Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಧ್ವ ಜಯಂತಿ, ಮಧ್ವ ವಿವಿಗೆ ಸಹಕಾರ ನೀಡಲು...

ಮಧ್ವ ಜಯಂತಿ, ಮಧ್ವ ವಿವಿಗೆ ಸಹಕಾರ ನೀಡಲು ರಾಷ್ಟ್ರಪತಿಗೆ ಮನವಿ: ಪೇಜಾವರಶ್ರೀ

ವಾರ್ತಾಭಾರತಿವಾರ್ತಾಭಾರತಿ27 Dec 2018 8:23 PM IST
share
ಮಧ್ವ ಜಯಂತಿ, ಮಧ್ವ ವಿವಿಗೆ ಸಹಕಾರ ನೀಡಲು ರಾಷ್ಟ್ರಪತಿಗೆ ಮನವಿ: ಪೇಜಾವರಶ್ರೀ

ಉಡುಪಿ, ಡಿ. 27: ಕೇಂದ್ರ ಸರಕಾರ ಶಂಕರಾಚಾರ್ಯರ ಜಯಂತಿಯನ್ನು ಆಚರಿಸುತ್ತಿರುವಂತೆ, ದ್ವೈತ ಮತದ ಸಂಸ್ಥಾಪಕರಾದ ಶ್ರೀ ಮಧ್ವಾಚಾರ್ಯರ ‘ಮಧ್ವ ಜಯಂತಿ’ಯನ್ನು ವಿಜಯ ದಶಮಿಯ ದಿನದಂದು ‘ಭಕ್ತಿ ದಿನಾಚರಣೆ’ ಯಾಗಿ ಹಾಗೂ ರಾಮಾನುಜಾಚಾರ್ಯ ಜಯಂತಿಯನ್ನು ‘ತತ್ತ್ವಜ್ಞಾನ ದಿನ’ವೆಂದು ಆಚರಿಸಲು ಸಹಕಾರ ನೀಡುವಂತೆ ಇಂದು ಪೇಜಾವರ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದರಿಗೆ ಮನವಿ ಸಲ್ಲಿಸಲಾಗಿದೆ ಎಂದು ಪೇಜಾವರ ಮಠದ ಶ್ರೀವಿಶ್ವೇಶತೀರ್ಥರು ತಿಳಿಸಿದ್ದಾರೆ.

ಸನ್ಯಾಸ ದೀಕ್ಷೆ ಸ್ವೀಕರಿಸಿ 80 ವರ್ಷಗಳು ಪೂರ್ಣಗೊಂಡ ಪ್ರಯುಕ್ತ ಗೌರವ ಸಲ್ಲಿಸಲು ಆಗಮಿಸಿದ ರಾಷ್ಟ್ರಪತಿಗಳು ಉಡುಪಿಯಿಂದ ನಿರ್ಗಮಿಸಿದ ಬಳಿಕ ಪೇಜಾವರ ಮಠದಲ್ಲಿ ಸುದ್ದಿಗಾರರನ್ನು ಭೇಟಿಯಾದ ಪೇಜಾವರಶ್ರೀಗಳು ಈ ವಿಷಯ ತಿಳಿಸಿದರು.

ಅಲ್ಲದೇ ಮಧ್ವಾಚಾರ್ಯರು ಜನಿಸಿದ ಕುಂಜಾರುಗಿರಿ ಸಮೀಪದ ಪಾಜಕ ಕ್ಷೇತ್ರದಲ್ಲಿ ಮಧ್ವ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು ಸಿದ್ಧತೆಗಳು ನಡೆಯುತಿದ್ದು, ಇದಕ್ಕೂ ಅವರ ಸಹಕಾರವನ್ನು ಕೋರಲಾಗಿದೆ ಎಂದು ಪೇಜಾವರಶ್ರೀ ನುಡಿದರು.

ಪಾಜಕದಲ್ಲಿ ಪೇಜಾವರ ಮಠದ ವತಿಯಿಂದ ಎಲ್‌ಕೆಜಿಯಿಂದ ಪದವಿವರೆಗೆ ವಿದ್ಯಾಬ್ಯಾಸಕ್ಕಾಗಿ ವಸತಿ ಶಾಲೆಯೊಂದನ್ನು ನಿರ್ಮಿಸಲಾಗಿದೆ. ಈಗಾಗಲೇ ಅಲ್ಲಿ ಹೈಸ್ಕೂಲ್‌ವರೆಗೆ ತರಗತಿಗಳು ನಡೆಯುತ್ತಿದೆ. ಏಳು ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದರು.

ಪಾಜಕದಲ್ಲಿ ಒಂದೇ ಕಡೆಯಲ್ಲಿ ಲೌಕಿಕ ಮತ್ತು ಧಾರ್ಮಿಕ ಹಾಗೂ ಆಧ್ಯಾತ್ಮಿಕ ಶಿಕ್ಷಣಕ್ಕೆ ಒತ್ತು ನೀಡಲು ಮಧ್ವಾಚಾರ್ಯ ವಿವಿಯನ್ನು ಸ್ಥಾಪಿಸಲು ಚಿಂತನೆ ನಡೆಯುತ್ತಿದೆ. ಅದಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ರಾಷ್ಟ್ರಪತಿಗಳಿಗೆ ಕೋರಿಕೆ ಸಲ್ಲಿಸಲಾಗಿದೆ ಎಂದು ಪೇಜಾವರಶ್ರೀಗಳು ಹೇಳಿದರು.

ರಾಮಮಂದಿರ: ವಿಶ್ವ ಹಿಂದೂ ಪರಿಷತ್ ಈಗಾಗಲೇ ರಾಮ ಮಂದಿರ ನಿರ್ಮಾಣದ ಕುರಿತು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿರುವುದರಿಂದ ನಾನು ಇಲ್ಲಿ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ. ಫೆಬ್ರವರಿ ತಿಂಗಳಲ್ಲಿ ಕುಂಭಮೇಳದ ವೇಳೆ ನಡೆಯುವ ಧರ್ಮಸಂಸದ್‌ನಲ್ಲಿ ಈ ಬಗ್ಗೆ ಸಾಧು-ಸಂತರು ತೀರ್ಮಾನ ತೆಗೆದುಕೊಳ್ಳುವರು ಎಂದರು.

ಕೇಂದ್ರ ಸರಕಾರ ರಾಮಮಂದಿರದ ಕುರಿತು ಸುಗ್ರೀವಾಜ್ಞೆ ಹೊರಡಿಸಿದರೆ ಅದರಿಂದ ಅನುಕೂಲಕ್ಕಿಂತ, ಅನಾನೂಕೂಲವೇ ಅಧಿಕ ಎಂದು ಹಿರಿಯ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ಬಗ್ಗೆ ಮರು ಚಿಂತನೆ ನಡೆದಿದೆ ಎಂದರು.

ಉಮಾಭಾರತಿಗೆ ವಿಪ್ ಅಡ್ಡಿ: ರಾಷ್ಟ್ರಪತಿಗಳು ಉಡುಪಿಗೆ ಬರಲು ಪ್ರಮುಖ ಕಾರಣರಾದ ಶಿಷ್ಯೆ ಉಮಾಭಾರತಿ ಇಂದು ಗೈರುಹಾಜರಾದ ಕುರಿತು ಪ್ರಶ್ನಿಸಿದಾಗ, ಗುರುವಾರ ಸಂಸತ್‌ನಲ್ಲಿ ತ್ರಿವಳಿ ತಲಾಕ್ ಮಸೂದೆ ಮಂಡನೆಯಾಗಲಿದ್ದು, ಉಮಾಭಾರತಿ ಅವರಿಗೆ ಭಾಗವಹಿಸಲು ವಿಪ್ ನೀಡಲಾಗಿದೆ. ಹೀಗಾಗಿ ರಾಷ್ಟ್ರಪತಿಗಳ ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದರು.

ಬ್ರಾಹ್ಮಣರೊಂದಿಗೂ ಭೋಜನವಿಲ್ಲ

ದಲಿತರಾಗಿರುವ ರಾಷ್ಟ್ರಪತಿಗಳ ಜೊತೆ ಪೇಜಾವರ ಶ್ರೀಗಳು ಊಟ ಮಾಡಲಿ ಎಂಬ ಪ್ರಗತಿಪರರ ಆಗ್ರಹದ ಕುರಿತು ಪ್ರಶ್ನಿಸಿದಾಗ, ಉತ್ತರ ನೀಡಿದ ಶ್ರೀಗಳು, ಸನ್ಯಾಸಿಗಳು ಬ್ರಾಹ್ಮಣರೊಂದಿಗೂ ಊಟ ಮಾಡುವುದಿಲ್ಲ. ಸನ್ಯಾಸಿ ಗಳಿಗೆ ಪೂಜೆ, ನಿತ್ಯಾನುಷ್ಠಾನ, ಭೋಜನ ಸ್ವೀಕಾರ ಸೇರಿದಂತೆ ಎಲ್ಲವಕ್ಕೂ ಪರಂಪರಾಗತ ನಿಯಮಗಳಿವೆ. ಹೀಗಾಗಿ ನಾವು ಬ್ರಾಹ್ಮಣರೊಂದಿಗೆ ಬೀಕ್ಷೆ ಸ್ವೀಕರಿಸುವುದಿಲ್ಲ ಎಂದರು. ಇದನ್ನು ತಿಳಿಯದವರು ಏನೇನೊ ಮಾತನಾಡುತ್ತಾರೆ ಎಂದು ಪೇಜಾವರಶ್ರೀ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X