Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಡಿ.29, 30ರಂದು ಸಾವಯವ...

ಚಿಕ್ಕಮಗಳೂರು: ಡಿ.29, 30ರಂದು ಸಾವಯವ ಸಿರಿಧಾನ್ಯ ಮೇಳ

ವಾರ್ತಾಭಾರತಿವಾರ್ತಾಭಾರತಿ27 Dec 2018 10:42 PM IST
share
ಚಿಕ್ಕಮಗಳೂರು: ಡಿ.29, 30ರಂದು ಸಾವಯವ ಸಿರಿಧಾನ್ಯ ಮೇಳ

ಚಿಕ್ಕಮಗಳೂರು, ಡಿ.27: ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವುದು, ಸಾವಯವ ಮಾರುಕಟ್ಟೆ ವಿಸ್ತರಣೆ ಮಾಡುವುದು ಸೇರಿದಂತೆ ಹಾಗೂ ಸಾವಯವ ಕೃಷಿಕರು, ಉದ್ದಿಮೆದಾರರು ಮತ್ತು ಗ್ರಾಹಕರೊಂದಿಗೆ ಸಂಪರ್ಕ ಏರ್ಪಡಿಸುವುದೇ ಸಾವಯವ ಸಿರಿಧಾನ್ಯ ಕೃಷಿ ಮೇಳದ ಉದ್ದೇಶವಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ.ಸೋಮಸುಂದರ್ ತಿಳಿಸಿದ್ದಾರೆ.

ಗುರುವಾರ ಜಿಲ್ಲಾ ಕೃಷಿ ಇಲಾಖಾ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಡಿ.29 ಮತ್ತು 30ರಂದು ನಗರದ ಐಡಿಎಸ್‍ಜ ಕಾಲೇಜು ಮೈದಾನದಲ್ಲಿ ಸಾವಯವ ಸಿರಿಧಾನ್ಯ ಮೇಳ ನಡೆಯಲಿದ್ದು, ಮೇಳದ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ ಎಂದರು.

ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಲಿದ್ದು, ಮೇಳದ ಅಂಗವಾಗಿ ನಡೆಯುವ ವಸ್ತು ಪ್ರದರ್ಶನವನ್ನು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಉದ್ಘಾಟಿಸಲಿದ್ದಾರೆ. ಶಾಸಕ ಸಿ.ಟಿ.ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿಧಾನಪರಿಷತ್ ಉಪ ಸಭಾಪತಿ ಧರ್ಮೇಗೌಡ ಹಸ್ತಪ್ರತಿಗಳ ಬಿಡುಗಡೆ ಮಾಡಲಿದ್ದಾರೆ. ಜಿಲ್ಲೆಯ ಐದೂ ಕ್ಷೇತ್ರಗಳ ಶಾಸಕರು, ಸಂಸದರು, ಜಿಲ್ಲಾ ಪಂಚಾಯತ್, ತಾಪಂ ಅಧ್ಯಕ್ಷರು ಹಾಗೂ ಇತರ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇಳದ ಅಂಗವಾಗಿ ಎರಡು ದಿನಗಳ ಕಾಲ ಸಾವಯವ ಕೃಷಿ ಸಂಬಂಧ ವಿವಿಧ ಗೋಷ್ಠಿಗಳು, ಸಾವಯವ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮ, ಸಾವಯವ ಮಳಿಗೆಗಳು ಮೇಳದ ಆಕರ್ಷಣೆಯಾಗಿದ್ದು, ಜಿಲ್ಲಾದ್ಯಂತ ಸುಮಾರು 3 ಸಾವಿರ ಕೃಷಿಕರು ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸಾವಯವ ಉತ್ಪನ್ನಗಳು ರಾಸಾಯನಿಕ ಮುಕ್ತವಾಗಿರುವುದರಿಂದ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮವನ್ನುಂಟು ಮಾಡುತ್ತವೆ. ಸಿರಿಧಾನ್ಯಗಳಲ್ಲಿ ನಾರಿನಾಂಶ ಹೆಚ್ಚಿದ್ದು, ಮಾನವನ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಲಭ್ಯವಾಗುತ್ತವೆ. ಅತ್ಯಂತ ಕಡಿಮೆ ನೀರನ್ನು ಬಳಸಿ ಸಿರಿಧಾನ್ಯಗಳಾದ ಹಾರಕ, ನವಣೆ, ಸಜ್ಜೆ, ಬರಗು, ಕೊರಲೆ, ಸಾಮೆ, ಊದಲು ಮತ್ತಿತರ ಬೆಳೆಗಳನ್ನು ಬೆಳೆಯಲು ಸಾಧ್ಯವಿದೆ. ಈ ಬಗ್ಗೆ ಸಾವಯವ ಮೇಳದಲ್ಲಿ ಜಾಗೃತಿ ಮೂಡಿಸಲಾಗುವುದು. ಮೇಳದಲ್ಲಿ ಸಾವಯವ ಕೃಷಿಕರು, ಮಾರಾಟಗಾರರು ವಿವಿಧ ಮಳಿಗೆಗಳ ಮೂಲಕ ಭಾಗವಹಿಸಲಿದ್ದು, ಗ್ರಾಹಕರಿಗೆ ಕೊಳ್ಳಲು ಅವಕಾಶ ಒದಗಿಸಲಾಗಿದೆ. ಸರಕಾರದಿಂದ ಸಾವಯವ ಕೃಷಿಗೆ ದೊರೆಯುವ ಸೌಲಭ್ಯ, ಸಬ್ಸಿಡಿಗಳ ಮಾಹಿತಿ ನೀಡಲಾಗುವುದು ಎಂದ ಅವರು, ಸಿರಿಧಾನ್ಯಗಳ ಬಳಸಿ ವಿಶೇಷ ಖಾದ್ಯ ತಯಾರಿ ತರಬೇತಿ ಹಾಗೂ ಸ್ಪರ್ಧೆಗಳೊಂದಿಗೆ ಶಾಲಾ ಮಕ್ಕಳಿಗೆ ಸಿರಿಧಾನ್ಯಗಳ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ಎರಡು ದಿನಗಳ ಕಾಲ ನಡೆಯುವ ಮೇಳದಲ್ಲಿ ಸಿರಿಧಾನ್ಯಗಳ ಮಹತ್ವಗಳು, ಸವಾಲುಗಳು, ದೇಶೀ ತಳಿಗಳ ಸಂರಕ್ಷಣೆ, ಸಿರಿಧಾನ್ಯಗಳ ಉತ್ಪಾದನೆಯಲ್ಲಿ ತಾಂತ್ರಿಕತೆ ಮೊದಲಾದ ವಿಚಾರಗಳ ಬಗ್ಗೆ ವಿವಿಧ ಗೋಷ್ಠಿ ನಡೆಯಲಿದ್ದು, ವಿವಿಧ ಗೋಷ್ಠಿಯಲ್ಲಿ ಬೆಂಗಳೂರು ಕೃಷಿ ವಿವಿಯ ವಿಶ್ರಾಂತ ಕುಲಪತಿ ಡಾ.ನಾರಾಯಣ ಗೌಡ, ಏಮ್ಸ್ ಪ್ರಾಧ್ಯಾಪಕ ಡಾ.ವಸಂತ್‍ ಕುಮಾರ್, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಯ ಡಾ.ನಾರಾಯಣ್ ಎಸ್.ಮಾವರ್‍ಕರ್, ಮೈಸೂರು ಸಾವಯವ ಕೃಷಿ ಸಂಶೋಧನಾ ಕೇಂದ್ರದ ಪ್ರೊ.ಗೋವಿಂದರಾಜು, ಶಿವಮೊಗ್ಗದ ಡಾ.ಉಲ್ಲಸ್ ಸೇರಿದಂತೆ ಸಾವಯವ ಕೃಷಿಕರಾದ ಅರವಿಂದ್ ಭೂತನಕಾಡು, ಚಂದ್ರಶೇಖರ್ ನಾರಾಯಣಪುರ, ಈಶ್ವರಪ್ಪ, ವೀರಣ್ಣ ಮತ್ತಿತರರು ವಿಚಾರ ಮಂಡಿಸಲಿದ್ದಾರೆಂದರು.

ಸುದ್ದಿಗೋಷ್ಠಿಯಲ್ಲಿ ತರೀಕೆರೆ ಕೃಷಿ ಇಲಾಖೆ ವಿಭಾಗದ ಉಪ ನಿರ್ದೇಶಕ ಕೃಷ್ಣಮೂರ್ತಿ, ಚಿಕ್ಕಮಗಳೂರು ವಿಭಾಗದ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X