರ್ಷದ ಅವಧಿಯಲ್ಲಿ ಮುದ್ರಾ ಸಾಲಗಳ...

ಒಂದು ವರ್ಷದ ಅವಧಿಯಲ್ಲಿ ಮುದ್ರಾ ಸಾಲಗಳ ಎನ್‍ಪಿಎ ಪ್ರಮಾಣ ಶೇ. 92ರಷ್ಟು ಏರಿಕೆ

ವಾರ್ತಾಭಾರತಿವಾರ್ತಾಭಾರತಿ27 Dec 2018 4:42 PM IST
share
ಒಂದು ವರ್ಷದ ಅವಧಿಯಲ್ಲಿ ಮುದ್ರಾ ಸಾಲಗಳ ಎನ್‍ಪಿಎ ಪ್ರಮಾಣ ಶೇ. 92ರಷ್ಟು ಏರಿಕೆ

ಹೊಸದಿಲ್ಲಿ, ಡಿ. 27: ಪ್ರಧಾನಿ ನರೇಂದ್ರ ಮೋದಿಯ ಮಹತ್ವಾಕಾಂಕ್ಷಿ ಮುದ್ರಾ ಯೋಜನೆಯಾನ್ವಯ ಉದಯೋನ್ಮುಖ ಉದ್ದಿಮೆದಾರರಿಗೆ ನೀಡಲಾದ ಸಾಲಗಳಲ್ಲಿ  ಎನ್‍ಪಿಎ ಪ್ರಮಾಣ 2016-17ರಿಂದೀಚೆಗೆ ಒಂದು ವರ್ಷದಲ್ಲಿ ಶೇ 92ಕ್ಕೆ ಏರಿರುವುದರಿಂದ ಬ್ಯಾಂಕಿಂಗ್ ಕ್ಷೇತ್ರಕ್ಕೆ ಇನ್ನೊಂದು ಬಿಕ್ಕಟ್ಟು ಸೃಷ್ಟಿಯಾಗಲಿದೆ ಎಂದೇ ತಿಳಿಯಲಾಗಿದೆ.

ಮುದ್ರಾ ಸಾಲಗಳ ಎನ್‍ಪಿಎ ಪ್ರಮಾಣ 2016-17ರಲ್ಲಿ 3,790.35 ಕೋಟಿ ರೂ. ಆಗಿದ್ದರೆ 2017-18ರಲ್ಲಿ ಈ ಪ್ರಮಾಣ  7,277.31 ಕೋಟಿ ರೂ.ಗೆ ಏರಿದೆ. ಮುದ್ರಾ ಯೋಜನೆ ಆರಂಭಗೊಂಡು ಕೇವಲ ಮೂರು ವರ್ಷಗಳಾಗಿರುವಾಗಲೇ  ವರ್ಷದಿಂದ ವರ್ಷಕ್ಕೆ ಏರುತ್ತಾ ಹೋಗುತ್ತಿರುವ ಎನ್‍ಪಿಎ ನಿಜಕ್ಕೂ ಆತಂಕಕಾರಿ.

ಮುದ್ರಾ ಯೋಜನೆ 2015ರಲ್ಲಿ ಆರಂಭಗೊಂಡಂದಿನಿಂದ 5.72 ಕೋಟಿ ರೂ. ಸಾಲ ವಿತರಿಸಲಾಗಿದೆಯೆಂದು ವಿತ್ತ ಸಚಿವಾಲಯದ ಅಂಕಿ ಅಂಶಗಳು ತಿಳಿಸುತ್ತವೆ. ಈ ಯೋಜನೆಯ ಶೇ. 74ರಷ್ಟು ಫಲಾನುಭವಿಗಳು ಮಹಿಳೆಯರಾಗಿದ್ದರೆ, ಶೇ. 36ರಷ್ಟು ಸಾಲಗಳು ಪರಿಶಿಷ್ಟ ಜಾತಿ, ಪಂಗಡ, ಇತರ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಹೋಗಿದೆ.

ಮುದ್ರಾ ಯೋಜನೆಯಡಿ ನೀಡಲಾದ ಸಾಲದ ಮೇಲೆ ಸಾರ್ವಜನಿಕ ರಂಗದ ಬ್ಯಾಂಕುಗಳು ನಿಗಾ ಇರಿಸಿದ್ದು ಅವುಗಳ ವಸೂಲಾತಿಗೆ ಕ್ರಮ ಕೈಗೊಳ್ಳುತ್ತವೆ ಎಂದು ಸರಕಾರ ಹೇಳುತ್ತಿದೆ.

ಮಾಜಿ ಆರ್ ಬಿ ಐ ಗವರ್ನರ್ ರಘುರಾಮ್ ರಾಜನ್ ಲೋಕಸಭಾ ಅಂದಾಜು ಸಮಿತಿಗೆ ನೀಡಿದ ಟಿಪ್ಪಣಿಯಲ್ಲಿ ಮುದ್ರಾ ಸಾಲಗಳನ್ನು ಕ್ರೆಡಿಟ್ ರಿಸ್ಕ್ ಅಪಾಯಕ್ಕಾಗಿ ಕೂಲಂಕಷವಾಗಿ ಪರಿಶೀಲಿಸಬೇಕೆಂದು ಸಲಹೆ ನೀಡಿದ್ದರು.

ಮುದ್ರಾ ಯೋಜನೆಯನ್ವಯ ಮೂರು ವಿವಿಧ ವಿಭಾಗಗಳಲ್ಲಿ 10 ಲಕ್ಷ ರೂ. ತನಕದ ಸಾಲ ಮೊತ್ತವನ್ನು ಸಣ್ಣ ಉದ್ಯಮಿಗಳಿಗೆ ನೀಡಲಾಗುತ್ತದೆ. ಪ್ರಧಾನಿ ಇತ್ತೀಚೆಗೆ 59 ನಿಮಿಷಗಳ ಎಂಎಸ್‍ಎಂಇ ಸಾಲ ಯೋಜನೆಯನ್ನು ಘೋಷಿಸಿದ್ದು ಮುದ್ರಾ ಸಾಲ ನೀಡಿಕೆ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸುವ ಉದ್ದೇಶ ಇದರ ಹಿಂದಿದೆ ಎಂದೇ ತಿಳಿಯಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X